<p><strong>ಶಿವಪುರ (ಬಾದಾಮಿ ):</strong> ‘ದೇಶಕ್ಕೆ ಸ್ವಾತಂತ್ರ್ಯ ದೊರಕಿ ಅನೇಕ ದಶಕಗಳು ಕಳೆದರೂ ಬುಡಕಟ್ಟು ಮತ್ತು ಅಲೆಮಾರಿ ಜನಾಂಗವು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯೇ ಕಾರಣವಾಗಿದೆ ’ ಎಂದು ರಾಜ್ಯ ಎಸ್.ಸಿ/ಎಸ್.ಟಿ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆದ ಅಲೆಮಾರಿ ಸಮುದಾಯದ ಕುಂದುಕೊರತೆ ಸಮಾರಂಭವನ್ನು ಅವರು ಉದ್ಘಾಟಿಸಿ ಜನರ ಸಮಸ್ಯೆಗಳನ್ನು ಆಲಿಸಿದರು.</p>.<p>ಅಲೆಮಾರಿ ಜನಾಂಗದ ಸಮಸ್ಯೆ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅಧಿಕಾರಿಗಳು ಉತ್ತರ ಹೇಳಲು ತಡವರಿಸಿದರು. ಗ್ರಾಮದ ಜನಾಂಗಕ್ಕೆ ಸರ್ಕಾರದ ಯೋಜನೆಗಳನ್ನು ಏನನ್ನು ಕೊಟ್ಟಿರುವಿರಿ ಎಂದಾಗ ಅಧಿಕಾರಿಗಳು ಮೌನಕ್ಕೆ ಜಾರಿದರು.</p>.<p>‘ಶಿವಪುರ ಗ್ರಾಮದ ಅಲೆಮಾರಿ ಜನಾಂಗವು ಶಿಕ್ಷಣ, ಉದ್ಯೋಗ, ಆರೋಗ್ಯದ ಸೌಲಭ್ಯಗಳು ಸಿಕ್ಕಿಲ್ಲ. ಶೌಚಾಲಯಗಳ ಕೊರತೆ ಸಮಸ್ಯೆಗಳನ್ನು ಹೊಂದಿದ್ದಾರೆ ಹೆಚ್ಚಿನ ಕಾಳಜೀ ವಹಿಸಬೇಕು ’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>‘ಅಲೆಮಾರಿ ಮತ್ತು ಬುಡಕಟ್ಟು ಜನಾಂಗದವರ ನೈಜ ಪರಿಸ್ಥಿತಿ ಅರಿಯಲು ಭೇಟಿ ನೀಡಲಾಗಿದೆ. ನಿಮ್ಮ ಸಮಸ್ಯೆಗಳು ನಿವಾರಣೆಯಾಗುವವರೆಗೆ ಹೋರಾಟ ಮಾಡಿ ನಾವು ನಿಮ್ಮ ಜೊತೆಗೆ ಇದ್ದೇವೆ ’ ಎಂದು ನಿಗಮದ ಕಾರ್ಯದರ್ಶಿ ಕಿರಣ ಏಕಲವ್ಯ ತಿಳಿಸಿದರು.</p>.<p>ಎಸ್.ಸಿ/ಎಸ್.ಟಿ ಅಲೆಮಾರಿ ಸಮುದಾಯ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರದ ಅನೇಕ ಯೋಜನೆಗಳಿವೆ. ಗ್ರಾಮ ಸಭೆ ನಡೆಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ. ಮಳಿಮಠ ಹೇಳಿದರು.</p>.<p>ಕಂದಾಯ ಇಲಾಖೆಯ ಎಸ್.ಎಫ್. ಬೊಮ್ಮನ್ನವರ, ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರಕಾಶ ನಾಯ್ಕರ್, ಬಸಪ್ಪ ಬಾಂಬೆ, ಶೇಕಪ್ಪ ಪೂಜಾರ, ಮಂಜುನಾಥ ಪೂಜಾರ, ಡಿ.ಡಿ. ಬಾಗಲಕೋಟ, ಶಿವಾನಂದ ಪೂಜಾರ , ಅಧಿಕಾರಿಗಳು ಮತ್ತು ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಪುರ (ಬಾದಾಮಿ ):</strong> ‘ದೇಶಕ್ಕೆ ಸ್ವಾತಂತ್ರ್ಯ ದೊರಕಿ ಅನೇಕ ದಶಕಗಳು ಕಳೆದರೂ ಬುಡಕಟ್ಟು ಮತ್ತು ಅಲೆಮಾರಿ ಜನಾಂಗವು ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯೇ ಕಾರಣವಾಗಿದೆ ’ ಎಂದು ರಾಜ್ಯ ಎಸ್.ಸಿ/ಎಸ್.ಟಿ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p>ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯ್ತಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆದ ಅಲೆಮಾರಿ ಸಮುದಾಯದ ಕುಂದುಕೊರತೆ ಸಮಾರಂಭವನ್ನು ಅವರು ಉದ್ಘಾಟಿಸಿ ಜನರ ಸಮಸ್ಯೆಗಳನ್ನು ಆಲಿಸಿದರು.</p>.<p>ಅಲೆಮಾರಿ ಜನಾಂಗದ ಸಮಸ್ಯೆ ಕುರಿತು ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅಧಿಕಾರಿಗಳು ಉತ್ತರ ಹೇಳಲು ತಡವರಿಸಿದರು. ಗ್ರಾಮದ ಜನಾಂಗಕ್ಕೆ ಸರ್ಕಾರದ ಯೋಜನೆಗಳನ್ನು ಏನನ್ನು ಕೊಟ್ಟಿರುವಿರಿ ಎಂದಾಗ ಅಧಿಕಾರಿಗಳು ಮೌನಕ್ಕೆ ಜಾರಿದರು.</p>.<p>‘ಶಿವಪುರ ಗ್ರಾಮದ ಅಲೆಮಾರಿ ಜನಾಂಗವು ಶಿಕ್ಷಣ, ಉದ್ಯೋಗ, ಆರೋಗ್ಯದ ಸೌಲಭ್ಯಗಳು ಸಿಕ್ಕಿಲ್ಲ. ಶೌಚಾಲಯಗಳ ಕೊರತೆ ಸಮಸ್ಯೆಗಳನ್ನು ಹೊಂದಿದ್ದಾರೆ ಹೆಚ್ಚಿನ ಕಾಳಜೀ ವಹಿಸಬೇಕು ’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.</p>.<p>‘ಅಲೆಮಾರಿ ಮತ್ತು ಬುಡಕಟ್ಟು ಜನಾಂಗದವರ ನೈಜ ಪರಿಸ್ಥಿತಿ ಅರಿಯಲು ಭೇಟಿ ನೀಡಲಾಗಿದೆ. ನಿಮ್ಮ ಸಮಸ್ಯೆಗಳು ನಿವಾರಣೆಯಾಗುವವರೆಗೆ ಹೋರಾಟ ಮಾಡಿ ನಾವು ನಿಮ್ಮ ಜೊತೆಗೆ ಇದ್ದೇವೆ ’ ಎಂದು ನಿಗಮದ ಕಾರ್ಯದರ್ಶಿ ಕಿರಣ ಏಕಲವ್ಯ ತಿಳಿಸಿದರು.</p>.<p>ಎಸ್.ಸಿ/ಎಸ್.ಟಿ ಅಲೆಮಾರಿ ಸಮುದಾಯ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರದ ಅನೇಕ ಯೋಜನೆಗಳಿವೆ. ಗ್ರಾಮ ಸಭೆ ನಡೆಸುವುದಾಗಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ. ಮಳಿಮಠ ಹೇಳಿದರು.</p>.<p>ಕಂದಾಯ ಇಲಾಖೆಯ ಎಸ್.ಎಫ್. ಬೊಮ್ಮನ್ನವರ, ವಾಲ್ಮೀಕಿ ಸಮುದಾಯದ ಅಧ್ಯಕ್ಷ ಪ್ರಕಾಶ ನಾಯ್ಕರ್, ಬಸಪ್ಪ ಬಾಂಬೆ, ಶೇಕಪ್ಪ ಪೂಜಾರ, ಮಂಜುನಾಥ ಪೂಜಾರ, ಡಿ.ಡಿ. ಬಾಗಲಕೋಟ, ಶಿವಾನಂದ ಪೂಜಾರ , ಅಧಿಕಾರಿಗಳು ಮತ್ತು ಗ್ರಾಮಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>