<p><strong>ರಬಕವಿ ಬನಹಟ್ಟಿ:</strong> ಸಮೀಪದ ಕೃಷ್ಣಾ ನದಿ ಮಧ್ಯ ಭಾಗದಲ್ಲಿಯ ಪಿಲ್ಲರ್ ನಂ. 7 ಮತ್ತು 8 ರ ಕಾಮಗಾರಿಯನ್ನು ಎರಡು ಮೂರು ದಿನಗಳಲ್ಲಿ ಮುಕ್ತಾಯಗೊಳಿಸುವಂತೆ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಸ್ಥಳದಲ್ಲಿದ್ದ ಗುತ್ತಿಗೆದಾರರಿಗೆ ಮತ್ತು ಎಂಜಿನಿಯರ್ಗೆ ತಿಳಿಸಿದರು.</p>.<p>ಅವರು ಶುಕ್ರವಾರ ಸಮೀಪದ ಕೃಷ್ಣಾ ನದಿಗೆ ನಿರ್ಮಾಣ ಮಾಡುತ್ತಿರುವ ಮಹೀಷವಾಡಗಿ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದರು.</p>.<p>ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗುತ್ತದೆ ಮತ್ತು ರಾಜಾಪುರ ಜಲಾಶಯದಿಂದಲೂ ನೀರು ಬಿಡುವ ಸಾಧ್ಯತೆ ಇರುವುದರಿಂದ ನದಿ ಮಧ್ಯದಲ್ಲಿಯ ಪಿಲ್ಲರ್ಗಳ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ತಿಳಿಸಿದರು.</p>.<p>ಕಳೆದ ಹತ್ತು ವರ್ಷಗಳಿಂದ ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಈಗ ಸಾರ್ವಜನಿಕರ ಬೆಂಬಲ ಮತ್ತು ಹೆಚ್ಚಿನ ಅನುದಾನ ಬಿಡುಗಡೆಯಾಗಿದ್ದರಿಂದ ಕಾಮಗಾರಿಯು ತೀವ್ರತೆ ಪಡೆದುಕೊಂಡಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ತಿಳಿಸಿದರು.</p>.<p>ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ಮತ್ತು ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ ಹಾಗೂ ಎಂಜಿನಿಯರ್ಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-19-1748304703</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ:</strong> ಸಮೀಪದ ಕೃಷ್ಣಾ ನದಿ ಮಧ್ಯ ಭಾಗದಲ್ಲಿಯ ಪಿಲ್ಲರ್ ನಂ. 7 ಮತ್ತು 8 ರ ಕಾಮಗಾರಿಯನ್ನು ಎರಡು ಮೂರು ದಿನಗಳಲ್ಲಿ ಮುಕ್ತಾಯಗೊಳಿಸುವಂತೆ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಸ್ಥಳದಲ್ಲಿದ್ದ ಗುತ್ತಿಗೆದಾರರಿಗೆ ಮತ್ತು ಎಂಜಿನಿಯರ್ಗೆ ತಿಳಿಸಿದರು.</p>.<p>ಅವರು ಶುಕ್ರವಾರ ಸಮೀಪದ ಕೃಷ್ಣಾ ನದಿಗೆ ನಿರ್ಮಾಣ ಮಾಡುತ್ತಿರುವ ಮಹೀಷವಾಡಗಿ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದರು.</p>.<p>ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗುತ್ತದೆ ಮತ್ತು ರಾಜಾಪುರ ಜಲಾಶಯದಿಂದಲೂ ನೀರು ಬಿಡುವ ಸಾಧ್ಯತೆ ಇರುವುದರಿಂದ ನದಿ ಮಧ್ಯದಲ್ಲಿಯ ಪಿಲ್ಲರ್ಗಳ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ತಿಳಿಸಿದರು.</p>.<p>ಕಳೆದ ಹತ್ತು ವರ್ಷಗಳಿಂದ ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಈಗ ಸಾರ್ವಜನಿಕರ ಬೆಂಬಲ ಮತ್ತು ಹೆಚ್ಚಿನ ಅನುದಾನ ಬಿಡುಗಡೆಯಾಗಿದ್ದರಿಂದ ಕಾಮಗಾರಿಯು ತೀವ್ರತೆ ಪಡೆದುಕೊಂಡಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ತಿಳಿಸಿದರು.</p>.<p>ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ಮತ್ತು ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ ಹಾಗೂ ಎಂಜಿನಿಯರ್ಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-19-1748304703</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>