<p><strong>ಮುಧೋಳ</strong>: ರಾತ್ರಿವೇಳೆ ಮನೆಗಳ ಕೀಲಿ ಮುರಿದು ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹೇಳಿದರು.</p>.<p>ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುರ್ಗಪ್ಪ ವಾಲ್ಮೀಕಿ (25) ಹಾಗೂ ರಾಮಾಚಾರಿ ಉರ್ಫ್ ಯಲ್ಲಪ್ಪ ಗಡ್ಡಿ ಬಂಧಿತರು. ನಗರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಸತ್ಯ ತಿಳಿಯಿತು. ಬಂಧಿತರಿಂದ ಅಂದಾಜು ₹8 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಕಳ್ಳರ ಬಂಧನ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಸಿಪಿಐ ಎಂ.ಎನ್.ಶಿರಹಟ್ಟಿ, ಪಿಎಸ್ಐಗಳಾದ ಅಜಿತಕುಮಾರ ಹೊಸಮನಿ, ಪಿ.ಎಸ್.ಮುರನಾಳ, ಎಎಸ್ಐ ಬಿ.ಎಸ್.ದಾಸವ್ವಗೋಳ ಹಾಗೂ ಆರ್.ಬಿ. ಕಟಗೇರಿ, ಎಚ್.ಬಿ.ದಾಸರ, ಎಂ.ಬಿ.ದಳವಾಯಿ ಅವರಿಗೆ ಸೂಕ್ತ ಬಹುಮಾನ ನೀಡುವುದಾಗಿ ವರಿಷ್ಠಾಧಿಕಾರಿ ತಿಳಿಸಿದರು.</p>.<p>ಜಮಖಂಡಿ ಡಿಎಸ್ಪಿ ಸೈಯದ್ ರೋಷನ್ ಜಮೀರ್, ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐ ಅಜಿತಕುಮಾರ ಹೊಸಮನಿ, ಪಿ.ಎಸ್.ಮುರನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಧೋಳ</strong>: ರಾತ್ರಿವೇಳೆ ಮನೆಗಳ ಕೀಲಿ ಮುರಿದು ಕಳವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಹೇಳಿದರು.</p>.<p>ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದುರ್ಗಪ್ಪ ವಾಲ್ಮೀಕಿ (25) ಹಾಗೂ ರಾಮಾಚಾರಿ ಉರ್ಫ್ ಯಲ್ಲಪ್ಪ ಗಡ್ಡಿ ಬಂಧಿತರು. ನಗರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಸತ್ಯ ತಿಳಿಯಿತು. ಬಂಧಿತರಿಂದ ಅಂದಾಜು ₹8 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಕಳ್ಳರ ಬಂಧನ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಸಿಪಿಐ ಎಂ.ಎನ್.ಶಿರಹಟ್ಟಿ, ಪಿಎಸ್ಐಗಳಾದ ಅಜಿತಕುಮಾರ ಹೊಸಮನಿ, ಪಿ.ಎಸ್.ಮುರನಾಳ, ಎಎಸ್ಐ ಬಿ.ಎಸ್.ದಾಸವ್ವಗೋಳ ಹಾಗೂ ಆರ್.ಬಿ. ಕಟಗೇರಿ, ಎಚ್.ಬಿ.ದಾಸರ, ಎಂ.ಬಿ.ದಳವಾಯಿ ಅವರಿಗೆ ಸೂಕ್ತ ಬಹುಮಾನ ನೀಡುವುದಾಗಿ ವರಿಷ್ಠಾಧಿಕಾರಿ ತಿಳಿಸಿದರು.</p>.<p>ಜಮಖಂಡಿ ಡಿಎಸ್ಪಿ ಸೈಯದ್ ರೋಷನ್ ಜಮೀರ್, ಸಿಪಿಐ ಮಹಾದೇವ ಶಿರಹಟ್ಟಿ, ಪಿಎಸ್ಐ ಅಜಿತಕುಮಾರ ಹೊಸಮನಿ, ಪಿ.ಎಸ್.ಮುರನಾಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>