<p><strong>ಬಾಗಲಕೋಟೆ: </strong>ಮಲಪ್ರಭಾ ನದಿ ಪ್ರವಾಹದಿಂದ ಬಾಧಿತವಾಗಿದ್ದ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಮಣ್ಣು ಕುಸಿದು ಭಾನುವಾರ ಮುಂಜಾನೆ ಎರಡು ಲಾರಿಗಳು ಸಿಲುಕಿಕೊಂಡಿವೆ. ಇದರಿಂದ ಹೆದ್ದಾರಿಯಲ್ಲಿ ಭಾರಿ ವಾಹನ ಸಂಚಾರ ಸ್ಥಗಿತಗೊಂಡಿದೆ. </p>.<p>ಕಾರು, ಟಂಟಂ, ಬೈಕ್ ನಂತಹ ಲಘು ವಾಹನಗಳು ಮಾತ್ರ ಓಡಾಟ ನಡೆಸಿವೆ.</p>.<p>ಮಲಪ್ರಭಾ ನದಿ ನೆರೆಯಿಂದ ಆವೃತವಾಗಿದ್ದ ಹೆದ್ದಾರಿಯಲ್ಲಿ ಕಳೆದ ಮಂಗಳವಾರ ನಸುಕಿನಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಎರಡು ದಿನಗಳ ನಂತರ ನೆರೆ ಇಳಿದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಗೊಳಿಸಿತ್ತು. ಶನಿವಾರದಿಂದ ಮತ್ತೆ ಸಂಚಾರ ಆರಂಭವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>