<p><strong>ಬಾಗಲಕೋಟೆ</strong>: ‘ಬಸವಣ್ಣನವರ ತತ್ವಗಳ ಅನುಯಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿರಬೇಕು. ಅವರು ಬಸವಣ್ಣನವರ ಬಗ್ಗೆ ಅಪಾರ ಭಕ್ತಿ, ನಿಷ್ಠೆ ಮತ್ತು ಶ್ರದ್ಧೆ ಹೊಂದಿದ್ದಾರೆ’ ಎಂದು ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.</p>.<p>‘ಮಾಜಿ ಮುಖ್ಯಮಂತ್ರಿ ದೇವರಾಜು ಅರಸರಂತೆಯೇ ಸಿದ್ದರಾಮಯ್ಯ ಅವರೂ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ನಮಗೆ ಎಲ್ಲರೂ ಒಂದೇ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೂಡ ಒಳ್ಳೆಯವರು. ಆದರೂ, ಬಸವಣ್ಣನ ತತ್ವಗಳ ಅನುಯಾಯಿ ಸಿದ್ದರಾಮಯ್ಯ ಮುಂದುವರೆಯಲಿ ಎಂಬು ನಮ್ಮ ಆಶಯ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>
<p><strong>ಬಾಗಲಕೋಟೆ</strong>: ‘ಬಸವಣ್ಣನವರ ತತ್ವಗಳ ಅನುಯಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿ ಆಗಿರಬೇಕು. ಅವರು ಬಸವಣ್ಣನವರ ಬಗ್ಗೆ ಅಪಾರ ಭಕ್ತಿ, ನಿಷ್ಠೆ ಮತ್ತು ಶ್ರದ್ಧೆ ಹೊಂದಿದ್ದಾರೆ’ ಎಂದು ಕೂಡಲಸಂಗಮದ ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.</p>.<p>‘ಮಾಜಿ ಮುಖ್ಯಮಂತ್ರಿ ದೇವರಾಜು ಅರಸರಂತೆಯೇ ಸಿದ್ದರಾಮಯ್ಯ ಅವರೂ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ನಮಗೆ ಎಲ್ಲರೂ ಒಂದೇ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೂಡ ಒಳ್ಳೆಯವರು. ಆದರೂ, ಬಸವಣ್ಣನ ತತ್ವಗಳ ಅನುಯಾಯಿ ಸಿದ್ದರಾಮಯ್ಯ ಮುಂದುವರೆಯಲಿ ಎಂಬು ನಮ್ಮ ಆಶಯ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>