<p><strong>ಬಾಗಲಕೋಟೆ</strong>: ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ಮೂರನೇ ಪೀಠದ ಪೀಠಾಧಿಪತಿಯಾಗಿ ಷ.ಬ್ರ.ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ ಅವರಿಗೆಜಮಖಂಡಿ ತಾಲ್ಲೂಕಿನ ಆಲಗೂರಿನಲ್ಲಿ ಭಾನುವಾರ ಬೆಳಗಿನ ಜಾವ ಪಟ್ಟಾಭಿಷೇಕ ನೆರವೇರಿತು.</p>.<p>ನಸುಕಿನ ಬ್ರಾಹ್ಮಿ ಮುಹೂರ್ತದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳು ಹಾಜರಿದ್ದರು.</p>.<p>ಪೀಠಾರೋಹಣ ಸ್ಥಳಕ್ಕೆ ಬಂದ ಡಾ. ಮಹಾದೇವ ಶಿವಾಚಾರ್ಯ ಸ್ವಾಮೀಜಿಗೆ ರುದ್ರಾಭಿಷೇಕ ನೆರವೇರಿಸಲಾಯಿತು. ಅರಿಷಿಣ, ಗಂಧ ಲೇಪಿಸಿ ಹಾಲು, ಜೇನು,ತುಪ್ಪ, ಸಕ್ಕರೆ, ಪಂಚಾಮೃತ ಅಭಿಷೇಕ ಮಾಡಲಾಯಿತು. ಈ ವೇಳೆ ಒಕ್ಕೂಟದ ಸ್ವಾಮಿಗಳು ಪರಸ್ಪರ ಅರಿಶಿಣ ಬಳಿದುಕೊಂಡರು.</p>.<p>ನಂತರ ರುದ್ರಾಭಿಷೇಕ ಆಸನದಲ್ಲಿ ಕೂರಿಸಿ ಮಂತ್ರ ಪಠಣ, ಪೂಜಾ ವಿಧಿ-ವಿಧಾನಗಳ ನೆರವೇರಿಸಲಾಯಿತು.</p>.<p>ಪಂಚಮಸಾಲಿ ಮಠಾಧೀಶರ ಒಕ್ಕೂಟದ ಕಾರ್ಯದರ್ಶಿ ಸಂಗನಬಸವ ಸ್ವಾಮೀಜಿ, ಉಪಾಧ್ಯಕ್ಷ ಬೆಂಡವಾಡದ ರೇವಣಸಿದ್ಧ ಸ್ವಾಮೀಜಿ, ಸಿದ್ಧಲಿಂಗ ದೇವರು ಸೇರಿದಂತೆ ವಿವಿಧ ಮಠಾಧೀಶರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯದ ಮೂರನೇ ಪೀಠದ ಪೀಠಾಧಿಪತಿಯಾಗಿ ಷ.ಬ್ರ.ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿ ಅವರಿಗೆಜಮಖಂಡಿ ತಾಲ್ಲೂಕಿನ ಆಲಗೂರಿನಲ್ಲಿ ಭಾನುವಾರ ಬೆಳಗಿನ ಜಾವ ಪಟ್ಟಾಭಿಷೇಕ ನೆರವೇರಿತು.</p>.<p>ನಸುಕಿನ ಬ್ರಾಹ್ಮಿ ಮುಹೂರ್ತದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳು ಹಾಜರಿದ್ದರು.</p>.<p>ಪೀಠಾರೋಹಣ ಸ್ಥಳಕ್ಕೆ ಬಂದ ಡಾ. ಮಹಾದೇವ ಶಿವಾಚಾರ್ಯ ಸ್ವಾಮೀಜಿಗೆ ರುದ್ರಾಭಿಷೇಕ ನೆರವೇರಿಸಲಾಯಿತು. ಅರಿಷಿಣ, ಗಂಧ ಲೇಪಿಸಿ ಹಾಲು, ಜೇನು,ತುಪ್ಪ, ಸಕ್ಕರೆ, ಪಂಚಾಮೃತ ಅಭಿಷೇಕ ಮಾಡಲಾಯಿತು. ಈ ವೇಳೆ ಒಕ್ಕೂಟದ ಸ್ವಾಮಿಗಳು ಪರಸ್ಪರ ಅರಿಶಿಣ ಬಳಿದುಕೊಂಡರು.</p>.<p>ನಂತರ ರುದ್ರಾಭಿಷೇಕ ಆಸನದಲ್ಲಿ ಕೂರಿಸಿ ಮಂತ್ರ ಪಠಣ, ಪೂಜಾ ವಿಧಿ-ವಿಧಾನಗಳ ನೆರವೇರಿಸಲಾಯಿತು.</p>.<p>ಪಂಚಮಸಾಲಿ ಮಠಾಧೀಶರ ಒಕ್ಕೂಟದ ಕಾರ್ಯದರ್ಶಿ ಸಂಗನಬಸವ ಸ್ವಾಮೀಜಿ, ಉಪಾಧ್ಯಕ್ಷ ಬೆಂಡವಾಡದ ರೇವಣಸಿದ್ಧ ಸ್ವಾಮೀಜಿ, ಸಿದ್ಧಲಿಂಗ ದೇವರು ಸೇರಿದಂತೆ ವಿವಿಧ ಮಠಾಧೀಶರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>