<p><strong>ಹುನಗುಂದ:</strong> ‘ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ತುಂಬ ಮಹತ್ವದ್ದಾಗಿದ್ದು, ಅವರು ಆರೋಗ್ಯವಂತ ಪರಿಸರ ನಿರ್ಮಾಣದ ಸೇನಾನಿಗಳಿದ್ದಂತೆ’ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ಪಟ್ಟಣದ ಗುರುಭವನದಲ್ಲಿ ಪುರಸಭೆಯ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪೌರ ಕಾರ್ಮಿಕರಿಗೆ ಸರ್ಕಾರ ಅನೇಕ ಸೌಲಭ್ಯ ನೀಡುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಪುರಸಭೆ ವತಿಯಿಂದ ನಿವೇಶನ ಮತ್ತು ಕಟ್ಟಡ ನಿರ್ಮಿಸಿ ಕೊಡಲಾಗುವುದು’ ಎಂದರು.</p>.<p>ನಿವೃತ್ತ ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಮಾತನಾಡಿ, ‘ಅನೇಕ ಸವಾಲುಗಳ ಮಧ್ಯೆಯೇ ವೃತ್ತಿ ಬದ್ಧತೆ ಮೆರೆಯುವ ಪೌರ ಕಾರ್ಮಿಕರು ಕೇವಲ ಕಾರ್ಮಿಕರಲ್ಲದೆ ನಿಜ ಕಾಯಕ ಜೀವಿಗಳಿದ್ದಂತೆ. ಸಮಾಜದಲ್ಲಿ ಇಂತಹ ವೃತ್ತಿಗಳನ್ನು ಮಾನವೀಯ ನೆಲೆಯಲ್ಲಿ ನೋಡಿದಾಗ ಮಾತ್ರ ಅವುಗಳ ವಾಸ್ತವತೆ ಅರಿಯಬಹುದು’ ಎಂದರು.</p>.<p>ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಪುರಸಭೆಯ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಮಾತನಾಡಿದರು.</p>.<p>ಗಚ್ಚಿನಮಠದ ಅಮರೇಶ್ವರ ದೇವರು ಸಾನ್ನಿಧ್ಯವಹಿಸಿದ್ದರು.</p>.<p>ಪೌರ ಕಾರ್ಮಿಕರಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿನ ವಿಜೇತರಿಗೆ ಬಹುಮಾನ ನೀಡಲಾಯಿತು ಹಾಗೂ ಎಲ್ಲ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.</p>.<p>ಉಪಾಧ್ಯಕ್ಷೆ ರಾಜವ್ವ ಬದಾಮಿ, ಪುರಸಭೆ ಸದಸ್ಯರಾದ ಚಂದ್ರು ತಳವಾರ, ಮಹ್ಮದ ದೋಟಿಹಾಳ, ಯಲ್ಲಪ್ಪ ನಡುವಿನಮನಿ, ಮೈನು ಧನ್ನೂರ, ಪರವೇಜ್ ಖಾಜಿ, ರಾಜು ಹಡಪದ, ಮಲ್ಲಪ್ಪ ಅಂಟರದಾನಿ, ಮಲ್ಲಣ್ಣ ಹೂಗಾರ, ಸಂಘದ ಅಧ್ಯಕ್ಷ ಮಹಾಂತೇಶ ತಾರಿವಾಳ, ಶ್ರೀನಿವಾಸ ಬದಾಮಿ, ಬಸವರಾಜ ಚಲವಾದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ:</strong> ‘ನಮ್ಮ ಸುತ್ತಲಿನ ಪರಿಸರವನ್ನು ಶುಚಿಯಾಗಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ತುಂಬ ಮಹತ್ವದ್ದಾಗಿದ್ದು, ಅವರು ಆರೋಗ್ಯವಂತ ಪರಿಸರ ನಿರ್ಮಾಣದ ಸೇನಾನಿಗಳಿದ್ದಂತೆ’ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.</p>.<p>ಪಟ್ಟಣದ ಗುರುಭವನದಲ್ಲಿ ಪುರಸಭೆಯ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪೌರ ಕಾರ್ಮಿಕರಿಗೆ ಸರ್ಕಾರ ಅನೇಕ ಸೌಲಭ್ಯ ನೀಡುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಪುರಸಭೆ ವತಿಯಿಂದ ನಿವೇಶನ ಮತ್ತು ಕಟ್ಟಡ ನಿರ್ಮಿಸಿ ಕೊಡಲಾಗುವುದು’ ಎಂದರು.</p>.<p>ನಿವೃತ್ತ ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಮಾತನಾಡಿ, ‘ಅನೇಕ ಸವಾಲುಗಳ ಮಧ್ಯೆಯೇ ವೃತ್ತಿ ಬದ್ಧತೆ ಮೆರೆಯುವ ಪೌರ ಕಾರ್ಮಿಕರು ಕೇವಲ ಕಾರ್ಮಿಕರಲ್ಲದೆ ನಿಜ ಕಾಯಕ ಜೀವಿಗಳಿದ್ದಂತೆ. ಸಮಾಜದಲ್ಲಿ ಇಂತಹ ವೃತ್ತಿಗಳನ್ನು ಮಾನವೀಯ ನೆಲೆಯಲ್ಲಿ ನೋಡಿದಾಗ ಮಾತ್ರ ಅವುಗಳ ವಾಸ್ತವತೆ ಅರಿಯಬಹುದು’ ಎಂದರು.</p>.<p>ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಪುರಸಭೆಯ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಮಾತನಾಡಿದರು.</p>.<p>ಗಚ್ಚಿನಮಠದ ಅಮರೇಶ್ವರ ದೇವರು ಸಾನ್ನಿಧ್ಯವಹಿಸಿದ್ದರು.</p>.<p>ಪೌರ ಕಾರ್ಮಿಕರಿಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿನ ವಿಜೇತರಿಗೆ ಬಹುಮಾನ ನೀಡಲಾಯಿತು ಹಾಗೂ ಎಲ್ಲ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.</p>.<p>ಉಪಾಧ್ಯಕ್ಷೆ ರಾಜವ್ವ ಬದಾಮಿ, ಪುರಸಭೆ ಸದಸ್ಯರಾದ ಚಂದ್ರು ತಳವಾರ, ಮಹ್ಮದ ದೋಟಿಹಾಳ, ಯಲ್ಲಪ್ಪ ನಡುವಿನಮನಿ, ಮೈನು ಧನ್ನೂರ, ಪರವೇಜ್ ಖಾಜಿ, ರಾಜು ಹಡಪದ, ಮಲ್ಲಪ್ಪ ಅಂಟರದಾನಿ, ಮಲ್ಲಣ್ಣ ಹೂಗಾರ, ಸಂಘದ ಅಧ್ಯಕ್ಷ ಮಹಾಂತೇಶ ತಾರಿವಾಳ, ಶ್ರೀನಿವಾಸ ಬದಾಮಿ, ಬಸವರಾಜ ಚಲವಾದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>