<p><strong>ಬಾಗಲಕೋಟೆ:</strong> ಇಂದಿನ ಯುಗದಲ್ಲಿ ವಿದ್ಯುತ್, ಇಂಧನ ಮತ್ತು ಇತರ ಶಕ್ತಿ ಸಂಪನ್ಮೂಲಗಳು ಜೀವನದ ಅವಿಭಾಜ್ಯ ಭಾಗವಾಗಿವೆ. ಅವುಗಳ ರಕ್ಷಣೆ ಸರ್ಕಾರದ ಜೊತೆಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದು ಹೆಸ್ಕಾಂ ಬಾಗಲಕೋಟೆ ಸಹಾಯಕ ಎಂಜಿನಿಯರ್ ಮಡಿವಾಳಪ್ಪ ಇಂಡಿ ಹೇಳಿದರು.</p>.<p>ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಕ್ತಿ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅವುಗಳ ಅತಿಯಾದ ಬಳಕೆಯಿಂದ ಪರಿಸರ ಹಾನಿ, ಜಾಗತಿಕ ತಾಪಮಾನ ಹೆಚ್ಚಳ, ಇಂಧನ ಕೊರತೆಯಂತಹ ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಇಂಧನ ಸಂರಕ್ಷಣೆ ಎಂದರೆ ಕೇವಲ ಬಳಕೆ ಕಡಿಮೆ ಮಾಡುವುದು ಮಾತ್ರವಲ್ಲ, ಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸುವುದೂ ಆಗಿದೆ. ಅಗತ್ಯವಿಲ್ಲದ ಸಂದರ್ಭಗಳಲ್ಲಿ ವಿದ್ಯುತ್ ಉಪಕರಣಗಳನ್ನು ಆಫ್ ಮಾಡುವುದು, ಎಲ್ಇಡಿ ದೀಪಗಳು ಮತ್ತು ಇಂಧನ-ಕಾರ್ಯಕ್ಷಮ ಸಾಧನಗಳನ್ನು ಬಳಸುವುದು, ಸಾರ್ವಜನಿಕ ಸಾರಿಗೆ ಉತ್ತೇಜಿಸುವುದು ಹಾಗೂ ಸೌರಶಕ್ತಿ, ಗಾಳಿಶಕ್ತಿಯಂತಹ ನವೀಕರಿಸಬಹುದಾದ ಇಂಧನ ಮೂಲಗಳನ್ನು ಅಳವಡಿಸಿಕೊಳ್ಳಬೇಕು ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಬಿ.ಆರ್. ಹಿರೇಮಠ ಮಾತನಾಡಿ, ಪ್ರತಿ ದಿನವೂ ಶಕ್ತಿ ಸಂರಕ್ಷಣೆಯ ದಿನವಾಗಬೇಕು. ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.</p>.<p>ವಿಭಾಗದ ಮುಖ್ಯಸ್ಥರಾದ ಆರ್.ಎಲ್. ನಾಯಕ ಮಾತನಾಡಿ, ವಿದ್ಯಾರ್ಥಿಗಳು ನಡೆಸಿದ ಶಕ್ತಿ ಸಂರಕ್ಷಣಾ ಅಧ್ಯಯನಗಳ ಕುರಿತು ವಿವರಿಸಿ, ನೂತನ ಹಾಗೂ ಅರ್ಥಪೂರ್ಣ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.</p>.<p>ಸಂಯೋಜಕ ಬಸನಗೌಡ ರೋಣದ ಮಾತನಾಡಿದರು. ಪೋಸ್ಟರ್ ರಚನೆ ಸ್ಪರ್ಧೆಯಲ್ಲಿ 28 ಪೋಸ್ಟರ್ಗಳನ್ನು ಪ್ರದರ್ಶಿಸಲಾಯಿತು. ಮಹಾಬಲೇಶ್ವರ ಎಸ್.ಕೆ, ಪಿ.ಎನ್. ಕುಲಕರ್ಣಿ, ಕೆ. ಚಂದ್ರಶೇಖರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಇಂದಿನ ಯುಗದಲ್ಲಿ ವಿದ್ಯುತ್, ಇಂಧನ ಮತ್ತು ಇತರ ಶಕ್ತಿ ಸಂಪನ್ಮೂಲಗಳು ಜೀವನದ ಅವಿಭಾಜ್ಯ ಭಾಗವಾಗಿವೆ. ಅವುಗಳ ರಕ್ಷಣೆ ಸರ್ಕಾರದ ಜೊತೆಗೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದು ಹೆಸ್ಕಾಂ ಬಾಗಲಕೋಟೆ ಸಹಾಯಕ ಎಂಜಿನಿಯರ್ ಮಡಿವಾಳಪ್ಪ ಇಂಡಿ ಹೇಳಿದರು.</p>.<p>ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಕ್ತಿ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅವುಗಳ ಅತಿಯಾದ ಬಳಕೆಯಿಂದ ಪರಿಸರ ಹಾನಿ, ಜಾಗತಿಕ ತಾಪಮಾನ ಹೆಚ್ಚಳ, ಇಂಧನ ಕೊರತೆಯಂತಹ ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಇಂಧನ ಸಂರಕ್ಷಣೆ ಎಂದರೆ ಕೇವಲ ಬಳಕೆ ಕಡಿಮೆ ಮಾಡುವುದು ಮಾತ್ರವಲ್ಲ, ಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸುವುದೂ ಆಗಿದೆ. ಅಗತ್ಯವಿಲ್ಲದ ಸಂದರ್ಭಗಳಲ್ಲಿ ವಿದ್ಯುತ್ ಉಪಕರಣಗಳನ್ನು ಆಫ್ ಮಾಡುವುದು, ಎಲ್ಇಡಿ ದೀಪಗಳು ಮತ್ತು ಇಂಧನ-ಕಾರ್ಯಕ್ಷಮ ಸಾಧನಗಳನ್ನು ಬಳಸುವುದು, ಸಾರ್ವಜನಿಕ ಸಾರಿಗೆ ಉತ್ತೇಜಿಸುವುದು ಹಾಗೂ ಸೌರಶಕ್ತಿ, ಗಾಳಿಶಕ್ತಿಯಂತಹ ನವೀಕರಿಸಬಹುದಾದ ಇಂಧನ ಮೂಲಗಳನ್ನು ಅಳವಡಿಸಿಕೊಳ್ಳಬೇಕು ಎಂದರು.</p>.<p>ಕಾಲೇಜಿನ ಪ್ರಾಚಾರ್ಯ ಬಿ.ಆರ್. ಹಿರೇಮಠ ಮಾತನಾಡಿ, ಪ್ರತಿ ದಿನವೂ ಶಕ್ತಿ ಸಂರಕ್ಷಣೆಯ ದಿನವಾಗಬೇಕು. ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.</p>.<p>ವಿಭಾಗದ ಮುಖ್ಯಸ್ಥರಾದ ಆರ್.ಎಲ್. ನಾಯಕ ಮಾತನಾಡಿ, ವಿದ್ಯಾರ್ಥಿಗಳು ನಡೆಸಿದ ಶಕ್ತಿ ಸಂರಕ್ಷಣಾ ಅಧ್ಯಯನಗಳ ಕುರಿತು ವಿವರಿಸಿ, ನೂತನ ಹಾಗೂ ಅರ್ಥಪೂರ್ಣ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದರು.</p>.<p>ಸಂಯೋಜಕ ಬಸನಗೌಡ ರೋಣದ ಮಾತನಾಡಿದರು. ಪೋಸ್ಟರ್ ರಚನೆ ಸ್ಪರ್ಧೆಯಲ್ಲಿ 28 ಪೋಸ್ಟರ್ಗಳನ್ನು ಪ್ರದರ್ಶಿಸಲಾಯಿತು. ಮಹಾಬಲೇಶ್ವರ ಎಸ್.ಕೆ, ಪಿ.ಎನ್. ಕುಲಕರ್ಣಿ, ಕೆ. ಚಂದ್ರಶೇಖರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>