<p><strong>ಹುನಗುಂದ</strong>: ಪಟ್ಟಣದ ಮೇಗಲಪೇಟೆಯ ಮಲ್ಲಿಕಾರ್ಜುನ ದೇವಸ್ಥಾನದ ಹಿಂಭಾಗದ ಗುಡ್ಡಕ್ಕೆ ಗುರುವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿತ್ತು. ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಗುಡ್ಡದ ಕೆಳಭಾಗದಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ರೈತರ ಮೇವು ಮತ್ತು ಹೊಟ್ಟಿನ ಬಣ್ಣಿಮೆ, ಐದಾರು ಮನೆಗಳಿಗಾಗುವ ಅನಾಹುತ ತಪ್ಪಿದೆ.</p>.<p>ಕಿಡಿಗೇಡಿಗಳು ಬೀಡಿ-ಸಿಗರೇಟ್ ಸೇದಿ ಎಸೆದ ತುಣುಕಿನಿಂದಲೂ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.</p>.<p>ಬಿಸಿಲಿಗೆ ಒಣಗಿ ನಿಂತಿದ್ದ ಹುಲ್ಲಿಗೆ ಹೊತ್ತಿಕೊಂಡ ಬೆಂಕಿ ಕ್ಷಣಾರ್ಥದಲ್ಲಿ ಅರ್ಧಕ್ಕೂ ಹೆಚ್ಚು ಗುಡ್ಡ ಬೆಂಕಿಯ ಕೆನ್ನಾಲಿಗೆ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ನೀರನ್ನು ತೆಗೆದುಕೊಂಡು ಬೆಂಕಿಯನ್ನು ನಂದಿಸಲು ಮುಂದಾದಾಗ ಗುಡ್ಡಕ್ಕೆ ಹೊತ್ತಿಕೊಂಡ ಬೆಂಕಿ ಪ್ರಖರತೆ ಹೆಚ್ಚಾಗಿದ್ದನ್ನು ಮನಗಂಡು ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.</p>.<p>ಸ್ಥಳಕ್ಕೆ ಬಂದ ಅಗ್ನಿಶಾಮಕ ಎಎಫ್ಎಸ್ಒ ಪ್ರಕಾಶ ಚಿತ್ತರಗಿ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಗುಡ್ಡದಲ್ಲೀನ ಅನೇಕ ಗಿಡಮರಗಳು ಬೆಂಕಿಗೆ ಸುಟ್ಟು ಕರಕಲಾಗಿವೆ.</p>.<p>ಅಗ್ನಿಶಾಮಕ ಸಿಬ್ಬಂದಿಗಳಾದ ಭೀಮಪ್ಪ ಮನ್ನಿಹಾಳ, ಖಾಜೇಸಾಬ ಗೊಂದುಗುಳಿ, ರವಿಚಂದ್ರ, ಮಲ್ಲೇಶ್ ಡಂಬಳ, ದೊಡೇಶ ಸೇರಿದಂತೆ ಅನೇಕರು ಕಾರ್ಯಾಚರಣೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ಪಟ್ಟಣದ ಮೇಗಲಪೇಟೆಯ ಮಲ್ಲಿಕಾರ್ಜುನ ದೇವಸ್ಥಾನದ ಹಿಂಭಾಗದ ಗುಡ್ಡಕ್ಕೆ ಗುರುವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿತ್ತು. ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ಗುಡ್ಡದ ಕೆಳಭಾಗದಲ್ಲಿದ್ದ ಸುಮಾರು 50ಕ್ಕೂ ಹೆಚ್ಚು ರೈತರ ಮೇವು ಮತ್ತು ಹೊಟ್ಟಿನ ಬಣ್ಣಿಮೆ, ಐದಾರು ಮನೆಗಳಿಗಾಗುವ ಅನಾಹುತ ತಪ್ಪಿದೆ.</p>.<p>ಕಿಡಿಗೇಡಿಗಳು ಬೀಡಿ-ಸಿಗರೇಟ್ ಸೇದಿ ಎಸೆದ ತುಣುಕಿನಿಂದಲೂ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.</p>.<p>ಬಿಸಿಲಿಗೆ ಒಣಗಿ ನಿಂತಿದ್ದ ಹುಲ್ಲಿಗೆ ಹೊತ್ತಿಕೊಂಡ ಬೆಂಕಿ ಕ್ಷಣಾರ್ಥದಲ್ಲಿ ಅರ್ಧಕ್ಕೂ ಹೆಚ್ಚು ಗುಡ್ಡ ಬೆಂಕಿಯ ಕೆನ್ನಾಲಿಗೆ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯರು ನೀರನ್ನು ತೆಗೆದುಕೊಂಡು ಬೆಂಕಿಯನ್ನು ನಂದಿಸಲು ಮುಂದಾದಾಗ ಗುಡ್ಡಕ್ಕೆ ಹೊತ್ತಿಕೊಂಡ ಬೆಂಕಿ ಪ್ರಖರತೆ ಹೆಚ್ಚಾಗಿದ್ದನ್ನು ಮನಗಂಡು ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರು.</p>.<p>ಸ್ಥಳಕ್ಕೆ ಬಂದ ಅಗ್ನಿಶಾಮಕ ಎಎಫ್ಎಸ್ಒ ಪ್ರಕಾಶ ಚಿತ್ತರಗಿ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಗುಡ್ಡದಲ್ಲೀನ ಅನೇಕ ಗಿಡಮರಗಳು ಬೆಂಕಿಗೆ ಸುಟ್ಟು ಕರಕಲಾಗಿವೆ.</p>.<p>ಅಗ್ನಿಶಾಮಕ ಸಿಬ್ಬಂದಿಗಳಾದ ಭೀಮಪ್ಪ ಮನ್ನಿಹಾಳ, ಖಾಜೇಸಾಬ ಗೊಂದುಗುಳಿ, ರವಿಚಂದ್ರ, ಮಲ್ಲೇಶ್ ಡಂಬಳ, ದೊಡೇಶ ಸೇರಿದಂತೆ ಅನೇಕರು ಕಾರ್ಯಾಚರಣೆಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>