ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ವಿರೋಧ ಪಕ್ಷ ಎಂದಾಕ್ಷಣ ಬರೀ ಆಡಳಿತ ಮಾಡುವವರ ಕಾಲು ಜಗ್ಗುವುದಲ್ಲ. ಸಾವಿನಲ್ಲೂ ರಾಜಕೀಯ ಮಾಡುವುದು ಸಲ್ಲ. ಬದಲಿಗೆ ಮಾರ್ಗದರ್ಶನ ಮಾಡಲಿ. ಪಕ್ಕದ ಮಹಾರಾಷ್ಟದಲ್ಲಿ ನಿಮ್ಮದೇ ಪಕ್ಷದ ಬೆಂಬಲದ ಸರ್ಕಾರ ಅಧಿಕಾರದಲ್ಲಿದೆ. ಅಲ್ಲಿ ಕೋವಿಡ್ನಿಂದ ಇಡೀ ದೇಶದಲ್ಲಿಯೇ ಹೆಚ್ಚು ಜನ ಸಾವಿಗೀಡಾಗಿದ್ದಾರೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ'ಎಂದು ಕಾಂಗ್ರೆಸ್ ನಾಯಕರಿಗೆ ಕಿವಿಮಾತು ಹೇಳಿದರು.