<p><strong>ಗುಳೇದಗುಡ್ಡ</strong>: ನಾಡಪ್ರಭು ಎಂದೆ ಹೆಸರುವಾಸಿಯಾದ ಕೆಂಪೇಗೌಡರು ಬೆಂಗಳೂರು ಕಟ್ಟಿದರು. ಜೊತೆಗೆ ನಾಡುಕಟ್ಟುವ ಮನೋಭೂಮಿಕೆಯನ್ನು ನಮಗೆ ಕಲಿಸಿದ್ದಾರೆ. ನಾಡು ಕಟ್ಟುವ, ಸಂಘಟನಾತ್ಮಕವಾದ ಅವರ ಕ್ರೀಯಾಶೀಲತೆ ಎಲ್ಲರಿಗೂ ಅನುಕರಣೀಯವಾಗಿದೆ ಎಂದು ತಹಶೀಲ್ದಾರ್ ಮಹೇಶ ಗಸ್ತೆ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಜರುಗಿದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ನಾವೆಲ್ಲೂ ನಾಡನ್ನು ಪ್ರೀತಿಸಬೇಕು. ಅಭಿಮಾನ ಮೂಢಿಸಿಕೊಳ್ಳುವುದರ ಜೊತೆಗೆ ನಾಡಿನ ಅಭಿವೃದ್ಧಿಗೆ ಕಂಕಣಬದ್ದರಾಗಿ ಕೆಲಸಮಾಡಬೇಕಾಗಿದೆ ಎಂದರು.</p>.<p>ಆರಂಭದಲ್ಲಿ ನಾಡಪ್ರಭು ಕೆಂಪೆಗೌಡರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು. ಕಂದಾಯ ನಿರೀಕ್ಷಕ ಶಿವರಾಯಪ್ಪ ಜೋಗಿನ, ಉಪ ತಹಶೀಲ್ದಾರ ಜಿ.ವಿ.ರಜಪೂತ, ಮಲ್ಲಿಕಾರ್ಜುನ ತುಪ್ಪದ ಹಾಗೂ ಕಚೇರಿ ಸಿಬ್ಬಂದಿ ಇದ್ದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಕೆಂಪೇಗೌಡರ ಜಯಂತಿ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಳೇದಗುಡ್ಡ</strong>: ನಾಡಪ್ರಭು ಎಂದೆ ಹೆಸರುವಾಸಿಯಾದ ಕೆಂಪೇಗೌಡರು ಬೆಂಗಳೂರು ಕಟ್ಟಿದರು. ಜೊತೆಗೆ ನಾಡುಕಟ್ಟುವ ಮನೋಭೂಮಿಕೆಯನ್ನು ನಮಗೆ ಕಲಿಸಿದ್ದಾರೆ. ನಾಡು ಕಟ್ಟುವ, ಸಂಘಟನಾತ್ಮಕವಾದ ಅವರ ಕ್ರೀಯಾಶೀಲತೆ ಎಲ್ಲರಿಗೂ ಅನುಕರಣೀಯವಾಗಿದೆ ಎಂದು ತಹಶೀಲ್ದಾರ್ ಮಹೇಶ ಗಸ್ತೆ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಜರುಗಿದ ಕೆಂಪೇಗೌಡರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ನಾವೆಲ್ಲೂ ನಾಡನ್ನು ಪ್ರೀತಿಸಬೇಕು. ಅಭಿಮಾನ ಮೂಢಿಸಿಕೊಳ್ಳುವುದರ ಜೊತೆಗೆ ನಾಡಿನ ಅಭಿವೃದ್ಧಿಗೆ ಕಂಕಣಬದ್ದರಾಗಿ ಕೆಲಸಮಾಡಬೇಕಾಗಿದೆ ಎಂದರು.</p>.<p>ಆರಂಭದಲ್ಲಿ ನಾಡಪ್ರಭು ಕೆಂಪೆಗೌಡರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಲಾಯಿತು. ಕಂದಾಯ ನಿರೀಕ್ಷಕ ಶಿವರಾಯಪ್ಪ ಜೋಗಿನ, ಉಪ ತಹಶೀಲ್ದಾರ ಜಿ.ವಿ.ರಜಪೂತ, ಮಲ್ಲಿಕಾರ್ಜುನ ತುಪ್ಪದ ಹಾಗೂ ಕಚೇರಿ ಸಿಬ್ಬಂದಿ ಇದ್ದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಕೆಂಪೇಗೌಡರ ಜಯಂತಿ ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>