<p><strong>ಮುಧೋಳ:</strong> ಬಿಜೆಪಿಯಿಂದ ಉಚ್ಚಾಟಣೆಗೊಂಡ ಸಹಕಾರಿ ಧುರೀಣ ರಾಮಣ್ಣ ತಳೇವಾಡ ಅವರ ಮುಂದಾಳತ್ವದಲ್ಲಿ ನಡೆದ ಮಾಚಕನೂರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಶುಕ್ರವಾರ ನಡೆಯಿತು.</p>.<p>ರಾಮಣ್ಣ ತಳೇವಾಡ ಅವರ ಬೆಂಬಲಿಗರಾದ ಹಿರೇಆಲಗುಂಡಿಯ ಸದಸ್ಯ ಬಸವರಾಜ ಚಿಪ್ಪಲಕಟ್ಟಿ ಅಧ್ಯಕ್ಷರಾಗಿ ಹಾಗೂ ಮಾಚಕನೂರಿನ ಸದಸ್ಯೆ ಮಹಾದೇವಿ ದುಮ್ಮಾಳೆ ಉಪಾಧ್ಯಕ್ಷರಾಗಿ ಆಯ್ಕೆಯಾದರು.</p>.<p>‘ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ಶುಕ್ರವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಎರಡೂ ಸ್ಥಾನಕ್ಕೆ ತಲಾ ಒಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧವಾಗಿ ಆಯ್ಕೆ ಮಾಡಲಾಯಿತು’ ಎಂದು ರಿಟರ್ನಿಂಗ್ ಆಫೀಸರ್ ಸಂಜೀವ ಹಿಪ್ಪರಗಿ ತಿಳಿಸಿದ್ದಾರೆ.</p>.<p>ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಿಹಿ ತಿನ್ನಿಸಿ, ಸನ್ಮಾನಿಸಿ, ಅಭಿನಂದಿಸಿದರು.</p>.<p>ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಭೀಮನಗೌಡ ಪಾಟೀಲ, ಸಿದ್ದು ಸೊನ್ನದ, ಲಕ್ಕಪ್ಪ ಕರೋಲಿ ಹಾಗೂ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕವಿತಾ ಮಂಟೂರ, ಕಾರ್ಯದರ್ಶಿ ವೆಂಕಣ್ಣ ಬಿದರಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ:</strong> ಬಿಜೆಪಿಯಿಂದ ಉಚ್ಚಾಟಣೆಗೊಂಡ ಸಹಕಾರಿ ಧುರೀಣ ರಾಮಣ್ಣ ತಳೇವಾಡ ಅವರ ಮುಂದಾಳತ್ವದಲ್ಲಿ ನಡೆದ ಮಾಚಕನೂರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಶುಕ್ರವಾರ ನಡೆಯಿತು.</p>.<p>ರಾಮಣ್ಣ ತಳೇವಾಡ ಅವರ ಬೆಂಬಲಿಗರಾದ ಹಿರೇಆಲಗುಂಡಿಯ ಸದಸ್ಯ ಬಸವರಾಜ ಚಿಪ್ಪಲಕಟ್ಟಿ ಅಧ್ಯಕ್ಷರಾಗಿ ಹಾಗೂ ಮಾಚಕನೂರಿನ ಸದಸ್ಯೆ ಮಹಾದೇವಿ ದುಮ್ಮಾಳೆ ಉಪಾಧ್ಯಕ್ಷರಾಗಿ ಆಯ್ಕೆಯಾದರು.</p>.<p>‘ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕಾಗಿ ಶುಕ್ರವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಎರಡೂ ಸ್ಥಾನಕ್ಕೆ ತಲಾ ಒಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧವಾಗಿ ಆಯ್ಕೆ ಮಾಡಲಾಯಿತು’ ಎಂದು ರಿಟರ್ನಿಂಗ್ ಆಫೀಸರ್ ಸಂಜೀವ ಹಿಪ್ಪರಗಿ ತಿಳಿಸಿದ್ದಾರೆ.</p>.<p>ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಪಂಚಾಯಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಸಿಹಿ ತಿನ್ನಿಸಿ, ಸನ್ಮಾನಿಸಿ, ಅಭಿನಂದಿಸಿದರು.</p>.<p>ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಭೀಮನಗೌಡ ಪಾಟೀಲ, ಸಿದ್ದು ಸೊನ್ನದ, ಲಕ್ಕಪ್ಪ ಕರೋಲಿ ಹಾಗೂ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕವಿತಾ ಮಂಟೂರ, ಕಾರ್ಯದರ್ಶಿ ವೆಂಕಣ್ಣ ಬಿದರಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>