<p><strong>ಮಹಾಲಿಂಗಪುರ: ‘</strong>ಇಂದಿನ ಶಿಕ್ಷಣ ಪದ್ಧತಿ ಸುಧಾರಿಸಬೇಕಿದೆ. ಒಬ್ಬೊಬ್ಬರಿಗೆ ಒಂದೊಂದು ವಿಷಯದಲ್ಲಿ ಆಸಕ್ತಿ ಇರುತ್ತದೆ. ಅಂತಹ ವಿಷಯವನ್ನಷ್ಟೇ ಓದುವ, ಅದರಲ್ಲಿ ಕೌಶಲ ತೋರಿಸುವ ಅವಕಾಶ ಕಲ್ಪಿಸಿದರೆ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡಲು ಸಾಧ್ಯವಿದೆ’ ಎಂದು ನಟ, ನಿರೂಪಕ ಮಾಸ್ಟರ್ ಆನಂದ ಹೇಳಿದರು.</p>.<p>ಪಟ್ಟಣದ ನವಚೇತನ ಶಿಕ್ಷಣ ಸಂಸ್ಥೆಯ ಜೇಸಿ ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಕ್ಕಳು ದೇವರ ಸಮಾನ. ಜೀವನ ಹಾಗೂ ಸಮಾಜವನ್ನು ರೂಪಿಸುವ ಶಕ್ತಿ ಶಾಲೆಗಳಿಗಿದೆ. ದೇವಸ್ಥಾನಕ್ಕೆ ಇಲ್ಲದ ಬೇಧಭಾವ ಶಾಲೆಗಳಿಗೂ ಇರುವುದಿಲ್ಲ. ಹೀಗಾಗಿ, ಶಾಲೆಗಳೇ ದೇವಸ್ಥಾನವಿದ್ದಂತೆ. ವಿದ್ಯಾರ್ಥಿಗಳು ಆಟ, ಪಾಠದಲ್ಲಿ ಸಮಾನವಾಗಿ ಬೆರೆಯಬೇಕು’ ಎಂದರು.</p>.<p>ಸಂಸ್ಥೆ ಉಪಾಧ್ಯಕ್ಷ ಶಿವಾನಂದ ತಿಪ್ಪಾ ಮಾತನಾಡಿದರು. ಸಂಸ್ಥೆ ಅಧ್ಯಕ್ಷ ಶಾಂತಿಲಾಲ ಪಟೇಲ, ನಿರ್ದೇಶಕ ರಮೇಶ ಮುಳವಾಡ, ಲಯನ್ಸ್ ಕ್ಲಬ್ ಅಧ್ಯಕ್ಷ ಸಿದ್ದು ನಕಾತಿ, ಪಿಎಸ್ಐಗಳಾದ ಕಿರಣ ಸತ್ತಿಗೇರಿ, ಮಧು ಎಲ್., ಮುಖ್ಯಶಿಕ್ಷಕ ಎಸ್.ಜಿ.ಕೌಜಲಗಿ, ನಾರನಗೌಡ ಉತ್ತಂಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ: ‘</strong>ಇಂದಿನ ಶಿಕ್ಷಣ ಪದ್ಧತಿ ಸುಧಾರಿಸಬೇಕಿದೆ. ಒಬ್ಬೊಬ್ಬರಿಗೆ ಒಂದೊಂದು ವಿಷಯದಲ್ಲಿ ಆಸಕ್ತಿ ಇರುತ್ತದೆ. ಅಂತಹ ವಿಷಯವನ್ನಷ್ಟೇ ಓದುವ, ಅದರಲ್ಲಿ ಕೌಶಲ ತೋರಿಸುವ ಅವಕಾಶ ಕಲ್ಪಿಸಿದರೆ ವಿದ್ಯಾರ್ಥಿಗಳು ಇನ್ನಷ್ಟು ಸಾಧನೆ ಮಾಡಲು ಸಾಧ್ಯವಿದೆ’ ಎಂದು ನಟ, ನಿರೂಪಕ ಮಾಸ್ಟರ್ ಆನಂದ ಹೇಳಿದರು.</p>.<p>ಪಟ್ಟಣದ ನವಚೇತನ ಶಿಕ್ಷಣ ಸಂಸ್ಥೆಯ ಜೇಸಿ ಇಂಗ್ಲೀಷ್ ಮಾಧ್ಯಮ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮಕ್ಕಳು ದೇವರ ಸಮಾನ. ಜೀವನ ಹಾಗೂ ಸಮಾಜವನ್ನು ರೂಪಿಸುವ ಶಕ್ತಿ ಶಾಲೆಗಳಿಗಿದೆ. ದೇವಸ್ಥಾನಕ್ಕೆ ಇಲ್ಲದ ಬೇಧಭಾವ ಶಾಲೆಗಳಿಗೂ ಇರುವುದಿಲ್ಲ. ಹೀಗಾಗಿ, ಶಾಲೆಗಳೇ ದೇವಸ್ಥಾನವಿದ್ದಂತೆ. ವಿದ್ಯಾರ್ಥಿಗಳು ಆಟ, ಪಾಠದಲ್ಲಿ ಸಮಾನವಾಗಿ ಬೆರೆಯಬೇಕು’ ಎಂದರು.</p>.<p>ಸಂಸ್ಥೆ ಉಪಾಧ್ಯಕ್ಷ ಶಿವಾನಂದ ತಿಪ್ಪಾ ಮಾತನಾಡಿದರು. ಸಂಸ್ಥೆ ಅಧ್ಯಕ್ಷ ಶಾಂತಿಲಾಲ ಪಟೇಲ, ನಿರ್ದೇಶಕ ರಮೇಶ ಮುಳವಾಡ, ಲಯನ್ಸ್ ಕ್ಲಬ್ ಅಧ್ಯಕ್ಷ ಸಿದ್ದು ನಕಾತಿ, ಪಿಎಸ್ಐಗಳಾದ ಕಿರಣ ಸತ್ತಿಗೇರಿ, ಮಧು ಎಲ್., ಮುಖ್ಯಶಿಕ್ಷಕ ಎಸ್.ಜಿ.ಕೌಜಲಗಿ, ನಾರನಗೌಡ ಉತ್ತಂಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>