<p><strong>ಬಾಗಲಕೋಟೆ:</strong> ಜಿಲ್ಲೆಯಲ್ಲಿ ಕಳ್ಳಬಟ್ಟಿ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಕಳ್ಳಬಟ್ಟಿ ಸಂಪೂರ್ಣ ನಿರ್ಮೂಲನೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಳ್ಳಬಟ್ಟಿ ನಿರ್ಮೂಲನೆ ಕುರಿತು ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಚಖಂಡಿ ಹಾಗೂ ಅಮೀನಗಡದಲ್ಲಿ ಮಾತ್ರ ಕಳ್ಳಬಟ್ಟಿ ಕೇಂದ್ರಗಳಿವೆ. ಈ ಭಾಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಬೇಕು ಎಂದರು.</p>.<p>ಕಳ್ಳಬಟ್ಟಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಬೇರೆ ಉದ್ಯೋಗ ಕೈಗೊಳ್ಳಲು ಅಗತ್ಯ ತರಬೇತಿ ನೀಡಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅವರಿಗೆ ದೊರಕುವಂತೆ ಮಾಡಬೇಕು. ಹಂತ, ಹಂತವಾಗಿ ಕಳ್ಳಬಟ್ಟಿ ಸಂಪೂರ್ಣ ನಿರ್ಮೂಲನೆಗೆ ಕ್ರಮವಹಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ‘ಕಳ್ಳಬಟ್ಟಿ ಸಂಪೂರ್ಣ ನಿರ್ಮೂಲ ಆಗಬೇಕು. ಕುಡಿತ ಕಡಿಮೆಯಾದರೆ ಮಾತ್ರ ಕಾನೂನು ವ್ಯವಸ್ಥೆ ಚೆನ್ನಾಗಿರಲು ಸಾಧ್ಯವಾಗುತ್ತದೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಅಬಕಾರಿ ಉಪ ಆಯುಕ್ತ ಹನಮಂತಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ 2024 ಜುಲೈದಿಂದ ಇಲ್ಲಿಯವರೆಗೆ 1,903 ದಾಳಿಗಳನ್ನು ನಡೆಸಲಾಗಿದ್ದು, 495 ಪ್ರಕರಣಗಳನ್ನು ದಾಖಲಿಸಿ 495 ಆರೋಪಿಗಳನ್ನು ಬಂಧಿಸಲಾಗಿದೆ. 9,868 ಲೀಟರ್ ಮದ್ಯ, 18 ಲೀ ಹೊರ ರಾಜ್ಯದ ಮದ್ಯ, 4 ಲೀಟರ್ ಬಿಯರ್, 39 ಲೀ ಸೇಂದಿ, 467 ಲೀ ಕಳ್ಳಬಟ್ಟಿ ಸಾರಾಯಿ, 585 ಲೀಟರ್ ಬೆಲ್ಲದ ಕೊಳೆ ಹಾಗೂ ಒಂದು ಆಟೊ, ಒಂದು ಕಾರು, 21 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ರಚಿಸಿದ ಸ್ಥಾಯಿ ಸಮಿತಿ ಸಭೆಗಳನ್ನು ಮಾಡಿ ಕಳ್ಳಬಟ್ಟಿ ಸಂಪೂರ್ಣ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಾಮೂಹಿಕವಾಗಿ ಅಬಕಾರಿ ದಾಳಿಗಳನ್ನು ಕೈಗೊಳ್ಳಲು ತಂಡಗಳನ್ನು ರಚಿಸಲಾಗಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಅಬಕಾರಿ ಉಪ ಅಧೀಕ್ಷಕ ಅನೀಲಕುಮಾರ ನಂದೇಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್.ಎಲ್. ಹೊಸಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲೆಯಲ್ಲಿ ಕಳ್ಳಬಟ್ಟಿ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಕಳ್ಳಬಟ್ಟಿ ಸಂಪೂರ್ಣ ನಿರ್ಮೂಲನೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಳ್ಳಬಟ್ಟಿ ನಿರ್ಮೂಲನೆ ಕುರಿತು ಸ್ಥಾಯಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಚಖಂಡಿ ಹಾಗೂ ಅಮೀನಗಡದಲ್ಲಿ ಮಾತ್ರ ಕಳ್ಳಬಟ್ಟಿ ಕೇಂದ್ರಗಳಿವೆ. ಈ ಭಾಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಬೇಕು ಎಂದರು.</p>.<p>ಕಳ್ಳಬಟ್ಟಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಗುರುತಿಸಿ ಬೇರೆ ಉದ್ಯೋಗ ಕೈಗೊಳ್ಳಲು ಅಗತ್ಯ ತರಬೇತಿ ನೀಡಬೇಕು. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಅವರಿಗೆ ದೊರಕುವಂತೆ ಮಾಡಬೇಕು. ಹಂತ, ಹಂತವಾಗಿ ಕಳ್ಳಬಟ್ಟಿ ಸಂಪೂರ್ಣ ನಿರ್ಮೂಲನೆಗೆ ಕ್ರಮವಹಿಸಬೇಕು ಎಂದು ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ‘ಕಳ್ಳಬಟ್ಟಿ ಸಂಪೂರ್ಣ ನಿರ್ಮೂಲ ಆಗಬೇಕು. ಕುಡಿತ ಕಡಿಮೆಯಾದರೆ ಮಾತ್ರ ಕಾನೂನು ವ್ಯವಸ್ಥೆ ಚೆನ್ನಾಗಿರಲು ಸಾಧ್ಯವಾಗುತ್ತದೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ಅಬಕಾರಿ ಉಪ ಆಯುಕ್ತ ಹನಮಂತಪ್ಪ ಮಾತನಾಡಿ, ‘ಜಿಲ್ಲೆಯಲ್ಲಿ 2024 ಜುಲೈದಿಂದ ಇಲ್ಲಿಯವರೆಗೆ 1,903 ದಾಳಿಗಳನ್ನು ನಡೆಸಲಾಗಿದ್ದು, 495 ಪ್ರಕರಣಗಳನ್ನು ದಾಖಲಿಸಿ 495 ಆರೋಪಿಗಳನ್ನು ಬಂಧಿಸಲಾಗಿದೆ. 9,868 ಲೀಟರ್ ಮದ್ಯ, 18 ಲೀ ಹೊರ ರಾಜ್ಯದ ಮದ್ಯ, 4 ಲೀಟರ್ ಬಿಯರ್, 39 ಲೀ ಸೇಂದಿ, 467 ಲೀ ಕಳ್ಳಬಟ್ಟಿ ಸಾರಾಯಿ, 585 ಲೀಟರ್ ಬೆಲ್ಲದ ಕೊಳೆ ಹಾಗೂ ಒಂದು ಆಟೊ, ಒಂದು ಕಾರು, 21 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ರಚಿಸಿದ ಸ್ಥಾಯಿ ಸಮಿತಿ ಸಭೆಗಳನ್ನು ಮಾಡಿ ಕಳ್ಳಬಟ್ಟಿ ಸಂಪೂರ್ಣ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಸಾಮೂಹಿಕವಾಗಿ ಅಬಕಾರಿ ದಾಳಿಗಳನ್ನು ಕೈಗೊಳ್ಳಲು ತಂಡಗಳನ್ನು ರಚಿಸಲಾಗಿದೆ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಅಬಕಾರಿ ಉಪ ಅಧೀಕ್ಷಕ ಅನೀಲಕುಮಾರ ನಂದೇಶ್ವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಂಜುನಾಥ ಡಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್.ಎಲ್. ಹೊಸಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>