<p><strong>ಬಾಗಲಕೋಟೆ:</strong> ನಗರದ ವಿವಿಧೆಡೆ ಶಾಲಾ–ಕಾಲೇಜುಗಳಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.</p>.<p>ಬಿವಿವಿಎಸ್ ಆಯುರ್ವೇದ ಕಾಲೇಜು: ಕಾಲೇಜಿನಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಅಂಗವಾಗಿ ಪೂಜೆ ಮಾಡಿದರು. ಧ್ವನಂತರಿಗೂ ಪೂಜೆ ಸಲ್ಲಿಸಲಾಯಿತು.</p>.<p>ರಂಗೋಲಿ, ಗಾಳಿಪಟ ಹಾಗೂ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ, ಪ್ರಾಚಾರ್ಯ ಮಲ್ಲಿಕಾರ್ಜುನ ಹಿರೇಮಠ ಉಪಸ್ಥಿತರಿದ್ದರು.</p>.<p>ಎಚ್ಎಸ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ‘ಸಂಕ್ರಾಂತಿ ನಾಡಿನ ಸಾಂಸ್ಕೃತಿಕ ಹಬ್ಬವಾಗಿದೆ. ಆಧುನಿಕ ಬದುಕಿನ ಈ ಕಾಲಘಟ್ಟದಲ್ಲಿ ದೇಸಿ ಸಂಸ್ಕೃತಿಯನ್ನು ಬಿಂಬಿಸುವ ಹಬ್ಬಗಳನ್ನು ಆಚರಿಸುವುದು ಅಗತ್ಯವಾಗಿದೆ ಎಂದು ಎಸ್.ಎನ್.ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ ಹೇಳಿದರು.</p>.<p>ಆಸ್ಪತ್ರೆಯ ಪ್ರೊಜೆಕ್ಟ್ ಮ್ಯಾನೇಜರ್ ರಾಜೇಂದ್ರ ಹಿರೇಮಠ, ಸತ್ಯನಾರಾಯಣ ರೆಡ್ಡಿ, ಮಧುಮತಿ, ಶ್ರೇಯಾ, ನಿತೀಶ ಉಳ್ಳಾಗಡ್ಡಿ ಉಪಪ್ರಾಚಾರ್ಯ ಡಾ.ಸಿ.ಎಸ್.ಹಿರೇಮಠ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಮತ್ತಿತರರು ಭಾಗವಹಿಸಿದ್ದರು.</p>.<p>ವಾಗ್ದೇವಿ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ: ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಶಾಲೆಯಲ್ಲಿ ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳೇ ಗಾಳಿಪಟ ಸಿದ್ಧಪಡಿಸಿ ಹಾರಿಸಿ ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ನಗರದ ವಿವಿಧೆಡೆ ಶಾಲಾ–ಕಾಲೇಜುಗಳಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸಲಾಯಿತು.</p>.<p>ಬಿವಿವಿಎಸ್ ಆಯುರ್ವೇದ ಕಾಲೇಜು: ಕಾಲೇಜಿನಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಅಂಗವಾಗಿ ಪೂಜೆ ಮಾಡಿದರು. ಧ್ವನಂತರಿಗೂ ಪೂಜೆ ಸಲ್ಲಿಸಲಾಯಿತು.</p>.<p>ರಂಗೋಲಿ, ಗಾಳಿಪಟ ಹಾಗೂ ವೇಷಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸಜ್ಜನ, ಪ್ರಾಚಾರ್ಯ ಮಲ್ಲಿಕಾರ್ಜುನ ಹಿರೇಮಠ ಉಪಸ್ಥಿತರಿದ್ದರು.</p>.<p>ಎಚ್ಎಸ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ‘ಸಂಕ್ರಾಂತಿ ನಾಡಿನ ಸಾಂಸ್ಕೃತಿಕ ಹಬ್ಬವಾಗಿದೆ. ಆಧುನಿಕ ಬದುಕಿನ ಈ ಕಾಲಘಟ್ಟದಲ್ಲಿ ದೇಸಿ ಸಂಸ್ಕೃತಿಯನ್ನು ಬಿಂಬಿಸುವ ಹಬ್ಬಗಳನ್ನು ಆಚರಿಸುವುದು ಅಗತ್ಯವಾಗಿದೆ ಎಂದು ಎಸ್.ಎನ್.ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ.ಭುವನೇಶ್ವರಿ ಯಳಮಲಿ ಹೇಳಿದರು.</p>.<p>ಆಸ್ಪತ್ರೆಯ ಪ್ರೊಜೆಕ್ಟ್ ಮ್ಯಾನೇಜರ್ ರಾಜೇಂದ್ರ ಹಿರೇಮಠ, ಸತ್ಯನಾರಾಯಣ ರೆಡ್ಡಿ, ಮಧುಮತಿ, ಶ್ರೇಯಾ, ನಿತೀಶ ಉಳ್ಳಾಗಡ್ಡಿ ಉಪಪ್ರಾಚಾರ್ಯ ಡಾ.ಸಿ.ಎಸ್.ಹಿರೇಮಠ, ವೈದ್ಯಕೀಯ ಅಧೀಕ್ಷಕ ಡಾ.ಶ್ರೀರಾಮ ಕೋರಾ ಮತ್ತಿತರರು ಭಾಗವಹಿಸಿದ್ದರು.</p>.<p>ವಾಗ್ದೇವಿ ಇಂಗ್ಲಿಷ್ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ: ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಶಾಲೆಯಲ್ಲಿ ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳೇ ಗಾಳಿಪಟ ಸಿದ್ಧಪಡಿಸಿ ಹಾರಿಸಿ ಸಂಭ್ರಮಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>