<p><strong>ಬಾಗಲಕೋಟೆ</strong>: ‘ಕೂಡಲಸಂಗಮದಲ್ಲಿ ಲಿಂಗಾಯತ ಪಂಚಮಸಾಲಿ ಪೀಠ ಕಟ್ಟಲು ಹಣ ಕೊಟ್ಟವರು ಮುರುಗೇಶ ನಿರಾಣಿ. ಅನುದಾನ ನೀಡಿದ್ದು ಬಿಜೆಪಿ ಸರ್ಕಾರ. ಸಮಾಜ, ಪೀಠಕ್ಕೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಕೊಡುಗೆ ಏನು?’ ಎಂದು ಶಾಸಕ ಸಿ.ಸಿ.ಪಾಟೀಲ ಪ್ರಶ್ನಿಸಿದರು.</p>.<p>ನಗರದ ಕೆರೂಡಿ ಆಸ್ಪತ್ರೆಯಲ್ಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಗ್ಯ ವಿಚಾರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಪಾದಯಾತ್ರೆಗೆ, ಪತ್ನಿಗೆ ಟಿಕೆಟ್ ಬೇಕಾದಾಗ ಸ್ವಾಮೀಜಿ ಬೇಕಾಗಿದ್ದರು. ಸ್ವಾಮೀಜಿಯನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು. ಎಲ್ಲವನ್ನೂ ಸಮಾಜ ನೋಡುತ್ತಿದೆ’ ಎಂದರು.</p>.<p>‘ಮಠಕ್ಕೆ ಕೀಲಿ ಹಾಕಿ. ಕಾವಲಿಗೆ ಬೇರೆ ಸಮಾಜದವರನ್ನು ನೇಮಿಸಿ. ಬಂದವರ ಫೋಟೊ ತೆಗೆಯುವುದು ಮಾಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಸ್ವಾಮೀಜಿ ಹಣಕ್ಕಾಗಿ ಆಸೆಪಟ್ಟವರಲ್ಲ. ಬ್ಯಾಂಕ್ ಬ್ಯಾಲೆನ್ಸ್ ಇಲ್ಲ. ಯಾವುದೇ ಊರಿಗೆ ಹೋದರೆ ಭಕ್ತರ ಮನೆಯಲ್ಲಿರುತ್ತಾರೆ. ಅವರು ನಮ್ಮ ಸರ್ಕಾರದ ವಿರುದ್ಧವೇ ಹೋರಾಟ ಮಾಡಿದ್ದರು. ಹೋರಾಟಕ್ಕೆ ನಾವೂ ಬೆಂಬಲ ಕೊಟ್ಟಿದ್ದೆವು’ ಎಂದು ನೆನಪಿಸಿಕೊಂಡರು. </p>.<p>‘ನಮ್ಮ ಆಸ್ತಿ ಕಾಶಪ್ಪನವರ ತೆಗೆದುಕೊಂಡಿಲ್ಲ. ನಾನು ಅವರ ಆಸ್ತಿ ತೆಗೆದುಕೊಂಡಿಲ್ಲ. ಅವರ ಅಜೆಂಡಾ ಬೇರೆ ಇದೆ. ಭಿನ್ನಾಭಿಪ್ರಾಯವಿದ್ದರೆ ಚರ್ಚಿಸಿ, ಬಗೆಹರಿಸಿಕೊಳ್ಳೋಣ’ ಎಂದರು.</p>.<p><strong>ಸ್ವಾಮೀಜಿ ಡಿಸ್ಚಾರ್ಜ್: ಚಿಕಿತ್ಸೆ ಬಳಿಕ </strong>ಸ್ವಾಮೀಜಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಆದರು. ‘ನೇರವಾಗಿ ಪೀಠಕ್ಕೆ ಹೋಗುತ್ತಿದ್ದೇನೆ. ಇನ್ನೂ ಎರಡು ದಿನ ಅಲ್ಲಿಯೇ ಇರುತ್ತೇನೆ. ಭಕ್ತರು ಆತಂಕಕ್ಕೆ ಒಳಗಾಗಬಾರದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಕೂಡಲಸಂಗಮದಲ್ಲಿ ಲಿಂಗಾಯತ ಪಂಚಮಸಾಲಿ ಪೀಠ ಕಟ್ಟಲು ಹಣ ಕೊಟ್ಟವರು ಮುರುಗೇಶ ನಿರಾಣಿ. ಅನುದಾನ ನೀಡಿದ್ದು ಬಿಜೆಪಿ ಸರ್ಕಾರ. ಸಮಾಜ, ಪೀಠಕ್ಕೆ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಕೊಡುಗೆ ಏನು?’ ಎಂದು ಶಾಸಕ ಸಿ.ಸಿ.ಪಾಟೀಲ ಪ್ರಶ್ನಿಸಿದರು.</p>.<p>ನಗರದ ಕೆರೂಡಿ ಆಸ್ಪತ್ರೆಯಲ್ಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಗ್ಯ ವಿಚಾರಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>‘ಪಾದಯಾತ್ರೆಗೆ, ಪತ್ನಿಗೆ ಟಿಕೆಟ್ ಬೇಕಾದಾಗ ಸ್ವಾಮೀಜಿ ಬೇಕಾಗಿದ್ದರು. ಸ್ವಾಮೀಜಿಯನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು. ಎಲ್ಲವನ್ನೂ ಸಮಾಜ ನೋಡುತ್ತಿದೆ’ ಎಂದರು.</p>.<p>‘ಮಠಕ್ಕೆ ಕೀಲಿ ಹಾಕಿ. ಕಾವಲಿಗೆ ಬೇರೆ ಸಮಾಜದವರನ್ನು ನೇಮಿಸಿ. ಬಂದವರ ಫೋಟೊ ತೆಗೆಯುವುದು ಮಾಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಸ್ವಾಮೀಜಿ ಹಣಕ್ಕಾಗಿ ಆಸೆಪಟ್ಟವರಲ್ಲ. ಬ್ಯಾಂಕ್ ಬ್ಯಾಲೆನ್ಸ್ ಇಲ್ಲ. ಯಾವುದೇ ಊರಿಗೆ ಹೋದರೆ ಭಕ್ತರ ಮನೆಯಲ್ಲಿರುತ್ತಾರೆ. ಅವರು ನಮ್ಮ ಸರ್ಕಾರದ ವಿರುದ್ಧವೇ ಹೋರಾಟ ಮಾಡಿದ್ದರು. ಹೋರಾಟಕ್ಕೆ ನಾವೂ ಬೆಂಬಲ ಕೊಟ್ಟಿದ್ದೆವು’ ಎಂದು ನೆನಪಿಸಿಕೊಂಡರು. </p>.<p>‘ನಮ್ಮ ಆಸ್ತಿ ಕಾಶಪ್ಪನವರ ತೆಗೆದುಕೊಂಡಿಲ್ಲ. ನಾನು ಅವರ ಆಸ್ತಿ ತೆಗೆದುಕೊಂಡಿಲ್ಲ. ಅವರ ಅಜೆಂಡಾ ಬೇರೆ ಇದೆ. ಭಿನ್ನಾಭಿಪ್ರಾಯವಿದ್ದರೆ ಚರ್ಚಿಸಿ, ಬಗೆಹರಿಸಿಕೊಳ್ಳೋಣ’ ಎಂದರು.</p>.<p><strong>ಸ್ವಾಮೀಜಿ ಡಿಸ್ಚಾರ್ಜ್: ಚಿಕಿತ್ಸೆ ಬಳಿಕ </strong>ಸ್ವಾಮೀಜಿ ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಆದರು. ‘ನೇರವಾಗಿ ಪೀಠಕ್ಕೆ ಹೋಗುತ್ತಿದ್ದೇನೆ. ಇನ್ನೂ ಎರಡು ದಿನ ಅಲ್ಲಿಯೇ ಇರುತ್ತೇನೆ. ಭಕ್ತರು ಆತಂಕಕ್ಕೆ ಒಳಗಾಗಬಾರದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>