<p><strong>ಬೀಳಗಿ</strong>: ತಾಲ್ಲೂಕಿನ ಕುಂದರಗಿ ಜೆಮ್ ಸಕ್ಕರೆ ಕಾರ್ಖಾನೆಗೆ ಮುಧೋಳ ಭಾಗದ ರೈತರು ಸೋಮವಾರ ರಾತ್ರಿ ನೂರಾರು ಜನರು ಮುತ್ತಿಗೆ ಹಾಕಿ ಕಾರ್ಖಾನೆ ಪ್ರಾರಂಭಿಸದಂತೆ ಪ್ರತಿಭಟನೆ ನಡೆಸಿದರು.</p>.<p>ಕಾರ್ಖಾನೆ ಆಡಳಿತ ಮಂಡಳಿ ಪರವಾಗಿ ಹಿರಿಯ ಅಧಿಕಾರಿ ಎಸ್. ಮೋಹನರಾಜ್, ಹೇಮಚಂದ್ರ ಅವರು, ಸರ್ಕಾರ ನಿಗದಿ ಪಡಿಸಿದ ಸಕ್ಕರೆ ಪ್ರಮಾಣದ ಇಳುವರಿ ಪ್ರಕಾರ ₹3,260 (ಸರ್ಕಾರದ ₹50 ಸೇರಿ) ದರ ಕೊಡುತ್ತೇವೆ ಎಂದು ಹೇಳಿದರು. ಅದಕ್ಕೊಪ್ಪದ ಪ್ರತಿಭಟನಾಕಾರರು ₹3,500 ದರ ಘೋಷಣೆ ಮಾಡಿಯೇ ಸಕ್ಕರೆ ಕಾರ್ಖಾನೆ ಪ್ರಾರಂಭಿಸಬೇಕು ಎಂದು ಪಟ್ಟು ಹಿಡಿದರು.</p>.<p>ಕಾರ್ಖಾನೆ ಕೇನ್ ಯಾರ್ಡ್ನಲ್ಲಿ ಕಬ್ಬು ಹೊತ್ತು ತಂದಿದ್ದ ಸುಮಾರು ಐವತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳನ್ನು ಹೊರಗೆ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಾಗ, ಕಾರ್ಖಾನೆಯ ಅಧಿಕಾರಿಗಳು ಅನಿವಾರ್ಯವಾಗಿ ಟ್ರ್ಯಾಕ್ಟರ್ಗಳನ್ನು ಕಾರ್ಖಾನೆಯಿಂದ ಹೊರಗಡೆ ಕಳಿಸಿದರು.</p>.<p>ಕಾರ್ಖಾನೆ ಅಧಿಕಾರಿಗಳು ಆಡಳಿತ ಮಂಡಳಿಯೊಂದಿಗೆ ಮಾತನಾಡಿ ತಮ್ಮ ಬೇಡಿಕೆಯನ್ನು ತಿಳಿಸುತ್ತೇವೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಿಪಿಐ ಹನಮಂತ ಸಣಮನಿ ಸಿಬ್ಬಂದಿಯೊಂದಿಗೆ ಬಂದು ಬಂದೋಬಸ್ತ್ ಮಾಡಿದ್ದಾರೆ. ಹೋರಾಟಗಾರರಾದ ಮುತ್ತಪ್ಪ ಕೋಮಾರ, ಬಸವಂತ ಕಾಂಬಳೆ, ಸುಭಾಸ ಶಿರಬೂರ, ದುಂಡಪ್ಪ ಯರಗಟ್ಟಿ, ಸಿದ್ದಪ್ಪ ಬಳಗಾನೂರ, ಪರಶುರಾಮ ಮಂಟೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ತಾಲ್ಲೂಕಿನ ಕುಂದರಗಿ ಜೆಮ್ ಸಕ್ಕರೆ ಕಾರ್ಖಾನೆಗೆ ಮುಧೋಳ ಭಾಗದ ರೈತರು ಸೋಮವಾರ ರಾತ್ರಿ ನೂರಾರು ಜನರು ಮುತ್ತಿಗೆ ಹಾಕಿ ಕಾರ್ಖಾನೆ ಪ್ರಾರಂಭಿಸದಂತೆ ಪ್ರತಿಭಟನೆ ನಡೆಸಿದರು.</p>.<p>ಕಾರ್ಖಾನೆ ಆಡಳಿತ ಮಂಡಳಿ ಪರವಾಗಿ ಹಿರಿಯ ಅಧಿಕಾರಿ ಎಸ್. ಮೋಹನರಾಜ್, ಹೇಮಚಂದ್ರ ಅವರು, ಸರ್ಕಾರ ನಿಗದಿ ಪಡಿಸಿದ ಸಕ್ಕರೆ ಪ್ರಮಾಣದ ಇಳುವರಿ ಪ್ರಕಾರ ₹3,260 (ಸರ್ಕಾರದ ₹50 ಸೇರಿ) ದರ ಕೊಡುತ್ತೇವೆ ಎಂದು ಹೇಳಿದರು. ಅದಕ್ಕೊಪ್ಪದ ಪ್ರತಿಭಟನಾಕಾರರು ₹3,500 ದರ ಘೋಷಣೆ ಮಾಡಿಯೇ ಸಕ್ಕರೆ ಕಾರ್ಖಾನೆ ಪ್ರಾರಂಭಿಸಬೇಕು ಎಂದು ಪಟ್ಟು ಹಿಡಿದರು.</p>.<p>ಕಾರ್ಖಾನೆ ಕೇನ್ ಯಾರ್ಡ್ನಲ್ಲಿ ಕಬ್ಬು ಹೊತ್ತು ತಂದಿದ್ದ ಸುಮಾರು ಐವತ್ತಕ್ಕೂ ಹೆಚ್ಚು ಟ್ರ್ಯಾಕ್ಟರ್ಗಳನ್ನು ಹೊರಗೆ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಾಗ, ಕಾರ್ಖಾನೆಯ ಅಧಿಕಾರಿಗಳು ಅನಿವಾರ್ಯವಾಗಿ ಟ್ರ್ಯಾಕ್ಟರ್ಗಳನ್ನು ಕಾರ್ಖಾನೆಯಿಂದ ಹೊರಗಡೆ ಕಳಿಸಿದರು.</p>.<p>ಕಾರ್ಖಾನೆ ಅಧಿಕಾರಿಗಳು ಆಡಳಿತ ಮಂಡಳಿಯೊಂದಿಗೆ ಮಾತನಾಡಿ ತಮ್ಮ ಬೇಡಿಕೆಯನ್ನು ತಿಳಿಸುತ್ತೇವೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಿಪಿಐ ಹನಮಂತ ಸಣಮನಿ ಸಿಬ್ಬಂದಿಯೊಂದಿಗೆ ಬಂದು ಬಂದೋಬಸ್ತ್ ಮಾಡಿದ್ದಾರೆ. ಹೋರಾಟಗಾರರಾದ ಮುತ್ತಪ್ಪ ಕೋಮಾರ, ಬಸವಂತ ಕಾಂಬಳೆ, ಸುಭಾಸ ಶಿರಬೂರ, ದುಂಡಪ್ಪ ಯರಗಟ್ಟಿ, ಸಿದ್ದಪ್ಪ ಬಳಗಾನೂರ, ಪರಶುರಾಮ ಮಂಟೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>