<p><strong>ಮಹಾಲಿಂಗಪುರ</strong>: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ಪಟ್ಟಣದ ಅಕ್ಕಿಮರಡಿ-ಢವಳೇಶ್ವರ ಕೂಡು ರಸ್ತೆಯ ಶಿವಾಜಿ ವೃತ್ತದಲ್ಲಿ ಮರಾಠ ಸಮಾಜ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಮುಖಂಡ ರವಿ ಜವಳಗಿ ಮಾತನಾಡಿ, ‘ಶಾಂತಿಯುತವಾಗಿ ನಡೆದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಪೂರ್ವ ನಿಯೋಜಿತವಾಗಿ ಈ ಕೃತ್ಯ ನಡೆದಿದೆ. ಕಲ್ಲು ತೂರಾಟ ಮಾಡಿದ ಎಲ್ಲರನ್ನೂ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಮಹೇಶ ಜಾಧವ, ಮಲ್ಲಪ್ಪ ಅಂಬನ್ನಗೋಳ, ಸುರೇಶ ಜಾಧವ, ಅರ್ಜುನ ಮೋಪಗಾರ, ಜ್ಯೋತಿಬಾ ಪವಾರ, ನಾಗಪ್ಪ ಪವಾರ, ಭೀಮಶಿ ಮೋಪಗಾರ, ವಸಂತ ನೂಲಿ, ಗೋವಿಂದ ಘೋರ್ಪಡೆ, ನಟರಾಜ ಸಬಕಾಳೆ, ವಿ.ಎಸ್.ಘೋರ್ಪಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ</strong>: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ಪಟ್ಟಣದ ಅಕ್ಕಿಮರಡಿ-ಢವಳೇಶ್ವರ ಕೂಡು ರಸ್ತೆಯ ಶಿವಾಜಿ ವೃತ್ತದಲ್ಲಿ ಮರಾಠ ಸಮಾಜ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಮುಖಂಡ ರವಿ ಜವಳಗಿ ಮಾತನಾಡಿ, ‘ಶಾಂತಿಯುತವಾಗಿ ನಡೆದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಪೂರ್ವ ನಿಯೋಜಿತವಾಗಿ ಈ ಕೃತ್ಯ ನಡೆದಿದೆ. ಕಲ್ಲು ತೂರಾಟ ಮಾಡಿದ ಎಲ್ಲರನ್ನೂ ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಮಹೇಶ ಜಾಧವ, ಮಲ್ಲಪ್ಪ ಅಂಬನ್ನಗೋಳ, ಸುರೇಶ ಜಾಧವ, ಅರ್ಜುನ ಮೋಪಗಾರ, ಜ್ಯೋತಿಬಾ ಪವಾರ, ನಾಗಪ್ಪ ಪವಾರ, ಭೀಮಶಿ ಮೋಪಗಾರ, ವಸಂತ ನೂಲಿ, ಗೋವಿಂದ ಘೋರ್ಪಡೆ, ನಟರಾಜ ಸಬಕಾಳೆ, ವಿ.ಎಸ್.ಘೋರ್ಪಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>