<p><strong>ಬೀಳಗಿ</strong>: ತಾಲ್ಲೂಕಿನ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ಹಕ್ಕು ಪತ್ರ, ರೆಷನ್ ಕಾರ್ಡ್ ಮುಂತಾದ ಸೌಲಭ್ಯಗಳ ಕುರಿತು ಪರೀಶಿಲಿಸಲು ತಹಶೀಲ್ದಾರ್, ಇಒ ಮತ್ತು ಸ್ಥಳೀಯ ಅಧಿಕಾರಿಗಳಿಗೆ ಶಾಸಕ ಜೆ.ಟಿ.ಪಾಟೀಲ ಸೂಚಿಸಿದರು.</p>.<p>ತಾಲ್ಲೂಕಿನ ಸುನಗ ಗ್ರಾಮದಲ್ಲಿ ಗುರುವಾರ ನಡೆದ ಸುನಗ ಎಲ್.ಟಿ1,ಎಲ್.ಟಿ.2, ಕುಂದರಗಿ ಎಲ್.ಟಿ ಗ್ರಾಮಗಳ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದರು.</p>.<p>ತಾಂಡಾಗಳ ಯುವಕರು ದುಷ್ಚಟಗಳಿಂದ ದೂರವಿದ್ದು ಉತ್ತಮವಾದ ಶಿಕ್ಷಣ ಪಡೆದು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಲಹೆ ನೀಡಿದರು.</p>.<p>ನನ್ನ ಅಧಿಕಾರವಧಿಯ ಉಳಿದ ಮೂರು ವರ್ಷಗಳಲ್ಲಿ ಪ್ರತಿಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲೇ ಬಗೆಹರಿಸಲು ಪ್ರಯತ್ನಿಸುವೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇನ್ನು ಮುಂದೆ ಕೌನ್ಸಿಲಿಂಗ ಮುಖಾಂತರ ವರ್ಗಾವಣೆಯಾಗುತ್ತೆವೆ. ಶಾಸಕರ ನಿಯಂತ್ರಣವಿಲ್ಲ ಎಂದು ಕೊಳ್ಳಬೇಡಿ ನಿಮ್ಮ ಕಾರ್ಯವೈಖರಿಯನ್ನು ಪ್ರತಿಕ್ಷಣವೂ ಗಮನಿಸುತ್ತಿರುತ್ತೇನೆ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಎಂದು ಪಿಡಿಒ ಡಿ.ಆರ್.ಅಡವಿ ಅವರಿಗೆ ಕಿವಿಮಾತು ಹೇಳಿದರು.</p>.<p>ತಹಶೀಲ್ದಾರ್ ವಿನೋದ ಹತ್ತಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಕ್ಕು ಪತ್ರಗಳನ್ನು ಸುರಕ್ಷಿತವಾಗಿ ಹಾಗೂ ಜಾಗರೂಕತೆಯಿಂದ ಇಟ್ಟುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಸಲಹೆ ನೀಡಿ ಕುಂದರಗಿ ಎಲ್.ಟಿ 1. ಗ್ರಾಮದ 202 ಹಾಗೂ ಸುನಗ ಎಲ್.ಟಿ.1,2 ಸೇರಿ 704 ಒಟ್ಟು 906 ಹಕ್ಕು ಪತ್ರಗಳನ್ನು ವಿತರಿಸಿದರು.</p>.<p>ಗ್ರಾಮದ ಮುಖಂಡ ಶಂಕರ ಕಾರಬಾರಿ ಮಾತನಾಡಿ, ಇಲ್ಲಿಯವರೆಗೆ ತಾಂಡಾಗಳಿಗೆ ಯಾವುದೇ ದಾಖಲಾತಿಗಳಿರಲಿಲ್ಲ. ಶಾಸಕರ ಮುತುವರ್ಜಿಯಿಂದ ಸರ್ಕಾರ ಹಕ್ಕುಪತ್ರ ವಿತರಿಸಿದ್ದು ಸಂತಸವುಂಟು ಮಾಡಿದೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರಾ ದಳವಾಯಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ರಸೂಲ್ ಮುಜಾವರ, ಸಂಗಪ್ಪ ಕಂದಗಲ್ಲ, ಸಿದ್ದಪ್ಪ ದಳವಾಯಿ, ಕುಮಾರ ಲಮಾಣಿ, ರವಿ ಲಮಾಣಿ, ನಾರಾಯಣ ಲಮಾಣಿ ಮಂಜುನಾಥ ಧರೆಗೊಂಡ, ಪಿಡಿಒ ಡಿ.ಆರ್.ಅಡವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ತಾಲ್ಲೂಕಿನ ಪ್ರತಿ ಹಳ್ಳಿಗಳಿಗೆ ಭೇಟಿ ನೀಡಿ ಹಕ್ಕು ಪತ್ರ, ರೆಷನ್ ಕಾರ್ಡ್ ಮುಂತಾದ ಸೌಲಭ್ಯಗಳ ಕುರಿತು ಪರೀಶಿಲಿಸಲು ತಹಶೀಲ್ದಾರ್, ಇಒ ಮತ್ತು ಸ್ಥಳೀಯ ಅಧಿಕಾರಿಗಳಿಗೆ ಶಾಸಕ ಜೆ.ಟಿ.ಪಾಟೀಲ ಸೂಚಿಸಿದರು.</p>.<p>ತಾಲ್ಲೂಕಿನ ಸುನಗ ಗ್ರಾಮದಲ್ಲಿ ಗುರುವಾರ ನಡೆದ ಸುನಗ ಎಲ್.ಟಿ1,ಎಲ್.ಟಿ.2, ಕುಂದರಗಿ ಎಲ್.ಟಿ ಗ್ರಾಮಗಳ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದರು.</p>.<p>ತಾಂಡಾಗಳ ಯುವಕರು ದುಷ್ಚಟಗಳಿಂದ ದೂರವಿದ್ದು ಉತ್ತಮವಾದ ಶಿಕ್ಷಣ ಪಡೆದು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಲಹೆ ನೀಡಿದರು.</p>.<p>ನನ್ನ ಅಧಿಕಾರವಧಿಯ ಉಳಿದ ಮೂರು ವರ್ಷಗಳಲ್ಲಿ ಪ್ರತಿಗ್ರಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲೇ ಬಗೆಹರಿಸಲು ಪ್ರಯತ್ನಿಸುವೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇನ್ನು ಮುಂದೆ ಕೌನ್ಸಿಲಿಂಗ ಮುಖಾಂತರ ವರ್ಗಾವಣೆಯಾಗುತ್ತೆವೆ. ಶಾಸಕರ ನಿಯಂತ್ರಣವಿಲ್ಲ ಎಂದು ಕೊಳ್ಳಬೇಡಿ ನಿಮ್ಮ ಕಾರ್ಯವೈಖರಿಯನ್ನು ಪ್ರತಿಕ್ಷಣವೂ ಗಮನಿಸುತ್ತಿರುತ್ತೇನೆ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಎಂದು ಪಿಡಿಒ ಡಿ.ಆರ್.ಅಡವಿ ಅವರಿಗೆ ಕಿವಿಮಾತು ಹೇಳಿದರು.</p>.<p>ತಹಶೀಲ್ದಾರ್ ವಿನೋದ ಹತ್ತಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಕ್ಕು ಪತ್ರಗಳನ್ನು ಸುರಕ್ಷಿತವಾಗಿ ಹಾಗೂ ಜಾಗರೂಕತೆಯಿಂದ ಇಟ್ಟುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಸಲಹೆ ನೀಡಿ ಕುಂದರಗಿ ಎಲ್.ಟಿ 1. ಗ್ರಾಮದ 202 ಹಾಗೂ ಸುನಗ ಎಲ್.ಟಿ.1,2 ಸೇರಿ 704 ಒಟ್ಟು 906 ಹಕ್ಕು ಪತ್ರಗಳನ್ನು ವಿತರಿಸಿದರು.</p>.<p>ಗ್ರಾಮದ ಮುಖಂಡ ಶಂಕರ ಕಾರಬಾರಿ ಮಾತನಾಡಿ, ಇಲ್ಲಿಯವರೆಗೆ ತಾಂಡಾಗಳಿಗೆ ಯಾವುದೇ ದಾಖಲಾತಿಗಳಿರಲಿಲ್ಲ. ಶಾಸಕರ ಮುತುವರ್ಜಿಯಿಂದ ಸರ್ಕಾರ ಹಕ್ಕುಪತ್ರ ವಿತರಿಸಿದ್ದು ಸಂತಸವುಂಟು ಮಾಡಿದೆ ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರಾ ದಳವಾಯಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ರಸೂಲ್ ಮುಜಾವರ, ಸಂಗಪ್ಪ ಕಂದಗಲ್ಲ, ಸಿದ್ದಪ್ಪ ದಳವಾಯಿ, ಕುಮಾರ ಲಮಾಣಿ, ರವಿ ಲಮಾಣಿ, ನಾರಾಯಣ ಲಮಾಣಿ ಮಂಜುನಾಥ ಧರೆಗೊಂಡ, ಪಿಡಿಒ ಡಿ.ಆರ್.ಅಡವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>