ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಡಿಲು ಬಡಿದು ಸಾವು

Last Updated 6 ಸೆಪ್ಟೆಂಬರ್ 2022, 8:35 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡೀ ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಇಳಕಲ್‌ ತಾಲ್ಲೂಕಿನ ದಮ್ಮೂರ ಗ್ರಾಮದಲ್ಲಿ ಸಿಡಿಲು ಬಡಿದು ಸಣ್ಣನೀಲಪ್ಪ ಹಾದಿಮನಿ ಎಂಬುವವರು ಮೃತಪಟ್ಟಿದ್ದಾರೆ.

ಬಾದಾಮಿಯ ಅಗಸ್ತ್ಯ ತೀರ್ಥ ಹೊಂಡ ತುಂಬಿ ಹರಿಯುತ್ತಿದ್ದು, ಬಾದಾಮಿಯ ಹಲವು ಪ್ರದೇಶಗಳಿಗೆ, ಮನೆಗಳಿಗೆ ನೀರು ನುಗ್ಗಿದೆ. ಇದೇ ತಾಲ್ಲೂಕಿನ ನೀರಲಕೇರಿ ಗ್ರಾಮದ ಮನೆಗಳಿಗೆ ಪಕ್ಕದ ಗುಡ್ಡದಿಂದ ಬಂದ ನೀರು ಹೊಕ್ಕಿದೆ.

ಮುಧೋಳ ತಾಲ್ಲೂಕಿನ ಯಡಹಳ್ಳಿ ಬಳಿ ಹಳ್ಳ ಉಕ್ಕಿ ಸೇತುವೆ ಕೊಚ್ಚಿ ಹೋಗಿರುವುದರಿಂದ ಮುಧೋಳ– ಅನಗವಾಡಿಗೆ ಸಂಪರ್ಕಿಸುವ ರಸ್ತೆಯಲ್ಲಿ ಸಂಚಾರ ಬಂದ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT