<p><strong>ಜಮಖಂಡಿ</strong>: 'ಸರ್ಕಾರವು ಶೈಕ್ಷಣಿಕ ಅಭಿವೃದ್ದಿಗೆ ಬಿಸಿಯೂಟ, ಪುಸ್ತಕ, ಸಮವಸ್ತ್ರ ಸೇರಿದಂತೆ ಹಲವು ಯೋಜನೆಯೊಂದಿಗೆ ವಿಶೇಷ ಅನುದಾನ ನೀಡುತ್ತಿದೆ ವಿದ್ಯಾರ್ಥಿಗಳು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದುಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ನಂ-1 ರಲ್ಲಿ ಮಂಗಳವಾರ ಗಣಕ ಶಿಕ್ಷಣ ಕೇಂದ್ರ ಉದ್ಘಾಟಿಸಿ ಮಾತನಾಡಿ, ‘ಮಕ್ಕಳು ಧರ್ಮ ಸಂಸ್ಕೃತಿ ಪರಂಪರೆಯ ಜೊತೆಗೆ ಸಮಯ ಪ್ರಜ್ಞೆಯನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ರಮೇಶ ಅವಟಿ ಮಾತನಾಡಿ, ವಿದ್ಯಾರ್ಥಿಗಳು ಗಣಕ ಯಂತ್ರಗಳ ಉಪಯೋಗ ಮಾಡಿಕೊಂಡು ಹೆಚ್ಚಿನ ಜ್ಞಾನ ಸಂಪಾದಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತೀರ್ಣರಾಗಬೇಕು’ ಎಂದು ಹೇಳಿದರು.</p>.<p>ಶಾಲೆಯ ಹಳೆ ವಿದ್ಯಾರ್ಥಿಗಳಾದ ಪತ್ರಕರ್ತ ಮಲ್ಲಿಕಾರ್ಜುನ ಮಠ, ಶಿವಾನಂದ ಕೊಣ್ಣೂರ, ಶಿಕ್ಷಕಿ ದಾನಮ್ಮ ಪಂಚಕಟ್ಟಿಮಠ ಮಾತನಾಡಿದರು.</p>.<p> ಎಸ್ಡಿಎಂಸಿ ಅಧ್ಯಕ್ಷ ಆಶ್ರಪಅಲಿ ಖಾದ್ರಿ, ಪ್ರಕಾಶ ಅರಕೇರಿ, ಎಂ.ಐ.ಮಮದಾಪೂರ ಇದ್ದರು. ಎನ್.ಆರ್.ಕುಲಕರ್ಣಿ ಸ್ವಾಗತಿಸಿದರು, ಶಿಕ್ಷಕ ಪಿ.ಆರ್. ಜಕಾತಿ ನಿರೂಪಿಸಿದರು. ಶಿಕ್ಷಕಿ ಎಲ್.ಎಸ್.ಮೊಕಾಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮಖಂಡಿ</strong>: 'ಸರ್ಕಾರವು ಶೈಕ್ಷಣಿಕ ಅಭಿವೃದ್ದಿಗೆ ಬಿಸಿಯೂಟ, ಪುಸ್ತಕ, ಸಮವಸ್ತ್ರ ಸೇರಿದಂತೆ ಹಲವು ಯೋಜನೆಯೊಂದಿಗೆ ವಿಶೇಷ ಅನುದಾನ ನೀಡುತ್ತಿದೆ ವಿದ್ಯಾರ್ಥಿಗಳು ಅವುಗಳ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದುಎಂದು ಶಾಸಕ ಜಗದೀಶ ಗುಡಗುಂಟಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ನಂ-1 ರಲ್ಲಿ ಮಂಗಳವಾರ ಗಣಕ ಶಿಕ್ಷಣ ಕೇಂದ್ರ ಉದ್ಘಾಟಿಸಿ ಮಾತನಾಡಿ, ‘ಮಕ್ಕಳು ಧರ್ಮ ಸಂಸ್ಕೃತಿ ಪರಂಪರೆಯ ಜೊತೆಗೆ ಸಮಯ ಪ್ರಜ್ಞೆಯನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ರಮೇಶ ಅವಟಿ ಮಾತನಾಡಿ, ವಿದ್ಯಾರ್ಥಿಗಳು ಗಣಕ ಯಂತ್ರಗಳ ಉಪಯೋಗ ಮಾಡಿಕೊಂಡು ಹೆಚ್ಚಿನ ಜ್ಞಾನ ಸಂಪಾದಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತೀರ್ಣರಾಗಬೇಕು’ ಎಂದು ಹೇಳಿದರು.</p>.<p>ಶಾಲೆಯ ಹಳೆ ವಿದ್ಯಾರ್ಥಿಗಳಾದ ಪತ್ರಕರ್ತ ಮಲ್ಲಿಕಾರ್ಜುನ ಮಠ, ಶಿವಾನಂದ ಕೊಣ್ಣೂರ, ಶಿಕ್ಷಕಿ ದಾನಮ್ಮ ಪಂಚಕಟ್ಟಿಮಠ ಮಾತನಾಡಿದರು.</p>.<p> ಎಸ್ಡಿಎಂಸಿ ಅಧ್ಯಕ್ಷ ಆಶ್ರಪಅಲಿ ಖಾದ್ರಿ, ಪ್ರಕಾಶ ಅರಕೇರಿ, ಎಂ.ಐ.ಮಮದಾಪೂರ ಇದ್ದರು. ಎನ್.ಆರ್.ಕುಲಕರ್ಣಿ ಸ್ವಾಗತಿಸಿದರು, ಶಿಕ್ಷಕ ಪಿ.ಆರ್. ಜಕಾತಿ ನಿರೂಪಿಸಿದರು. ಶಿಕ್ಷಕಿ ಎಲ್.ಎಸ್.ಮೊಕಾಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>