<p><strong>ಬಾಗಲಕೋಟೆ:</strong> ನಂಜುಂಡಪ್ಪ ವರದಿ ಸರಿಯಾಗಿ ಅನುಷ್ಠಾನಗೊಳಿಸದ ಪರಿಣಾಮ ಉತ್ತರ ಕರ್ನಾಟಕ ನಿರೀಕ್ಷಿತ ಅಭಿವೃದ್ಧಿ ಹೊಂದದೇ ಹೆಚ್ಚಿನ ಪ್ರಮಾಣದಲ್ಲಿ ಹಿಂದುಳಿದಿದೆ ಎನ್ನುವುದು ಗೋವಿಂದರಾವ್ ವರದಿ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರದ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯ ರಚನೆ ಆಗಬೇಕು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಮುಖಂಡರು ಆಗ್ರಹಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ನಡುವೆ ಅಭಿವೃದ್ಧಿ ತಾರತಮ್ಯ ನಡೆಯುತ್ತಲೇ ಬಂದಿದೆ. ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ತೀವ್ರಗೊಳಿಸಲಾಗುವುದು ಎಂದರು.</p>.<p>ಇದೇ ವಿಚಾರವಾಗಿ ಈಗ ದಕ್ಷಿಣದಲ್ಲೂ ಸಹ ಪ್ರತ್ಯೇಕ ಬೆಂಗಳೂರು ರಾಜ್ಯದ ಬೇಡಿಕೆ ಹೆಚ್ಚಿದೆ. ಫೆ.20ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಿಯೋಗ ತೆರಳುತ್ತಿದೆ. ಭೇಟಿಯಾಗಿ ಎಲ್ಲ ವಿಷಯಗಳನ್ನು ತಿಳಿಸಲಿದ್ದೇವೆ ಎಂದರು.</p>.<p>ಗೋವಿಂದರಾವ್ ನೀಡಿರುವ ವರದಿಯಲ್ಲಿ ಹಿಂದುಳಿದ 20 ಜಿಲ್ಲೆಗಳಲ್ಲಿ 15 ಜಿಲ್ಲೆಗಳು ಉತ್ತರ ಕರ್ನಾಟಕದ್ದಾಗಿವೆ. ಉತ್ತರದ ಅಭಿವೃದ್ಧಿ ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಇನ್ನೂ ತಾಳ್ಮೆ ವಹಿಸಿಕೊಂಡರೆ ನಿರುದ್ಯೋಗಿ ಯುವಕರಿಗೆ ಅನ್ಯಾಯ ಮಾಡಿದಂತಾಗುತ್ತದೆ. ವಿಳಂಬ ಮಾಡದೇ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಎಲ್ಲರೂ ಧ್ವನಿಗೂಡಿಸಬೇಕು. ಈ ಕುರಿತು 1.70 ಕೋಟಿ ಜನರ ಸಹಿ ಸಂಗ್ರಹಿಸಲಾಗಿದೆ ಎಂದು ಹೇಳಿದರು.</p>.<p>ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಸಂಚಾಲಕ ಪ್ರಕಾಶ ಅಂತರಗೊಂಡ ಮಾತನಾಡಿ, ಬೆಂಗಳೂರ ಮತ್ತು ಮೈಸೂರ ಭಾಗಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕ ಹಿಂದುಳಿದೆ. ಶೇ68ರಷ್ಟು ಜಲಸಂಪನ್ಮೂಲ ಹೊಂದಿದ್ದರೂ, ಉತ್ತರದ ಕೃಷ್ಣಾ, ಮಹದಾಯಿ, ನವಲಿ ಯೋಜನೆಗಳಿಗೆ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದರು.</p>.<p>ಬೆಂಗಳೂರು, ಬೇರೆಡೆ ಪ್ರತಿ ಎಕರೆಗೆ ₹16 ಕೋಟಿವರೆಗೂ ಪರಿಹಾರ ನೀಡಲಾಗಿದೆ. ಯುಕೆಪಿ ವಿಷಯ ಬಂದಾಗ ನ್ಯಾಯಾಲಯ ಆದೇಶದ ಪ್ರಕಾರವೂ ನೀಡಲು ಆಗುವುದಿಲ್ಲ ಎಂದು ಹೇಳಲಾಗುತ್ತದೆ. ಜನಪ್ರತಿನಿಧಗಳ ನಿರ್ಲಕ್ಷದಿಂದಾಗಿ ಅಭಿವೃದ್ಧಿ ಕುಂಠಿತವಾಗಿದೆ. ಕೈಗಾರಿಕೆಗಳ ಸ್ಥಾಪನೆಯೂ ಆಗುತ್ತಿಲ್ಲ ಎಂದರು.</p>.<p>ಮುಖಂಡರಾದ ಎ.ಎ.ದಂಡಿಯಾ, ಬಸವರಾಜ ಗವಿಮಠ, ರವಿ ಕುಮಟಗಿ ಮಾತನಾಡಿ, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಈ ಭಾಗದ ಜನಪ್ರತಿನಿಧಿಗಳ ಸ್ಪಷ್ಟ ಮಾರ್ಗಸೂಚಿ ಇಲ್ಲ. ಕೈಗಾರಿಕೆಗಳ ಆರಂಭವಾಗುತ್ತಿಲ್ಲ. ಅನ್ಯಾಯದ ಬಗ್ಗೆ ಧ್ವನಿ ಎತ್ತದಿದ್ದರೆ, ಇದು ಹೀಗೆಯೇ ಮುಂದುವರೆಯುತ್ತದೆ. ಪ್ರತ್ಯೇಕ ರಾಜ್ಯ ಅನಿವಾರ್ಯವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ನಂಜುಂಡಪ್ಪ ವರದಿ ಸರಿಯಾಗಿ ಅನುಷ್ಠಾನಗೊಳಿಸದ ಪರಿಣಾಮ ಉತ್ತರ ಕರ್ನಾಟಕ ನಿರೀಕ್ಷಿತ ಅಭಿವೃದ್ಧಿ ಹೊಂದದೇ ಹೆಚ್ಚಿನ ಪ್ರಮಾಣದಲ್ಲಿ ಹಿಂದುಳಿದಿದೆ ಎನ್ನುವುದು ಗೋವಿಂದರಾವ್ ವರದಿ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ಉತ್ತರದ ಅಭಿವೃದ್ಧಿಗೆ ಪ್ರತ್ಯೇಕ ರಾಜ್ಯ ರಚನೆ ಆಗಬೇಕು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಮುಖಂಡರು ಆಗ್ರಹಿಸಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ನಡುವೆ ಅಭಿವೃದ್ಧಿ ತಾರತಮ್ಯ ನಡೆಯುತ್ತಲೇ ಬಂದಿದೆ. ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ತೀವ್ರಗೊಳಿಸಲಾಗುವುದು ಎಂದರು.</p>.<p>ಇದೇ ವಿಚಾರವಾಗಿ ಈಗ ದಕ್ಷಿಣದಲ್ಲೂ ಸಹ ಪ್ರತ್ಯೇಕ ಬೆಂಗಳೂರು ರಾಜ್ಯದ ಬೇಡಿಕೆ ಹೆಚ್ಚಿದೆ. ಫೆ.20ರಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ನಿಯೋಗ ತೆರಳುತ್ತಿದೆ. ಭೇಟಿಯಾಗಿ ಎಲ್ಲ ವಿಷಯಗಳನ್ನು ತಿಳಿಸಲಿದ್ದೇವೆ ಎಂದರು.</p>.<p>ಗೋವಿಂದರಾವ್ ನೀಡಿರುವ ವರದಿಯಲ್ಲಿ ಹಿಂದುಳಿದ 20 ಜಿಲ್ಲೆಗಳಲ್ಲಿ 15 ಜಿಲ್ಲೆಗಳು ಉತ್ತರ ಕರ್ನಾಟಕದ್ದಾಗಿವೆ. ಉತ್ತರದ ಅಭಿವೃದ್ಧಿ ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಇನ್ನೂ ತಾಳ್ಮೆ ವಹಿಸಿಕೊಂಡರೆ ನಿರುದ್ಯೋಗಿ ಯುವಕರಿಗೆ ಅನ್ಯಾಯ ಮಾಡಿದಂತಾಗುತ್ತದೆ. ವಿಳಂಬ ಮಾಡದೇ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಎಲ್ಲರೂ ಧ್ವನಿಗೂಡಿಸಬೇಕು. ಈ ಕುರಿತು 1.70 ಕೋಟಿ ಜನರ ಸಹಿ ಸಂಗ್ರಹಿಸಲಾಗಿದೆ ಎಂದು ಹೇಳಿದರು.</p>.<p>ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಸಂಚಾಲಕ ಪ್ರಕಾಶ ಅಂತರಗೊಂಡ ಮಾತನಾಡಿ, ಬೆಂಗಳೂರ ಮತ್ತು ಮೈಸೂರ ಭಾಗಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕ ಹಿಂದುಳಿದೆ. ಶೇ68ರಷ್ಟು ಜಲಸಂಪನ್ಮೂಲ ಹೊಂದಿದ್ದರೂ, ಉತ್ತರದ ಕೃಷ್ಣಾ, ಮಹದಾಯಿ, ನವಲಿ ಯೋಜನೆಗಳಿಗೆ ಸ್ಪಂದನೆ ಸಿಗುತ್ತಿಲ್ಲ ಎಂದು ದೂರಿದರು.</p>.<p>ಬೆಂಗಳೂರು, ಬೇರೆಡೆ ಪ್ರತಿ ಎಕರೆಗೆ ₹16 ಕೋಟಿವರೆಗೂ ಪರಿಹಾರ ನೀಡಲಾಗಿದೆ. ಯುಕೆಪಿ ವಿಷಯ ಬಂದಾಗ ನ್ಯಾಯಾಲಯ ಆದೇಶದ ಪ್ರಕಾರವೂ ನೀಡಲು ಆಗುವುದಿಲ್ಲ ಎಂದು ಹೇಳಲಾಗುತ್ತದೆ. ಜನಪ್ರತಿನಿಧಗಳ ನಿರ್ಲಕ್ಷದಿಂದಾಗಿ ಅಭಿವೃದ್ಧಿ ಕುಂಠಿತವಾಗಿದೆ. ಕೈಗಾರಿಕೆಗಳ ಸ್ಥಾಪನೆಯೂ ಆಗುತ್ತಿಲ್ಲ ಎಂದರು.</p>.<p>ಮುಖಂಡರಾದ ಎ.ಎ.ದಂಡಿಯಾ, ಬಸವರಾಜ ಗವಿಮಠ, ರವಿ ಕುಮಟಗಿ ಮಾತನಾಡಿ, ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಈ ಭಾಗದ ಜನಪ್ರತಿನಿಧಿಗಳ ಸ್ಪಷ್ಟ ಮಾರ್ಗಸೂಚಿ ಇಲ್ಲ. ಕೈಗಾರಿಕೆಗಳ ಆರಂಭವಾಗುತ್ತಿಲ್ಲ. ಅನ್ಯಾಯದ ಬಗ್ಗೆ ಧ್ವನಿ ಎತ್ತದಿದ್ದರೆ, ಇದು ಹೀಗೆಯೇ ಮುಂದುವರೆಯುತ್ತದೆ. ಪ್ರತ್ಯೇಕ ರಾಜ್ಯ ಅನಿವಾರ್ಯವಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>