<p><strong>ಹುನಗುಂದ</strong>: ಸರ್ಕಾರ ಗ್ರಾಮೀಣ ಪ್ರದೇಶಗಳ ರಸ್ತೆ ಸೇರಿದಂತೆ ಮೂಲಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ತಾಲ್ಲೂಕಿನ ಹಾವರಗಿ ಗ್ರಾಮದಲ್ಲಿ ಪ್ರಸಕ್ತ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಗ್ರಾಮೀಣ ರಸ್ತೆ, ಸೇತುವೆಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಈ ಭಾಗದಲ್ಲಿ ಮುಖ್ಯ ರಸ್ತೆಗಳು ಆಗಿಲ್ಲ ಎನ್ನುವ ಕೂಗು ಕಳೆದ ಹತ್ತು ವರ್ಷಗಳಿಂದ ಇತ್ತು. ಗ್ರಾಮದ ಬೇಡಿಕೆಗಳಾದ ಸಿಸಿ ರಸ್ತೆ, ಗ್ರಾಮದಿಂದ ಕೃಷ್ಣ ನದಿಯವರೆಗೆ ರಸ್ತೆ ಸುಧಾರಣೆ, ಹಾವರಗಿ- ಜಾಲಕಮಲದಿನ್ನಿ ಸಂಪರ್ಕಿಸುವ ರಸ್ತೆ ಸುಧಾರಣೆ ಕಾಮಗಾರಿಯೂ ಸೇರಿದಂತೆ ಜಿಲ್ಲಾ ಪಂಚಾಯತ್ ಮತ್ತು ಲೋಕೋಪಯೋಗಿ ಇಲಾಖೆಯಿಂದ ಒಟ್ಟು ₹ 5 ಕೋಟಿ ವೆಚ್ಚದ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು.</p>.<p>ತಾಲ್ಲೂಕಿನ 170 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ. ಕೌಜಗನೂರ, ಇಂದವಾರ, ಮರೋಳ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<p>ಮುಖಂಡ ವೈ. ಎಚ್. ಪಾಟೀಲ ಮಾತನಾಡಿದರು. ಶರಣಪ್ಪ ಆಲೂರ, ಮಹಾಂತೇಶ ಕಾಶಪ್ಪನವರ, ಸಂಗಯ್ಯ ಶಿವಮೂರ್ತಿ, ಸುಭಾಷ್ ನಾಗರಾಳ, ಸಂತೋಷ ಕಾಶಪ್ಪನವರ, ಬಸವರಾಜ ಬೇವಿನಮಟ್ಟಿ, ಹುಚ್ಚಯ್ಯ ಹಿರೇಮಠ, ಮಲ್ಲನಗೌಡ ಗೌಡರ ಅಧಿಕಾರಿಗಳಾದ ವೀರಯ್ಯ ಹಿರೇಮಠ, ಕೆ. ಡಿ. ನಾಯಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ಸರ್ಕಾರ ಗ್ರಾಮೀಣ ಪ್ರದೇಶಗಳ ರಸ್ತೆ ಸೇರಿದಂತೆ ಮೂಲಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ತಾಲ್ಲೂಕಿನ ಹಾವರಗಿ ಗ್ರಾಮದಲ್ಲಿ ಪ್ರಸಕ್ತ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಗ್ರಾಮೀಣ ರಸ್ತೆ, ಸೇತುವೆಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.</p>.<p>ಈ ಭಾಗದಲ್ಲಿ ಮುಖ್ಯ ರಸ್ತೆಗಳು ಆಗಿಲ್ಲ ಎನ್ನುವ ಕೂಗು ಕಳೆದ ಹತ್ತು ವರ್ಷಗಳಿಂದ ಇತ್ತು. ಗ್ರಾಮದ ಬೇಡಿಕೆಗಳಾದ ಸಿಸಿ ರಸ್ತೆ, ಗ್ರಾಮದಿಂದ ಕೃಷ್ಣ ನದಿಯವರೆಗೆ ರಸ್ತೆ ಸುಧಾರಣೆ, ಹಾವರಗಿ- ಜಾಲಕಮಲದಿನ್ನಿ ಸಂಪರ್ಕಿಸುವ ರಸ್ತೆ ಸುಧಾರಣೆ ಕಾಮಗಾರಿಯೂ ಸೇರಿದಂತೆ ಜಿಲ್ಲಾ ಪಂಚಾಯತ್ ಮತ್ತು ಲೋಕೋಪಯೋಗಿ ಇಲಾಖೆಯಿಂದ ಒಟ್ಟು ₹ 5 ಕೋಟಿ ವೆಚ್ಚದ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು.</p>.<p>ತಾಲ್ಲೂಕಿನ 170 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿಯಲ್ಲಿದೆ. ಕೌಜಗನೂರ, ಇಂದವಾರ, ಮರೋಳ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಹೇಳಿದರು.</p>.<p>ಮುಖಂಡ ವೈ. ಎಚ್. ಪಾಟೀಲ ಮಾತನಾಡಿದರು. ಶರಣಪ್ಪ ಆಲೂರ, ಮಹಾಂತೇಶ ಕಾಶಪ್ಪನವರ, ಸಂಗಯ್ಯ ಶಿವಮೂರ್ತಿ, ಸುಭಾಷ್ ನಾಗರಾಳ, ಸಂತೋಷ ಕಾಶಪ್ಪನವರ, ಬಸವರಾಜ ಬೇವಿನಮಟ್ಟಿ, ಹುಚ್ಚಯ್ಯ ಹಿರೇಮಠ, ಮಲ್ಲನಗೌಡ ಗೌಡರ ಅಧಿಕಾರಿಗಳಾದ ವೀರಯ್ಯ ಹಿರೇಮಠ, ಕೆ. ಡಿ. ನಾಯಕ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>