<p><strong>ಬಾಗಲಕೋಟೆ:</strong> ವಿಧಾನಸಭೆಯಿಂದ ವಿಧಾನ ಪರಿಷತ್ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯೊಂದಿಗೆ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.</p>.<p>ವಿಧಾನ ಪರಿಷತ್ ಮಾಜಿ ಸದಸ್ಯರು, ವಿಧಾನಸಭೆಗೆ ಅವಕಾಶ ಸಿಗದವರು, ಪಕ್ಷದಲ್ಲಿ ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದವರೆಲ್ಲ ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.</p><p>11 ಸ್ಥಾನಗಳ ಪೈಕಿ ಏಳು ಸ್ಥಾನಗಳು ಕಾಂಗ್ರೆಸ್, ಮೂರು ಬಿಜೆಪಿ ಹಾಗೂ ಒಂದು ಜೆಡಿಎಸ್ಗೆ ಸಿಗಲಿದೆ ಎಂಬ ಲೆಕ್ಕಾಚಾರವಿದೆ. ಅದೇ ಲೆಕ್ಕಾಚಾರದಲ್ಲಿ ಕಾಂಗ್ರೆಸ್ನಲ್ಲಿ ಆಕಾಂಕ್ಷಿಗಳ ದೊಡ್ಡ ದಂಡೇ ಇದೆ. ಈಗಾಗಲೇ ಬೆಂಗಳೂರು, ದೆಹಲಿ ನಾಯಕರ ಮೂಲಕ ಪ್ರಯತ್ನ ಕಾರ್ಯ ಆರಂಭಿಸಿದ್ದಾರೆ.</p><p>ಸುದೀರ್ಘ ಕಾಲ ವಿಧಾನ ಪರಿಷತ್ ಸದಸ್ಯರು, ಸಚಿವರೂ ಆಗಿದ್ದ ಎಸ್.ಆರ್. ಪಾಟೀಲರಿಗೆ ಈ ಹಿಂದೆ ಪರಿಷತ್ ಟಿಕೆಟ್ ನಿರಾಕರಿಸಲಾಗಿತ್ತು. ವಿಧಾನಸಭೆ ಚುನಾವಣೆಗೂ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಿಂದ ಆಕಾಂಕ್ಷಿಯಾಗಿದ್ದರು. ಆಗಲೂ ಟಿಕೆಟ್ ಸಿಕ್ಕಿರಲಿಲ್ಲ. ಹಾಗಾಗಿ, ವಿಧಾನ ಪರಿಷತ್ ಪ್ರವೇಶದ ಅವಕಾಶ ನಿರೀಕ್ಷೆಯಲ್ಲಿದ್ದಾರೆ.</p><p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಈ ಹಿಂದೆ ಶಾಸಕರಾಗಿದ್ದರು. ಒಂದು ಬಾರಿ ಮೇಲ್ಮನೆಯ ಪ್ರವೇಶಕ್ಕೂ ಆಕಾಂಕ್ಷಿಯಾಗಿದ್ದಾರೆ. ಇದಲ್ಲದೆ ಮಾಜಿ ಸಚಿವ ಅಜಯಕುಮಾರ ಸರನಾಯಕ ಕೂಡ ಒಂದು ಕೈ ನೋಡಲು ಸಜ್ಜಾಗಿದ್ದಾರೆ. ಇವರ ಲ್ಲದೆ ಹಲವು ನಾಯಕರು ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.</p><p>ಕೆಲ ತಿಂಗಳ ಹಿಂದೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಟಿ ಉಮಾಶ್ರೀ ಅವರಿಗೆ ಅವಕಾಶ ನೀಡಲಾಗಿದೆ. ಅವರು ಈ ಹಿಂದೆ ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿದ್ದರು. ಹಾಗಾಗಿ, ಅವರನ್ನು ಜಿಲ್ಲೆಯ ಕೋಟಾದಿಂದ ಪರಿಗಣಿಸಲಾಗಿತ್ತು ಎಂದು ಕಾಂಗ್ರೆಸ್ ರಾಜ್ಯ ನಾಯಕರು ಹೇಳುತ್ತಿರುವುದು ಆಕಾಂಕ್ಷಿಗಳಿಗೆ ಅಡ್ಡಿಯಾಗುವ ಲಕ್ಷಣಗಳಿವೆ.</p><p>ಬಿಜೆಪಿಯಲ್ಲಿ ಹೆಚ್ಚಿನ ಚಟುವಟಿಕೆಗಳು ಬಹಿರಂಗವಾಗಿ ಕಾಣಿಸುತ್ತಿಲ್ಲ. ಆದರೆ, ಹಲವು ಮಾಜಿ ಶಾಸಕರು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಕೆಲ ತಿಂಗಳ ಹಿಂದೆ ರಾಜ್ಯಸಭೆಗೆ ಬಾಗಲಕೋಟೆಯ ನಾರಾಯಣ ಭಾಂಡಗೆ ಅವರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ, ವಿಧಾನ ಪರಿಷತ್ಗೆ ಅವಕಾಶ ಸಿಗುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.</p>.<h2><strong>ಜಿಲ್ಲೆಗೆ ಅವಕಾಶ ನೀಡಲು ಮನವಿ</strong></h2>.<p>ಬಾಗಲಕೋಟೆ: ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಗೆ ಪ್ರಾತಿನಿಧ್ಯ ನೀಡಬೇಕು ಎಂದು ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಹದ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.</p><p>ಸ್ಥಳೀಯ ಸಂಸ್ಥೆ, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಾಗಲಕೋಟೆ ಜಿಲ್ಲೆಗೆ ಪ್ರಾತಿನಿಧ್ಯ ಸಿಗಲಿಲ್ಲ. ಲೋಕಸಭೆಯ ಚುನಾವಣೆಯಲ್ಲಿಯೂ ಜಿಲ್ಲೆಯ ಆಕಾಂಕ್ಷಿಗಳಿಗೆ ಅವಕಾಶ ನೀಡಲಿಲ್ಲ. ಆದರಿಂದ, ಪರಿಷತ್ ಸದಸ್ಯ ಸ್ಥಾನಕ್ಕೆ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದ್ದಾರೆ.</p>.<h2>ಬೆಳ್ಳುಬ್ಬಿಗೆ ಅವಕಾಶಕ್ಕೆ ಆಗ್ರಹ</h2>.<p><strong>ಬಾಗಲಕೋಟೆ:</strong> ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗಾಣಿಗ ಸಮಾಜದ ಎಸ್.ಕೆ. ಬೆಳ್ಳುಬ್ಬಿ ಅವರಿಗೆ ಅವಕಾಶ ನೀಡಬೇಕು ಎಂದು ಜಿಲ್ಲಾ ಗಾಣಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ಗೋಡಿ, ಮುಖಂಡ ಪ್ರಕಾಶ ಅಂತರಗೊಂಡ ಮಾತನಾಡಿ, ಸಮಾಜದ ನಾಯಕರಿಗೆ ರಾಜಕೀಯವಾಗಿ ಅವಕಾಶಗಳು ಸಿಕ್ಕಿಲ್ಲ. ಸಚಿವರಾಗಿ ಉತ್ತಮ ಕೆಲಸ ಮಾಡಿರುವ ಬೆಳ್ಳುಬ್ಬಿ ಅವರಿಗೆ ಸಮಾಜದ ಪರವಾಗಿ ಅವಕಾಶ ನೀಡಬೆಕು ಎಂದು ಒತ್ತಾಯಿಸಿದರು.</p><p>ಗಾಣಿಗ ಸಮಾಜದ ಲಕ್ಷ್ಮಣ ಸವದಿ ಅವರಿಗೆ ಈ ಹಿಂದೆ ಅವಕಾಶ ನೀಡದ್ದರಿಂದ ಪಕ್ಷಕ್ಕೆ ಹಾನಿಯಾಯಿತು. ಮತ್ತೆ ಅದು ಮರುಕಳಿಸಬಾರದು. ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡರೆ, ಮುಂದಿನ ದಿನಗಳಲ್ಲಿ ಸೂಕ್ತ ರಾಜಕೀಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.</p><p>ಸಂಗಪ್ಪ, ಎಂ.ಎಸ್. ನಾಡಗೌಡರ, ಎಸ್.ವೈ.ಕಣಗಿ, ಬಿ.ಎಫ್. ಹೊರಕೇರ, ಪಿ.ಎಂ. ಗಾಣಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ವಿಧಾನಸಭೆಯಿಂದ ವಿಧಾನ ಪರಿಷತ್ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯೊಂದಿಗೆ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.</p>.<p>ವಿಧಾನ ಪರಿಷತ್ ಮಾಜಿ ಸದಸ್ಯರು, ವಿಧಾನಸಭೆಗೆ ಅವಕಾಶ ಸಿಗದವರು, ಪಕ್ಷದಲ್ಲಿ ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದವರೆಲ್ಲ ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.</p><p>11 ಸ್ಥಾನಗಳ ಪೈಕಿ ಏಳು ಸ್ಥಾನಗಳು ಕಾಂಗ್ರೆಸ್, ಮೂರು ಬಿಜೆಪಿ ಹಾಗೂ ಒಂದು ಜೆಡಿಎಸ್ಗೆ ಸಿಗಲಿದೆ ಎಂಬ ಲೆಕ್ಕಾಚಾರವಿದೆ. ಅದೇ ಲೆಕ್ಕಾಚಾರದಲ್ಲಿ ಕಾಂಗ್ರೆಸ್ನಲ್ಲಿ ಆಕಾಂಕ್ಷಿಗಳ ದೊಡ್ಡ ದಂಡೇ ಇದೆ. ಈಗಾಗಲೇ ಬೆಂಗಳೂರು, ದೆಹಲಿ ನಾಯಕರ ಮೂಲಕ ಪ್ರಯತ್ನ ಕಾರ್ಯ ಆರಂಭಿಸಿದ್ದಾರೆ.</p><p>ಸುದೀರ್ಘ ಕಾಲ ವಿಧಾನ ಪರಿಷತ್ ಸದಸ್ಯರು, ಸಚಿವರೂ ಆಗಿದ್ದ ಎಸ್.ಆರ್. ಪಾಟೀಲರಿಗೆ ಈ ಹಿಂದೆ ಪರಿಷತ್ ಟಿಕೆಟ್ ನಿರಾಕರಿಸಲಾಗಿತ್ತು. ವಿಧಾನಸಭೆ ಚುನಾವಣೆಗೂ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಿಂದ ಆಕಾಂಕ್ಷಿಯಾಗಿದ್ದರು. ಆಗಲೂ ಟಿಕೆಟ್ ಸಿಕ್ಕಿರಲಿಲ್ಲ. ಹಾಗಾಗಿ, ವಿಧಾನ ಪರಿಷತ್ ಪ್ರವೇಶದ ಅವಕಾಶ ನಿರೀಕ್ಷೆಯಲ್ಲಿದ್ದಾರೆ.</p><p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಈ ಹಿಂದೆ ಶಾಸಕರಾಗಿದ್ದರು. ಒಂದು ಬಾರಿ ಮೇಲ್ಮನೆಯ ಪ್ರವೇಶಕ್ಕೂ ಆಕಾಂಕ್ಷಿಯಾಗಿದ್ದಾರೆ. ಇದಲ್ಲದೆ ಮಾಜಿ ಸಚಿವ ಅಜಯಕುಮಾರ ಸರನಾಯಕ ಕೂಡ ಒಂದು ಕೈ ನೋಡಲು ಸಜ್ಜಾಗಿದ್ದಾರೆ. ಇವರ ಲ್ಲದೆ ಹಲವು ನಾಯಕರು ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.</p><p>ಕೆಲ ತಿಂಗಳ ಹಿಂದೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಟಿ ಉಮಾಶ್ರೀ ಅವರಿಗೆ ಅವಕಾಶ ನೀಡಲಾಗಿದೆ. ಅವರು ಈ ಹಿಂದೆ ಬಾಗಲಕೋಟೆ ಜಿಲ್ಲೆಯ ತೇರದಾಳ ವಿಧಾನಸಭಾ ಕ್ಷೇತ್ರದಿಂದ ಶಾಸಕಿಯಾಗಿದ್ದರು. ಹಾಗಾಗಿ, ಅವರನ್ನು ಜಿಲ್ಲೆಯ ಕೋಟಾದಿಂದ ಪರಿಗಣಿಸಲಾಗಿತ್ತು ಎಂದು ಕಾಂಗ್ರೆಸ್ ರಾಜ್ಯ ನಾಯಕರು ಹೇಳುತ್ತಿರುವುದು ಆಕಾಂಕ್ಷಿಗಳಿಗೆ ಅಡ್ಡಿಯಾಗುವ ಲಕ್ಷಣಗಳಿವೆ.</p><p>ಬಿಜೆಪಿಯಲ್ಲಿ ಹೆಚ್ಚಿನ ಚಟುವಟಿಕೆಗಳು ಬಹಿರಂಗವಾಗಿ ಕಾಣಿಸುತ್ತಿಲ್ಲ. ಆದರೆ, ಹಲವು ಮಾಜಿ ಶಾಸಕರು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಕೆಲ ತಿಂಗಳ ಹಿಂದೆ ರಾಜ್ಯಸಭೆಗೆ ಬಾಗಲಕೋಟೆಯ ನಾರಾಯಣ ಭಾಂಡಗೆ ಅವರಿಗೆ ಅವಕಾಶ ನೀಡಲಾಗಿದೆ. ಹೀಗಾಗಿ, ವಿಧಾನ ಪರಿಷತ್ಗೆ ಅವಕಾಶ ಸಿಗುವ ಸಾಧ್ಯತೆಗಳು ಕಡಿಮೆ ಎನ್ನಲಾಗುತ್ತಿದೆ.</p>.<h2><strong>ಜಿಲ್ಲೆಗೆ ಅವಕಾಶ ನೀಡಲು ಮನವಿ</strong></h2>.<p>ಬಾಗಲಕೋಟೆ: ವಿಧಾನಸಭೆಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆಗೆ ಪ್ರಾತಿನಿಧ್ಯ ನೀಡಬೇಕು ಎಂದು ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಹದ್ಲಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ.</p><p>ಸ್ಥಳೀಯ ಸಂಸ್ಥೆ, ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಾಗಲಕೋಟೆ ಜಿಲ್ಲೆಗೆ ಪ್ರಾತಿನಿಧ್ಯ ಸಿಗಲಿಲ್ಲ. ಲೋಕಸಭೆಯ ಚುನಾವಣೆಯಲ್ಲಿಯೂ ಜಿಲ್ಲೆಯ ಆಕಾಂಕ್ಷಿಗಳಿಗೆ ಅವಕಾಶ ನೀಡಲಿಲ್ಲ. ಆದರಿಂದ, ಪರಿಷತ್ ಸದಸ್ಯ ಸ್ಥಾನಕ್ಕೆ ಜಿಲ್ಲೆಯವರಿಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದ್ದಾರೆ.</p>.<h2>ಬೆಳ್ಳುಬ್ಬಿಗೆ ಅವಕಾಶಕ್ಕೆ ಆಗ್ರಹ</h2>.<p><strong>ಬಾಗಲಕೋಟೆ:</strong> ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗಾಣಿಗ ಸಮಾಜದ ಎಸ್.ಕೆ. ಬೆಳ್ಳುಬ್ಬಿ ಅವರಿಗೆ ಅವಕಾಶ ನೀಡಬೇಕು ಎಂದು ಜಿಲ್ಲಾ ಗಾಣಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ಆಗ್ರಹಿಸಿದೆ.</p><p>ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಲಿಂಗಣ್ಣ ಗೋಡಿ, ಮುಖಂಡ ಪ್ರಕಾಶ ಅಂತರಗೊಂಡ ಮಾತನಾಡಿ, ಸಮಾಜದ ನಾಯಕರಿಗೆ ರಾಜಕೀಯವಾಗಿ ಅವಕಾಶಗಳು ಸಿಕ್ಕಿಲ್ಲ. ಸಚಿವರಾಗಿ ಉತ್ತಮ ಕೆಲಸ ಮಾಡಿರುವ ಬೆಳ್ಳುಬ್ಬಿ ಅವರಿಗೆ ಸಮಾಜದ ಪರವಾಗಿ ಅವಕಾಶ ನೀಡಬೆಕು ಎಂದು ಒತ್ತಾಯಿಸಿದರು.</p><p>ಗಾಣಿಗ ಸಮಾಜದ ಲಕ್ಷ್ಮಣ ಸವದಿ ಅವರಿಗೆ ಈ ಹಿಂದೆ ಅವಕಾಶ ನೀಡದ್ದರಿಂದ ಪಕ್ಷಕ್ಕೆ ಹಾನಿಯಾಯಿತು. ಮತ್ತೆ ಅದು ಮರುಕಳಿಸಬಾರದು. ಕೇವಲ ಮತ ಬ್ಯಾಂಕ್ ಆಗಿ ಬಳಸಿಕೊಂಡರೆ, ಮುಂದಿನ ದಿನಗಳಲ್ಲಿ ಸೂಕ್ತ ರಾಜಕೀಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.</p><p>ಸಂಗಪ್ಪ, ಎಂ.ಎಸ್. ನಾಡಗೌಡರ, ಎಸ್.ವೈ.ಕಣಗಿ, ಬಿ.ಎಫ್. ಹೊರಕೇರ, ಪಿ.ಎಂ. ಗಾಣಿಗೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>