<p>ಬಾಗಲಕೋಟೆ: ಮಲಪ್ರಭಾ ನದಿ ಪ್ರವಾಹದಿಂದ ಬಾಧಿತವಾಗಿದ್ದ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಣ್ಣು ಕುಸಿದು ಭಾನುವಾರ ಮುಂಜಾನೆ ಎರಡು ಲಾರಿಗಳು ಸಿಲುಕಿಕೊಂಡಿವೆ. ಇದರಿಂದ ಹೆದ್ದಾರಿಯಲ್ಲಿ ಭಾರಿ ವಾಹನ ಸಂಚಾರ ಸ್ಥಗಿತಗೊಂಡಿದೆ.</p>.<p>ಕಾರು, ಟಂಟಂ, ಬೈಕ್ ನಂತಹ ಲಘು ವಾಹನಗಳು ಮಾತ್ರ ಓಡಾಟ ನಡೆಸಿವೆ.</p>.<p>ಮಲಪ್ರಭಾ ನದಿ ನೆರೆಯಿಂದ ಆವೃತವಾಗಿದ್ದ ಹೆದ್ದಾರಿಯಲ್ಲಿ ಕಳೆದ ಮಂಗಳವಾರ ನಸುಕಿನಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಎರಡು ದಿನಗಳ ನಂತರ ನೆರೆ ಇಳಿದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿತ್ತು. ಶನಿವಾರದಿಂದ ಮತ್ತೆ ಸಂಚಾರ ಆರಂಭವಾಗಿತ್ತು.</p>.<p><strong>ಗ್ರಾಮಸ್ಥರ ಆಕ್ರೋಶ</strong>: ಗದಗ ಜಿಲ್ಲೆಯ ಕೊಣ್ಣೂರು ಹಾಗೂ ಬಾದಾಮಿ ತಾಲ್ಲೂಕಿನ ಗೋವನಕೊಪ್ಪ ನಡುವಿನ ರಾಷ್ಟ್ರೀಯ ಹೆದ್ದಾರಿ ಹಳೆಯ ಸೇತುವೆ ಪದೇ ಪದೇ ಮುಳುಗಡೆಯಾಗುತ್ತಿದ್ದ ಕಾರಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ₹37 ಕೋಟಿ ವೆಚ್ಚದಲ್ಲಿ 2017ರಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಿದೆ. ಅವೈಜ್ಞಾನಿಕ ಕಾಮಗಾರಿ ಪರಿಣಾಮ ಸೇತುವೆಯಿಂದ ಸಂಚಾರ ಸಮಸ್ಯೆ ಪರಿಹಾರವಾಗುವ ಬದಲಿಗೆ ಉಲ್ಬಣಗೊಂಡಿದೆ. ಪ್ರವಾಹದ ನೀರು ಕೊಣ್ಣೂರು ಗ್ರಾಮದೊಳಗೆ ನುಗ್ಗಿ ಹಾವಳಿ ಮಾಡುತ್ತಿದೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಹೊಸ ಸೇತುವೆಯನ್ನು ಗ್ರಾಮದ ಹಳೆಯ ಬಸ್ ನಿಲ್ದಾಣದವರೆಗೂ ವಿಸ್ತರಿಸಲು ಆಗ್ರಹಿಸಿ ಶನಿವಾರ ಪ್ರತಿಭಟನೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಮಲಪ್ರಭಾ ನದಿ ಪ್ರವಾಹದಿಂದ ಬಾಧಿತವಾಗಿದ್ದ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಣ್ಣು ಕುಸಿದು ಭಾನುವಾರ ಮುಂಜಾನೆ ಎರಡು ಲಾರಿಗಳು ಸಿಲುಕಿಕೊಂಡಿವೆ. ಇದರಿಂದ ಹೆದ್ದಾರಿಯಲ್ಲಿ ಭಾರಿ ವಾಹನ ಸಂಚಾರ ಸ್ಥಗಿತಗೊಂಡಿದೆ.</p>.<p>ಕಾರು, ಟಂಟಂ, ಬೈಕ್ ನಂತಹ ಲಘು ವಾಹನಗಳು ಮಾತ್ರ ಓಡಾಟ ನಡೆಸಿವೆ.</p>.<p>ಮಲಪ್ರಭಾ ನದಿ ನೆರೆಯಿಂದ ಆವೃತವಾಗಿದ್ದ ಹೆದ್ದಾರಿಯಲ್ಲಿ ಕಳೆದ ಮಂಗಳವಾರ ನಸುಕಿನಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಎರಡು ದಿನಗಳ ನಂತರ ನೆರೆ ಇಳಿದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿತ್ತು. ಶನಿವಾರದಿಂದ ಮತ್ತೆ ಸಂಚಾರ ಆರಂಭವಾಗಿತ್ತು.</p>.<p><strong>ಗ್ರಾಮಸ್ಥರ ಆಕ್ರೋಶ</strong>: ಗದಗ ಜಿಲ್ಲೆಯ ಕೊಣ್ಣೂರು ಹಾಗೂ ಬಾದಾಮಿ ತಾಲ್ಲೂಕಿನ ಗೋವನಕೊಪ್ಪ ನಡುವಿನ ರಾಷ್ಟ್ರೀಯ ಹೆದ್ದಾರಿ ಹಳೆಯ ಸೇತುವೆ ಪದೇ ಪದೇ ಮುಳುಗಡೆಯಾಗುತ್ತಿದ್ದ ಕಾರಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ₹37 ಕೋಟಿ ವೆಚ್ಚದಲ್ಲಿ 2017ರಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಿದೆ. ಅವೈಜ್ಞಾನಿಕ ಕಾಮಗಾರಿ ಪರಿಣಾಮ ಸೇತುವೆಯಿಂದ ಸಂಚಾರ ಸಮಸ್ಯೆ ಪರಿಹಾರವಾಗುವ ಬದಲಿಗೆ ಉಲ್ಬಣಗೊಂಡಿದೆ. ಪ್ರವಾಹದ ನೀರು ಕೊಣ್ಣೂರು ಗ್ರಾಮದೊಳಗೆ ನುಗ್ಗಿ ಹಾವಳಿ ಮಾಡುತ್ತಿದೆ. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಹೊಸ ಸೇತುವೆಯನ್ನು ಗ್ರಾಮದ ಹಳೆಯ ಬಸ್ ನಿಲ್ದಾಣದವರೆಗೂ ವಿಸ್ತರಿಸಲು ಆಗ್ರಹಿಸಿ ಶನಿವಾರ ಪ್ರತಿಭಟನೆ ನಡೆಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>