<p><strong>ಮುಧೋಳ:</strong> ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪೌರಾಯುಕ್ತರು ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷ ಗುರುಪಾದ ಕುಳಲಿ ಆರೋಪಿಸಿದ್ದಾರೆ.</p>.<p>ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ ಬಿಜೆಪಿ ನಗರ ಮಂಡಲದಿಂದ ಮೇ 26ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ನಗರದಲ್ಲಿ 20 ರಿಂದ 25 ದಿನಗಳಿಗೆ ಒಮ್ಮೆ ನೀರು ಬಿಡಲಾಗುತ್ತಿದೆ. ಬೀದಿ ದೀಪವಿಲ್ಲದೆ ಜನರಿಗೆ ತೊಂದರೆಯಾಗುತ್ತಿದೆ. ಚರಂಡಿ ಸ್ವಚ್ಛವಾಗಿಲ್ಲ. ನಗರದ ರಸ್ತೆಯಲ್ಲಿ ತೆಗ್ಗುಗಳು ಬಿದ್ದಿವೆ ಅವುಗಳನ್ನು ಮುಚ್ಚುತ್ತಿಲ್ಲ. ನಗರದ ಎರಡು ಸ್ಮಶಾನಗಳಲ್ಲಿ ಹೈಮಾಸ್ಟ್ ದೀಪ ಹಾಳಾಗಿದ್ದು ದುರಸ್ತಿ ನಡೆಯುತ್ತಿಲ್ಲ. ನಗರಸಭೆ ಪಕ್ಕ ₹4 ಕೋಟಿ ವೆಚ್ಚದ ತರಕಾರಿ ಮಾರುಕಟ್ಟೆ ನಿರ್ಮಿಸಿ ಉದ್ಘಾಟನೆಯಾದರೂ ಉಪಯೋಗವಾಗುತ್ತಿಲ್ಲ. ಇದರಿಂದ ಸಣ್ಣ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದೆ. ಈ ಎಲ್ಲ ವಿಷಯಗಳನ್ನು ಪೌರಾಯುಕ್ತರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-19-2023649309</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ:</strong> ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪೌರಾಯುಕ್ತರು ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷ ಗುರುಪಾದ ಕುಳಲಿ ಆರೋಪಿಸಿದ್ದಾರೆ.</p>.<p>ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ ಬಿಜೆಪಿ ನಗರ ಮಂಡಲದಿಂದ ಮೇ 26ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p>ನಗರದಲ್ಲಿ 20 ರಿಂದ 25 ದಿನಗಳಿಗೆ ಒಮ್ಮೆ ನೀರು ಬಿಡಲಾಗುತ್ತಿದೆ. ಬೀದಿ ದೀಪವಿಲ್ಲದೆ ಜನರಿಗೆ ತೊಂದರೆಯಾಗುತ್ತಿದೆ. ಚರಂಡಿ ಸ್ವಚ್ಛವಾಗಿಲ್ಲ. ನಗರದ ರಸ್ತೆಯಲ್ಲಿ ತೆಗ್ಗುಗಳು ಬಿದ್ದಿವೆ ಅವುಗಳನ್ನು ಮುಚ್ಚುತ್ತಿಲ್ಲ. ನಗರದ ಎರಡು ಸ್ಮಶಾನಗಳಲ್ಲಿ ಹೈಮಾಸ್ಟ್ ದೀಪ ಹಾಳಾಗಿದ್ದು ದುರಸ್ತಿ ನಡೆಯುತ್ತಿಲ್ಲ. ನಗರಸಭೆ ಪಕ್ಕ ₹4 ಕೋಟಿ ವೆಚ್ಚದ ತರಕಾರಿ ಮಾರುಕಟ್ಟೆ ನಿರ್ಮಿಸಿ ಉದ್ಘಾಟನೆಯಾದರೂ ಉಪಯೋಗವಾಗುತ್ತಿಲ್ಲ. ಇದರಿಂದ ಸಣ್ಣ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದೆ. ಈ ಎಲ್ಲ ವಿಷಯಗಳನ್ನು ಪೌರಾಯುಕ್ತರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-19-2023649309</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>