<p><strong>ಬಾಗಲಕೋಟೆ</strong>: ವಿಶ್ವವಿದ್ಯಾಲಯದ ತಾಂತ್ರಿಕ ನೆರವು, ವೈಜ್ಞಾನಿಕ ಸಲಹೆ ಪಡೆದು ಅಧಿಕ ಮಾವಿನ ಬೆಳೆ ಬೆಳೆಯುತ್ತಿದ್ದಾರೆ ಎಂದು ಪ್ರಗತಿಪರ ರೈತ ಬಿ.ಎಂ. ದೇಸಾಯಿ ಹೇಳಿದರು.</p>.<p>ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ‘ಮಾವಿನ ಬೆಳೆಯಲ್ಲಿ ನೂತನ ತಾಂತ್ರಿಕತೆ’ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜ್ಞಾನಿಗಳಿಂದ ಜೈವಿಕ ಪೀಡೆನಾಶಕ ಹಾಗೂ ಜೈವಿಕ ಗೊಬ್ಬರಗಳ ಬಳಸಿ ಕಡಿಮೆ ಖರ್ಚಿನಲ್ಲಿ ಹೆಚ್ಚು ಉತ್ಪಾದನೆ ಮಾಡಿದರೆ ಮಾತ್ರ ಲಾಭ ದೊರೆಯುತ್ತದೆ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಸ್ನಾತಕೋತ್ತರ ಡೀನ್ ತಮ್ಮಯ್ಯ ಮಾತನಾಡಿ, ಮಾವಿಗೆ ರೋಗ ಹಾಗೂ ಕೀಟಗಳ ಬಾಧೆ ಹೆಚ್ಚಾಗಿದೆ. ಸಮಗ್ರ ಹತೋಟಿ ವೈಜ್ಞಾನಿಕ ಸಲಹೆಯಿಂದ ಸಾಧ್ಯ. ಸಂರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು ಎಂದರು.</p>.<p>ವಿಶ್ವವಿದ್ಯಾಲಯದಿಂದ ನೂತನವಾಗಿ ಮಾವು ಬೆಳೆಗಾರರ ಸಂಘ ಸ್ಥಾಪಿಸಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಪ್ರಗತಿಪರ ರೈತರ ಕ್ಷೇತ್ರಗಳಲ್ಲಿ ಮಾವಿಗೆ ಬರುವ ರೋಗ, ಪೋಷಕಾಂಶಗಳ ಸಮಗ್ರ ನಿರ್ವಹಣೆ ಹಾಗೂ ರೈತರ ಕ್ಷೇತ್ರದಲ್ಲಿಯೇ ಪ್ರಾತ್ಯಕ್ಷಿಕೆ ಏರ್ಪಡಿಸಲಾಗುವುದು ಎಂದು ಹೇಳಿದರು.</p>.<p>ರೈತ ಹಾಗೂ ಸಿಬ್ಬಂದಿ ತರಬೇತಿ ಕೇಂದ್ರದ ಮುಖ್ಯಸ್ಥ ವಸಂತ ಗಾಣಿಗೇರ ಮಾತನಾಡಿ, ಮಾವಿನ ಬೆಳೆಗಾರರ ಸಂಘದ ಮೂಲಕ ರಪ್ತು ಮಾಡುವ ಅವಕಾಶಗಳ ಕುರಿತು ತಿಳಿಸಿದರು.</p>.<p>ಹಣ್ಣು ವಿಭಾಗದ ಸಹಾಯಕ ಪ್ರಾಧ್ಯಾಪಕ ಆನಂದ ನಂಜಪ್ಪನವರ, ಕೀಟಶಾಸ್ತ್ರಜ್ಞ ಚಂದ್ರಶೇಖರ್, ರೋಗಶಾಸ್ತ್ರಜ್ಞ ರಮೇಶ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ವಿಸ್ತರಣಾ ನಿರ್ದೇಶಕ ವೆಂಕಟೇಶಲು ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ವಿಶ್ವವಿದ್ಯಾಲಯದ ತಾಂತ್ರಿಕ ನೆರವು, ವೈಜ್ಞಾನಿಕ ಸಲಹೆ ಪಡೆದು ಅಧಿಕ ಮಾವಿನ ಬೆಳೆ ಬೆಳೆಯುತ್ತಿದ್ದಾರೆ ಎಂದು ಪ್ರಗತಿಪರ ರೈತ ಬಿ.ಎಂ. ದೇಸಾಯಿ ಹೇಳಿದರು.</p>.<p>ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ‘ಮಾವಿನ ಬೆಳೆಯಲ್ಲಿ ನೂತನ ತಾಂತ್ರಿಕತೆ’ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜ್ಞಾನಿಗಳಿಂದ ಜೈವಿಕ ಪೀಡೆನಾಶಕ ಹಾಗೂ ಜೈವಿಕ ಗೊಬ್ಬರಗಳ ಬಳಸಿ ಕಡಿಮೆ ಖರ್ಚಿನಲ್ಲಿ ಹೆಚ್ಚು ಉತ್ಪಾದನೆ ಮಾಡಿದರೆ ಮಾತ್ರ ಲಾಭ ದೊರೆಯುತ್ತದೆ ಎಂದರು.</p>.<p>ಮುಖ್ಯ ಅತಿಥಿಯಾಗಿದ್ದ ಸ್ನಾತಕೋತ್ತರ ಡೀನ್ ತಮ್ಮಯ್ಯ ಮಾತನಾಡಿ, ಮಾವಿಗೆ ರೋಗ ಹಾಗೂ ಕೀಟಗಳ ಬಾಧೆ ಹೆಚ್ಚಾಗಿದೆ. ಸಮಗ್ರ ಹತೋಟಿ ವೈಜ್ಞಾನಿಕ ಸಲಹೆಯಿಂದ ಸಾಧ್ಯ. ಸಂರಕ್ಷಣೆಗೆ ಹೆಚ್ಚು ಒತ್ತು ನೀಡಬೇಕು ಎಂದರು.</p>.<p>ವಿಶ್ವವಿದ್ಯಾಲಯದಿಂದ ನೂತನವಾಗಿ ಮಾವು ಬೆಳೆಗಾರರ ಸಂಘ ಸ್ಥಾಪಿಸಿದ್ದು, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಪ್ರಗತಿಪರ ರೈತರ ಕ್ಷೇತ್ರಗಳಲ್ಲಿ ಮಾವಿಗೆ ಬರುವ ರೋಗ, ಪೋಷಕಾಂಶಗಳ ಸಮಗ್ರ ನಿರ್ವಹಣೆ ಹಾಗೂ ರೈತರ ಕ್ಷೇತ್ರದಲ್ಲಿಯೇ ಪ್ರಾತ್ಯಕ್ಷಿಕೆ ಏರ್ಪಡಿಸಲಾಗುವುದು ಎಂದು ಹೇಳಿದರು.</p>.<p>ರೈತ ಹಾಗೂ ಸಿಬ್ಬಂದಿ ತರಬೇತಿ ಕೇಂದ್ರದ ಮುಖ್ಯಸ್ಥ ವಸಂತ ಗಾಣಿಗೇರ ಮಾತನಾಡಿ, ಮಾವಿನ ಬೆಳೆಗಾರರ ಸಂಘದ ಮೂಲಕ ರಪ್ತು ಮಾಡುವ ಅವಕಾಶಗಳ ಕುರಿತು ತಿಳಿಸಿದರು.</p>.<p>ಹಣ್ಣು ವಿಭಾಗದ ಸಹಾಯಕ ಪ್ರಾಧ್ಯಾಪಕ ಆನಂದ ನಂಜಪ್ಪನವರ, ಕೀಟಶಾಸ್ತ್ರಜ್ಞ ಚಂದ್ರಶೇಖರ್, ರೋಗಶಾಸ್ತ್ರಜ್ಞ ರಮೇಶ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ವಿಸ್ತರಣಾ ನಿರ್ದೇಶಕ ವೆಂಕಟೇಶಲು ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>