ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣೆಯಲ್ಲಿ ಒಂದು ಟಿಎಂಸಿ ನೀರು ಮಾತ್ರ!

ನೀರು ಕಡಿಮೆಯಾದ್ದರಿಂದ ಸಂಚಾರಕ್ಕೆ ಮುಕ್ತವಾದ ಸೇತುವೆ
Published 1 ಜೂನ್ 2023, 12:26 IST
Last Updated 1 ಜೂನ್ 2023, 12:26 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಮುಂದಿನ ದಿನಗಳಲ್ಲಿ ಜಮಖಂಡಿ, ರಬಕವಿ ಬನಹಟ್ಟಿ, ತೇರದಾಳ ಆಥಣಿ, ರಾಯಬಾಗ ತಾಲ್ಲೂಕಿನ ಬಹುತೇಕ ನಗರ ಮತ್ತು ಗ್ರಾಮೀಣ ಭಾಗದಲ್ಲಿ ನೀರಿನ ಕೊರತೆ ಉಂಟಾಗಲಿದೆ. 

‘ಕೃಷ್ಣಾ ನದಿಯಲ್ಲಿ ಸದ್ಯ ಇರುವ ನೀರು ಕೇವಲ ಇಪ್ಪತ್ತು ದಿನಗಳವರೆಗೆ ಮಾತ್ರ ಬರುತ್ತದೆ. ಕಳೆದ ವರ್ಷ ಕೃಷ್ಣಾ ನದಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಿದ್ದಿದ್ದರಿಂದ ಯಾವುದೇ ಸಮಸ್ಯೆ ಉಂಟಾಗಿರಲಿಲ್ಲ. ನೀರಿನ ಕೊರತೆ ನೀಗಿದಲು ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಮಳೆಯಾಗಿ ಕೃಷ್ಣಾ ನದಿಗೆ ನೀರು ಹರಿದು ಬರಬೇಕು. ಇಲ್ಲವೆ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ಒಂದೆರಡು ಟಿಎಂಸಿ ನೀರನ್ನು ಬಿಡಬೇಕು. ಸದ್ಯದ ಪರಿಸ್ಥಿತಿಯಲ್ಲಿ ನೀರು ಬಿಟ್ಟರೆ ಮಾತ್ರ ಮುಂದಿನ ದಿನಗಳಲ್ಲಿ ಕೃಷ್ಣಾ ನದಿ ತೀರದ ಜನ ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗುವುದಿಲ್ಲ’ ಎಂದು ಹಿಪ್ಪರಗಿ ಜಲಾಶಯದ ಕಾರ್ಯಪಾಲ ಎಂಜಿನಿಯರ್ ಶ್ರೀನಾಥ ಜಿ. ತಿಳಿಸಿದರು.

ವಿಧಾನಸಭೆಯ ಚುನಾವಣೆಯ ಪೂರ್ವದಲ್ಲಿ ಕೃಷ್ಣಾ ನದಿಗೆ ಎರಡು ಟಿಎಂಸಿ ನೀರನ್ನು ಬಿಡಲಾಗಿತ್ತು. ಅದು ಇಲ್ಲಿಯವರೆಗೆ ಬಂದಿದೆ. ಈ ಭಾಗದಲ್ಲಿ ನೀರಿನ ಕೊರತೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ. ಈ ಭಾಗದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಿಸಿಲಿನ ತಾಪಮಾನ ಇರುವುದರಿಂದ ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ.

ತೆರವುಗೊಂಡ ಸೇತುವೆ: ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಸೇತುವೆ ತೆರವುಗೊಂಡಿದೆ. ಇದರಿಂದಾಗಿ ರಬಕವಿ ಬನಹಟ್ಟಿ ಹಾಗೂ ಅಥಣಿ ತಾಲ್ಲೂಕಿನ ಜನರಿಗೆ ಅನುಕೂಲವಾಗಿದೆ.

‘15 ದಿನಗಳವರೆಗೆ ಸಮಸ್ಯೆ ಇರದು’

ಕೃಷ್ಣಾ ನದಿ ತೀರದ ಜನರಿಗೆ ಇನ್ನೂ ಹದಿನೈದು ದಿನಗಳವರೆಗೆ ನೀರಿನ ಯಾವುದೆ ಸಮಸ್ಯೆ ಉಂಟಾಗುವುದಿಲ್ಲ. ಬಾಗಲಕೋಟೆ ಜಿಲ್ಲಾಧಿಕಾರಿಗಳು ಕೂಡಾ ಅಧಿಕಾರಿಗಳ ಸಭೆಯನ್ನು ಕರೆದು ನೀರಿನ ಅಭಾವ ಮತ್ತು ಪ್ರವಾಹದ ಕುರಿತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ತಾಲ್ಲೂಕು ಆಡಳಿತ ಕೂಡ ಸಜ್ಜಾಗಿದ್ದು, ನೀರಿನ ತೊಂದರೆಯಾದರೆ ನೀರು ಪೂರೈಕೆಗೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್‌ ಡಾ.ಡಿ.ಎಚ್. ಹೂಗಾರ ಹೇಳಿದರು.

‘15 ದಿನಗಳವರೆಗೆ ಸಮಸ್ಯೆ ಇರದು’

ಕೃಷ್ಣಾ ನದಿ ತೀರದ ಜನರಿಗೆ ಇನ್ನೂ ಹದಿನೈದು ದಿನಗಳವರೆಗೆ ನೀರಿನ ಯಾವುದೆ ಸಮಸ್ಯೆ ಉಂಟಾಗುವುದಿಲ್ಲ. ಬಾಗಲಕೋಟೆ ಜಿಲ್ಲಾಧಿಕಾರಿಗಳು ಕೂಡಾ ಅಧಿಕಾರಿಗಳ ಸಭೆಯನ್ನು ಕರೆದು ನೀರಿನ ಅಭಾವ ಮತ್ತು ಪ್ರವಾಹದ ಕುರಿತು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ತಾಲ್ಲೂಕು ಆಡಳಿತ ಕೂಡ ಸಜ್ಜಾಗಿದ್ದು ನೀರಿನ ತೊಂದರೆಯಾದರೆ ನೀರು ಪೂರೈಕೆಗೆ ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್‌ ಡಾ.ಡಿ.ಎಚ್. ಹೂಗಾರ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT