<p><strong>ಬಾಗಲಕೋಟೆ</strong>: ‘ಪಹಲ್ಗಾಮ್ನಲ್ಲಿ ದಾಳಿ ಮಾಡುವವನು ಧರ್ಮ ಕೇಳುತ್ತಾ ಕೂಡಲಿಕ್ಕೆ ಆಗುತ್ತದೆಯೇ? ಕೇಳಿರಲಿಕ್ಕಿಲ್ಲ ಎಂಬ ಭಾವನೆ ನನ್ನದು. ಕೇಳಿದ್ದರೂ, ಧರ್ಮದ ಹೆಸರಿನಲ್ಲಿ ಎಲ್ಲರಿಗೂ ಜೋಡಿಸುವುದು ಸರಿಯಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p><p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೇಹುಗಾರಿಕೆ ವೈಫಲ್ಯ ಮುಚ್ಚಿಸಲು ಹಿಂದೂ–ಮುಸ್ಲಿಂ ಬಣ್ಣ ಕಟ್ಟುವುದು. ಚುನಾವಣೆ ದೃಷ್ಟಿಯಿಂದ ನೋಡುವುದು ಸರಿಯಲ್ಲ’ ಎಂದರು.</p><p>‘ಕಾರ್ಗಿಲ್, ಪುಲ್ವಾಮ, ಪಹಲ್ಗಾಮ್ ದಾಳಿ ನೋಡಿದರೆ ಕೇಂದ್ರದ ಬೇಹುಗಾರಿಕೆ ವೈಫಲ್ಯ ಗೊತ್ತಾಗುತ್ತದೆ. ಸತ್ತವರ ಹೆಸರಿನಲ್ಲಿ ಲಾಭ ತೆಗೆದುಕೊಳ್ಳುವುದೇ ಬಿಜೆಪಿಯವರ ಧ್ಯೇಯವಾಗಿದೆ. ದೇಶ ಗಂಡಾಂತರದಲ್ಲಿದ್ದಾಗ್ಯೂ ರಾಜಕೀಯ ಮಾಡಲಾಗುತ್ತದೆ’ ಎಂದು ಟೀಕಿಸಿದರು.</p><p>‘ಜಾತಿ ಗಣತಿ ಬಗ್ಗೆ ಇರುವ ಗೊಂದಲಗಳನ್ನು ಸರಿಪಡಿಸಲಾಗುವುದು. ಯಾರಿಗೂ ಅನ್ಯಾಯವಾಗದಂತೆ ಕ್ರಮಕೈಗೊಳ್ಳಲಾಗುವುದು. ವರದಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿರುವಾಗಲೇ ಅನ್ಯಾಯ ಆಗಿದೆ ಎಂಬಂತೆ ಬಿಜೆಪಿಯವರು ಬಿಂಬಿಸುತ್ತಿರುವುದು ಸರಿಯಲ್ಲ’ ಎಂದರು.</p><p>‘ಒಳಮೀಸಲಾತಿ ವಿಳಂಬವಾಗಿದೆ ಎಂದು ಪ್ರಶ್ನಿಸುವ ಬಿಜೆಪಿಯವರು, ಅಧಿಕಾರದಲ್ಲಿರುವಾಗ ಯಾಕೆ ಜಾರಿಗೆ ತರಲಿಲ್ಲ. ಜನರಿಗೆ ಮೋಸ ಮಾಡುತ್ತಲೇ ಬಂದಿದ್ದಾರೆ. ಅವೈಜ್ಞಾನಿಕವಾಗಿ ಚುನಾವಣೆಗೆ ಮುನ್ನ ಘೋಷಿಸಿ ಹೋದರು. ಸುಳ್ಳು ಹೇಳುವುದೇ ಬಿಜೆಪಿ ಸಾಧನೆಯಾಗಿದೆ’ ಎಂದು ವಾಗ್ದಾಳಿ ನಡೆಸಿದರು.</p><p>‘ಕೇಂದ್ರ ಸರ್ಕಾರ ಸಕ್ಕರೆ ಮಾರಾಟಕ್ಕೆ ಅವಕಾಶ ನೀಡಬೇಕು. ರಾಜ್ಯ ಸರ್ಕಾರ ವಿದ್ಯುತ್ ಹಣ ಪಾವತಿ ಮಾಡಿರುವುದು ಬಾಕಿ ಉಳಿಸಿಕೊಂಡಿರುವ ಬಗ್ಗೆ ಪರಿಶೀಲಿಸಲಾಗುವುದು. ರೈತರಿಗೆ ಶೀಘ್ರ ಹಣ ಪಾವತಿಗೆ ಕ್ರಮಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಪಹಲ್ಗಾಮ್ನಲ್ಲಿ ದಾಳಿ ಮಾಡುವವನು ಧರ್ಮ ಕೇಳುತ್ತಾ ಕೂಡಲಿಕ್ಕೆ ಆಗುತ್ತದೆಯೇ? ಕೇಳಿರಲಿಕ್ಕಿಲ್ಲ ಎಂಬ ಭಾವನೆ ನನ್ನದು. ಕೇಳಿದ್ದರೂ, ಧರ್ಮದ ಹೆಸರಿನಲ್ಲಿ ಎಲ್ಲರಿಗೂ ಜೋಡಿಸುವುದು ಸರಿಯಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.</p><p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೇಹುಗಾರಿಕೆ ವೈಫಲ್ಯ ಮುಚ್ಚಿಸಲು ಹಿಂದೂ–ಮುಸ್ಲಿಂ ಬಣ್ಣ ಕಟ್ಟುವುದು. ಚುನಾವಣೆ ದೃಷ್ಟಿಯಿಂದ ನೋಡುವುದು ಸರಿಯಲ್ಲ’ ಎಂದರು.</p><p>‘ಕಾರ್ಗಿಲ್, ಪುಲ್ವಾಮ, ಪಹಲ್ಗಾಮ್ ದಾಳಿ ನೋಡಿದರೆ ಕೇಂದ್ರದ ಬೇಹುಗಾರಿಕೆ ವೈಫಲ್ಯ ಗೊತ್ತಾಗುತ್ತದೆ. ಸತ್ತವರ ಹೆಸರಿನಲ್ಲಿ ಲಾಭ ತೆಗೆದುಕೊಳ್ಳುವುದೇ ಬಿಜೆಪಿಯವರ ಧ್ಯೇಯವಾಗಿದೆ. ದೇಶ ಗಂಡಾಂತರದಲ್ಲಿದ್ದಾಗ್ಯೂ ರಾಜಕೀಯ ಮಾಡಲಾಗುತ್ತದೆ’ ಎಂದು ಟೀಕಿಸಿದರು.</p><p>‘ಜಾತಿ ಗಣತಿ ಬಗ್ಗೆ ಇರುವ ಗೊಂದಲಗಳನ್ನು ಸರಿಪಡಿಸಲಾಗುವುದು. ಯಾರಿಗೂ ಅನ್ಯಾಯವಾಗದಂತೆ ಕ್ರಮಕೈಗೊಳ್ಳಲಾಗುವುದು. ವರದಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿರುವಾಗಲೇ ಅನ್ಯಾಯ ಆಗಿದೆ ಎಂಬಂತೆ ಬಿಜೆಪಿಯವರು ಬಿಂಬಿಸುತ್ತಿರುವುದು ಸರಿಯಲ್ಲ’ ಎಂದರು.</p><p>‘ಒಳಮೀಸಲಾತಿ ವಿಳಂಬವಾಗಿದೆ ಎಂದು ಪ್ರಶ್ನಿಸುವ ಬಿಜೆಪಿಯವರು, ಅಧಿಕಾರದಲ್ಲಿರುವಾಗ ಯಾಕೆ ಜಾರಿಗೆ ತರಲಿಲ್ಲ. ಜನರಿಗೆ ಮೋಸ ಮಾಡುತ್ತಲೇ ಬಂದಿದ್ದಾರೆ. ಅವೈಜ್ಞಾನಿಕವಾಗಿ ಚುನಾವಣೆಗೆ ಮುನ್ನ ಘೋಷಿಸಿ ಹೋದರು. ಸುಳ್ಳು ಹೇಳುವುದೇ ಬಿಜೆಪಿ ಸಾಧನೆಯಾಗಿದೆ’ ಎಂದು ವಾಗ್ದಾಳಿ ನಡೆಸಿದರು.</p><p>‘ಕೇಂದ್ರ ಸರ್ಕಾರ ಸಕ್ಕರೆ ಮಾರಾಟಕ್ಕೆ ಅವಕಾಶ ನೀಡಬೇಕು. ರಾಜ್ಯ ಸರ್ಕಾರ ವಿದ್ಯುತ್ ಹಣ ಪಾವತಿ ಮಾಡಿರುವುದು ಬಾಕಿ ಉಳಿಸಿಕೊಂಡಿರುವ ಬಗ್ಗೆ ಪರಿಶೀಲಿಸಲಾಗುವುದು. ರೈತರಿಗೆ ಶೀಘ್ರ ಹಣ ಪಾವತಿಗೆ ಕ್ರಮಕೈಗೊಳ್ಳಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>