<p><strong>ಬಾಗಲಕೋಟೆ:</strong> ಮಗಳನ್ನುಪ್ರೀತಿಸಿ ಮದುವೆಯಾದ ಎಂಬ ಸಿಟ್ಟಿನಿಂದ ಮಗಳನ್ನು ಮದುವೆಯಾದ ಯುವಕನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿಕೊಂಡು ಶನಿವಾರ ತಡರಾತ್ರಿ ಜಮಖಂಡಿ ತಾಲ್ಲೂಕಿನ ಟಕ್ಕೋಡದಲ್ಲಿ ಕೊಲೆ ಮಾಡಿದ್ದಾರೆ.</p>.<p>ಜೈನ ಸಮುದಾಯಕ್ಕೆ ಸೇರಿದ ಭುಜಬಲಿ ಕರ್ಜಗಿ (34) ಕೊಲೆಯಾದ ಯುವಕ.</p>.<p>ಕ್ಷತ್ರಿಯ ಸಮಾಜದ ತಮ್ಮನಗೌಡ ಪಾಟೀಲ ಪುತ್ರಿ ಭಾಗ್ಯಶ್ರೀ ಅನ್ನು ಭುಜಬಲಿ ಕರ್ಜಗಿ ಪ್ರೀತಿಸಿ ಕೆಲ ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದರು.</p>.<p>ಶನಿವಾರ ರಾತ್ರಿ ಹನುಮಾನ ದೇವರ ಪಲ್ಲಕ್ಕಿ ಉತ್ಸವ ಮುಗಿಸಿ ಸಹೋದರನ ಪುತ್ರ ಸುಮೇದ್ ನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗಲು ಮುಂದಾದಾಗ ಕಾರದ ಪುಡಿ ಎರಚಲಾಗಿದೆ.</p>.<p>ಆಗ ಸುಮೇದ್ ಓಡಿ ಹೋಗಿದ್ದು, ಭುಜಬಲಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸಾವಳಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ತಮ್ಮನಗೌಡ ಪಾಟೀಲ ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಇನ್ಸ್ಪೆಕ್ಟರ್ ಮನೋಹರ ಕಂಚಗಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಮಗಳನ್ನುಪ್ರೀತಿಸಿ ಮದುವೆಯಾದ ಎಂಬ ಸಿಟ್ಟಿನಿಂದ ಮಗಳನ್ನು ಮದುವೆಯಾದ ಯುವಕನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿಕೊಂಡು ಶನಿವಾರ ತಡರಾತ್ರಿ ಜಮಖಂಡಿ ತಾಲ್ಲೂಕಿನ ಟಕ್ಕೋಡದಲ್ಲಿ ಕೊಲೆ ಮಾಡಿದ್ದಾರೆ.</p>.<p>ಜೈನ ಸಮುದಾಯಕ್ಕೆ ಸೇರಿದ ಭುಜಬಲಿ ಕರ್ಜಗಿ (34) ಕೊಲೆಯಾದ ಯುವಕ.</p>.<p>ಕ್ಷತ್ರಿಯ ಸಮಾಜದ ತಮ್ಮನಗೌಡ ಪಾಟೀಲ ಪುತ್ರಿ ಭಾಗ್ಯಶ್ರೀ ಅನ್ನು ಭುಜಬಲಿ ಕರ್ಜಗಿ ಪ್ರೀತಿಸಿ ಕೆಲ ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದರು.</p>.<p>ಶನಿವಾರ ರಾತ್ರಿ ಹನುಮಾನ ದೇವರ ಪಲ್ಲಕ್ಕಿ ಉತ್ಸವ ಮುಗಿಸಿ ಸಹೋದರನ ಪುತ್ರ ಸುಮೇದ್ ನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗಲು ಮುಂದಾದಾಗ ಕಾರದ ಪುಡಿ ಎರಚಲಾಗಿದೆ.</p>.<p>ಆಗ ಸುಮೇದ್ ಓಡಿ ಹೋಗಿದ್ದು, ಭುಜಬಲಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸಾವಳಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ತಮ್ಮನಗೌಡ ಪಾಟೀಲ ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಇನ್ಸ್ಪೆಕ್ಟರ್ ಮನೋಹರ ಕಂಚಗಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>