ಬಾಗಲಕೋಟೆ : ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮೂರನೇ ಪೀಠದ ನೂತನ ಪೀಠಾಧಿಪತಿ ಷ.ಬ್ರ. ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಭಾನುವಾರ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ ಬಳಿ ಕೃಷ್ಣಾ ನದಿಗೆ ಆರತಿ ಕಾರ್ಯಕ್ರಮ ನಡೆಯಿತು.
ಪೀಠಾರೋಹಣದ ಧಾರ್ಮಿಕ ಕಾರ್ಯಕ್ರಮ ಬಳಿಕ ಕೃಷ್ಣೆಗೆ ಆರತಿ ಕಾರ್ಯಕ್ರಮ ನಡೆಯಿತು.
ಅದಕ್ಕೂ ಮುನ್ನ ನೂತನ ಪೀಠಾಧಿಪತಿಗೆ ರುದ್ರಾಕ್ಷಿ ಕಿರೀಟ ಧಾರಣೆ ಮಾಡಲಾಯಿತು.