<p>ಮುಧೋಳ: ಬಡವರು, ವಿಧವೆಯರು, ದೀನ-ದಲಿತರು ಸಹ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಸಹಾಯಕಾರಿ ಆಗಿವೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಹೇಳಿದರು.</p>.<p>ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾ ಪಂಚಾಯ್ತಿ ಬಾಗಲಕೋಟೆ, ಮತ್ತು ತಾ.ಪಂ ಸಹಯೋಗದಲ್ಲಿ 2021-22ನೇ ಸಾಲಿನ ಬಸವ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ (ಹೆಚ್ಚುವರಿ) ಅಡಿ ಅರ್ಹ ಫಲಾನುಭವಿಗಳಿಗೆ ಶನಿವಾರ ಕಾಮಗಾರಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.</p>.<p>ಬರಗಾಲ ನಿರ್ವಹಣೆಗೆ ಸಿದ್ಧತೆ: ಪ್ರಕೃತಿ ವಿಕೋಪದಿಂದ ಕಳೆದ ಬಾರಿ ಮಳೆ ಪ್ರಮಾಣ ಕಡಿಮೆ ಆದ ಕಾರಣ ನೀರಿನ ಅಭಾವ ಹೆಚ್ಚಾಗುತ್ತಿದೆ. ಸರ್ಕಾರದಿಂದ ನೀರಿನ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ನಗರದ ಬೈಪಾಸ್ ರಸ್ತೆಗೆ ₹10 ಕೋಟಿ, ನಗರದ ಉದ್ಯಾನ ಅಭಿವೃಧ್ಧಿಗಾಗಿ ₹5 ಕೋಟಿ, ಕುಡಿಯುವ ನೀರಿಗೆ ₹1.5 ಕೋಟಿ, ಹೀಗೆ ವಿವಿಧ ಗ್ರಾಮಗಳ ಅಭಿವೃದ್ಧಿಗಾಗಿ ಒಟ್ಟು ₹36 ಕೋಟಿ ಅನುದಾನ ಬಿಡುಗಡೆ ಆಗಿದೆ. ಅಭಿವೃಧ್ಧಿ ಕಾಮಗಾರಿಗಳಿಗೂ ಹಣದ ಕೊರತೆ ಇಲ್ಲ ಎಂದು ಹೇಳಿದರು.</p>.<p>ತಹಶೀಲ್ದಾರ್ ವಿನೋದ ಹತ್ತಳ್ಳಿ, ತಾಲ್ಲೂಕು ಪಂಚಾಯ್ತಿ ಇಒ ಅಧಿಕಾರಿ ಸಂಜಿವ ಹಿಪ್ಪರಗಿ, ಅಧಿಕಾರಿಗಳು, ಮುಖಂಡರು ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಧೋಳ: ಬಡವರು, ವಿಧವೆಯರು, ದೀನ-ದಲಿತರು ಸಹ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಸರ್ಕಾರದ 5 ಗ್ಯಾರಂಟಿ ಯೋಜನೆಗಳು ಸಹಾಯಕಾರಿ ಆಗಿವೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪೂರ ಹೇಳಿದರು.</p>.<p>ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಜಿಲ್ಲಾ ಪಂಚಾಯ್ತಿ ಬಾಗಲಕೋಟೆ, ಮತ್ತು ತಾ.ಪಂ ಸಹಯೋಗದಲ್ಲಿ 2021-22ನೇ ಸಾಲಿನ ಬಸವ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ (ಹೆಚ್ಚುವರಿ) ಅಡಿ ಅರ್ಹ ಫಲಾನುಭವಿಗಳಿಗೆ ಶನಿವಾರ ಕಾಮಗಾರಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.</p>.<p>ಬರಗಾಲ ನಿರ್ವಹಣೆಗೆ ಸಿದ್ಧತೆ: ಪ್ರಕೃತಿ ವಿಕೋಪದಿಂದ ಕಳೆದ ಬಾರಿ ಮಳೆ ಪ್ರಮಾಣ ಕಡಿಮೆ ಆದ ಕಾರಣ ನೀರಿನ ಅಭಾವ ಹೆಚ್ಚಾಗುತ್ತಿದೆ. ಸರ್ಕಾರದಿಂದ ನೀರಿನ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ನಗರದ ಬೈಪಾಸ್ ರಸ್ತೆಗೆ ₹10 ಕೋಟಿ, ನಗರದ ಉದ್ಯಾನ ಅಭಿವೃಧ್ಧಿಗಾಗಿ ₹5 ಕೋಟಿ, ಕುಡಿಯುವ ನೀರಿಗೆ ₹1.5 ಕೋಟಿ, ಹೀಗೆ ವಿವಿಧ ಗ್ರಾಮಗಳ ಅಭಿವೃದ್ಧಿಗಾಗಿ ಒಟ್ಟು ₹36 ಕೋಟಿ ಅನುದಾನ ಬಿಡುಗಡೆ ಆಗಿದೆ. ಅಭಿವೃಧ್ಧಿ ಕಾಮಗಾರಿಗಳಿಗೂ ಹಣದ ಕೊರತೆ ಇಲ್ಲ ಎಂದು ಹೇಳಿದರು.</p>.<p>ತಹಶೀಲ್ದಾರ್ ವಿನೋದ ಹತ್ತಳ್ಳಿ, ತಾಲ್ಲೂಕು ಪಂಚಾಯ್ತಿ ಇಒ ಅಧಿಕಾರಿ ಸಂಜಿವ ಹಿಪ್ಪರಗಿ, ಅಧಿಕಾರಿಗಳು, ಮುಖಂಡರು ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>