ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಾಹ್ಮಿ ಮುಹೂರ್ತದಲ್ಲಿ ಪೀಠಾರೋಹಣ ಮಾಡಿದ ಡಾ. ಮಹಾದೇವ ಶಿವಾಚಾರ್ಯ ಸ್ವಾಮೀಜಿ

ಪಂಚಮಸಾಲಿ ಸಮಾಜದ ಮೂರನೇ ಪೀಠ
Last Updated 13 ಫೆಬ್ರುವರಿ 2022, 4:59 IST
ಅಕ್ಷರ ಗಾತ್ರ

ಬಾಗಲಕೋಟೆ: ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ಮೂರನೇ ಪೀಠದ ಪೀಠಾಧಿಪತಿಯಾಗಿ ಷ.ಬ್ರ.ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ ಅವರಿಗೆಜಮಖಂಡಿ ತಾಲ್ಲೂಕಿನ ಆಲಗೂರಿನಲ್ಲಿ ಭಾನುವಾರ ಬೆಳಗಿನ ಜಾವ ಪಟ್ಟಾಭಿಷೇಕ ನೆರವೇರಿತು.

ನಸುಕಿನ ಬ್ರಾಹ್ಮಿ ಮುಹೂರ್ತದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳು ಹಾಜರಿದ್ದರು.

ಪೀಠಾರೋಹಣ ಸ್ಥಳಕ್ಕೆ ಬಂದ ಡಾ. ಮಹಾದೇವ ಶಿವಾಚಾರ್ಯ ಸ್ವಾಮೀಜಿಗೆ ರುದ್ರಾಭಿಷೇಕ ನೆರವೇರಿಸಲಾಯಿತು. ಅರಿಷಿಣ, ಗಂಧ ಲೇಪಿಸಿ ಹಾಲು, ಜೇನು,ತುಪ್ಪ, ಸಕ್ಕರೆ, ಪಂಚಾಮೃತ ಅಭಿಷೇಕ ಮಾಡಲಾಯಿತು. ಈ ವೇಳೆ ಒಕ್ಕೂಟದ ಸ್ವಾಮಿಗಳು ಪರಸ್ಪರ ಅರಿಶಿಣ ಬಳಿದುಕೊಂಡರು.

ನಂತರ ರುದ್ರಾಭಿಷೇಕ ಆಸನದಲ್ಲಿ ಕೂರಿಸಿ ಮಂತ್ರ ಪಠಣ, ಪೂಜಾ ವಿಧಿ-ವಿಧಾನಗಳ ನೆರವೇರಿಸಲಾಯಿತು.

ಪಂಚಮಸಾಲಿ ಮಠಾಧೀಶರ ಒಕ್ಕೂಟದ ಕಾರ್ಯದರ್ಶಿ ಸಂಗನಬಸವ ಸ್ವಾಮೀಜಿ, ಉಪಾಧ್ಯಕ್ಷ ಬೆಂಡವಾಡದ ರೇವಣಸಿದ್ಧ ಸ್ವಾಮೀಜಿ, ಸಿದ್ಧಲಿಂಗ ದೇವರು ಸೇರಿದಂತೆ ವಿವಿಧ ಮಠಾಧೀಶರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT