<p><strong>ಬೀಳಗಿ</strong>: ಬೆಳಗಾವಿಯಲ್ಲಿ ಡಿ.8ರಿಂದ 19ರವರೆಗೆ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಹೇಳಿದರು.</p>.<p>ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಎಂಬ ಪ್ರಾಂತೀಯ ಅಸಮಾನತೆಯನ್ನು ಹೋಗಲಾಡಿಸಲು ಬೆಳಗಾವಿಯಲ್ಲಿ ವಿಧಾನಸೌಧ ನಿರ್ಮಿಸಲಾಗಿದೆ. ಈ ಮೂಲಕ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎನ್ನುವುದು ನಮ್ಮೆಲ್ಲರ ಅಪೇಕ್ಷೆಯಾಗಿತ್ತು. ಆದರೆ ವರ್ಷಕ್ಕೊಮ್ಮೆ ನಡೆಯುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆಗಳಿಗೆ ಯಾವುದೇ ರೀತಿಯ ಸೂಕ್ತ ಪರಿಹಾರ ಸಿಕ್ಕಿಲ್ಲ, ಪ್ರಾಂತೀಯ ಅಸಮಾನತೆ ಮುಂದುವರೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಉತ್ತರ ಕರ್ನಾಟಕದ ಕೃಷಿ, ನೀರಾವರಿ, ಶಿಕ್ಷಣ, ಕೃಷ್ಣಾ ಮೇಲ್ದಂಡೆ ಯೋಜನೆ, ಕೈಗಾರಿಕೆ, ಪ್ರವಾಸೋದ್ಯಮ, ಸಹಕಾರ ಮುಂತಾದ ಕ್ಷೇತ್ರಗಳ ಸಮಗ್ರ ಚಿಂತನೆಗೆ ಮೇಲ್ಮನೆ ಮತ್ತು ಕೆಳಮನೆ ಸಭಾಧ್ಯಕ್ಷರು ಶಾಸಕರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಹೆಚ್ಚಿನ ಅವಕಾಶ ಒದಗಿಸುವ ಮೂಲಕ ಈ ಭಾಗದ ಸಮಗ್ರ ಅಭಿವೃದ್ಧಿ ಗೆ ಸರ್ಕಾರ ಸಹಾಯ ಸಹಕಾರ ನೀಡಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ಬೆಳಗಾವಿಯಲ್ಲಿ ಡಿ.8ರಿಂದ 19ರವರೆಗೆ ನಡೆಯುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ ಹೇಳಿದರು.</p>.<p>ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಎಂಬ ಪ್ರಾಂತೀಯ ಅಸಮಾನತೆಯನ್ನು ಹೋಗಲಾಡಿಸಲು ಬೆಳಗಾವಿಯಲ್ಲಿ ವಿಧಾನಸೌಧ ನಿರ್ಮಿಸಲಾಗಿದೆ. ಈ ಮೂಲಕ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅನುಕೂಲವಾಗುತ್ತದೆ ಎನ್ನುವುದು ನಮ್ಮೆಲ್ಲರ ಅಪೇಕ್ಷೆಯಾಗಿತ್ತು. ಆದರೆ ವರ್ಷಕ್ಕೊಮ್ಮೆ ನಡೆಯುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆಗಳಿಗೆ ಯಾವುದೇ ರೀತಿಯ ಸೂಕ್ತ ಪರಿಹಾರ ಸಿಕ್ಕಿಲ್ಲ, ಪ್ರಾಂತೀಯ ಅಸಮಾನತೆ ಮುಂದುವರೆದಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಉತ್ತರ ಕರ್ನಾಟಕದ ಕೃಷಿ, ನೀರಾವರಿ, ಶಿಕ್ಷಣ, ಕೃಷ್ಣಾ ಮೇಲ್ದಂಡೆ ಯೋಜನೆ, ಕೈಗಾರಿಕೆ, ಪ್ರವಾಸೋದ್ಯಮ, ಸಹಕಾರ ಮುಂತಾದ ಕ್ಷೇತ್ರಗಳ ಸಮಗ್ರ ಚಿಂತನೆಗೆ ಮೇಲ್ಮನೆ ಮತ್ತು ಕೆಳಮನೆ ಸಭಾಧ್ಯಕ್ಷರು ಶಾಸಕರಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಹೆಚ್ಚಿನ ಅವಕಾಶ ಒದಗಿಸುವ ಮೂಲಕ ಈ ಭಾಗದ ಸಮಗ್ರ ಅಭಿವೃದ್ಧಿ ಗೆ ಸರ್ಕಾರ ಸಹಾಯ ಸಹಕಾರ ನೀಡಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>