<p>ಪ್ರಜಾವಾಣಿ ವಾರ್ತೆ</p>.<p>ಬಾಗಲಕೋಟೆ: ಸದೃಢವಾದ ದೇಹ ಮತ್ತು ಮನಸ್ಸು ಇದ್ದಾಗ ಮಾತ್ರ ಸಾರ್ಥಕವಾದ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.</p>.<p>ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ದಿ ಇಲಾಖೆಯ ಎಲ್ಲ ವೃಂದ ಸಂಘಗಳು, ಕ್ರೀಡಾ ಇಲಾಖೆ ಸಹಯೋಗದಲ್ಲಿ ಪಂಚಾಯತ ರಾಜ್ ಇಲಾಖೆ ಸಿಬ್ಬಂದಿಗೆ ಹಮ್ಮಿಕೊಂಡ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ದಿನನಿತ್ಯದ ಕೆಲಸದ ಒತ್ತಡದಲ್ಲಿ ದೇಹ ಮತ್ತು ಮನಸ್ಸು ಮರೆಯುವುದು ಸಹಜ. ಆದರೆ, ಆರೋಗ್ಯವಿಲ್ಲದೆ ಯಾವುದೇ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ. ಕ್ರೀಡಾಕೂಟದ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಮನರಂಜನೆಗೆ ಮಾತ್ರವಲ್ಲ. ಅವು ನಮ್ಮೊಳಗಿನ ಮಾನವೀಯತೆ ಜಾಗೃತಿಗೊಳಿಸುತ್ತವೆ ಎಂದರು.</p>.<p>ನೃತ್ಯ, ಸಂಗೀತ, ನಾಟಕಗಳು ನಮಗಾಗಿರುವ ಒತ್ತಡ ಕಡಿಮೆ ಮಾಡುವುದರ ಜೊತೆಗೆ ಸಹದ್ಯೋಗಿಗಳ ಜೊತೆಗಿನ ಸಂಬಂಧ ಗಟ್ಟಿಗೊಳಿಸುತ್ತವೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕ್ರೀಡೆಯಿಂದ ಶಿಸ್ತು ಮೂಡುತ್ತದೆ. ಇದೇ ತರಹ ಕ್ರೀಡಾಕೂಟವನ್ನು ಬೇರೆ, ಬೇರೆ ಇಲಾಖೆಯವರು ಸಹ ಕ್ರೀಡಾಕೂಟ ಆಯೋಜಿಸುವ ಕೆಲಸ ಆಗಬೇಕು ಎಂದರು.</p>.<p>ಉಪಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್ ಮಾತನಾಡಿ, ಪಂಚಾಯತ ರಾಜ್ ಇಲಾಖೆ ಸಿಬ್ಬಂದಿಯದು ಒತ್ತಡದ ಕೆಲಸ, ಒತ್ತಡದ ಬದುಕಿನಿಂದ ಹೊರಬರಲು ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಮಾತನಾಡಿ, ಆಡಳಿತದಲ್ಲಿ ಸುಧಾರಣೆ ತರಲು, ಉತ್ಸಾಹಿಗಳಾಗಿ ಕೆಲಸ ನಿರ್ವಹಿಸುವಂತಾಗಲಿ ಎಂಬ ದೃಷ್ಟಿಯಿಂದ ಪ್ರತಿ ವರ್ಷ ಕ್ರೀಡಾಕೂಟ ಆಯೋಜನೆ ಮಾಡುತ್ತಾ ಬಂದಿದ್ದೇವೆ. ಕೆಲಸ ಮಾಡಲು ದೇಹದ ಆರೋಗ್ಯದ ಜೊತೆಗೆ ಮನಸ್ಸು ಶುದ್ಧವಾಗಿರಬೇಕಾಗುತ್ತದೆ ಎಂದರು.</p>.<p>ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿದರು. ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪುರ, ಎಸ್.ಎಂ.ಕಾಂಬಳೆ, ಭೀಮಪ್ಪ ತಳವಾರ, ಮಲ್ಲನಗೌಡ ಬಿರಾದಾರ, ಗುರುಪಾದ ಡೂಗನವರ, ರಾಜು ವಾರದ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಬಾಗಲಕೋಟೆ: ಸದೃಢವಾದ ದೇಹ ಮತ್ತು ಮನಸ್ಸು ಇದ್ದಾಗ ಮಾತ್ರ ಸಾರ್ಥಕವಾದ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.</p>.<p>ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ದಿ ಇಲಾಖೆಯ ಎಲ್ಲ ವೃಂದ ಸಂಘಗಳು, ಕ್ರೀಡಾ ಇಲಾಖೆ ಸಹಯೋಗದಲ್ಲಿ ಪಂಚಾಯತ ರಾಜ್ ಇಲಾಖೆ ಸಿಬ್ಬಂದಿಗೆ ಹಮ್ಮಿಕೊಂಡ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ದಿನನಿತ್ಯದ ಕೆಲಸದ ಒತ್ತಡದಲ್ಲಿ ದೇಹ ಮತ್ತು ಮನಸ್ಸು ಮರೆಯುವುದು ಸಹಜ. ಆದರೆ, ಆರೋಗ್ಯವಿಲ್ಲದೆ ಯಾವುದೇ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ. ಕ್ರೀಡಾಕೂಟದ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಮನರಂಜನೆಗೆ ಮಾತ್ರವಲ್ಲ. ಅವು ನಮ್ಮೊಳಗಿನ ಮಾನವೀಯತೆ ಜಾಗೃತಿಗೊಳಿಸುತ್ತವೆ ಎಂದರು.</p>.<p>ನೃತ್ಯ, ಸಂಗೀತ, ನಾಟಕಗಳು ನಮಗಾಗಿರುವ ಒತ್ತಡ ಕಡಿಮೆ ಮಾಡುವುದರ ಜೊತೆಗೆ ಸಹದ್ಯೋಗಿಗಳ ಜೊತೆಗಿನ ಸಂಬಂಧ ಗಟ್ಟಿಗೊಳಿಸುತ್ತವೆ ಎಂದು ಹೇಳಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕ್ರೀಡೆಯಿಂದ ಶಿಸ್ತು ಮೂಡುತ್ತದೆ. ಇದೇ ತರಹ ಕ್ರೀಡಾಕೂಟವನ್ನು ಬೇರೆ, ಬೇರೆ ಇಲಾಖೆಯವರು ಸಹ ಕ್ರೀಡಾಕೂಟ ಆಯೋಜಿಸುವ ಕೆಲಸ ಆಗಬೇಕು ಎಂದರು.</p>.<p>ಉಪಅರಣ್ಯ ಸಂರಕ್ಷಣಾಧಿಕಾರಿ ರುಥ್ರೇನ್ ಮಾತನಾಡಿ, ಪಂಚಾಯತ ರಾಜ್ ಇಲಾಖೆ ಸಿಬ್ಬಂದಿಯದು ಒತ್ತಡದ ಕೆಲಸ, ಒತ್ತಡದ ಬದುಕಿನಿಂದ ಹೊರಬರಲು ಕ್ರೀಡಾಕೂಟ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಮಾತನಾಡಿ, ಆಡಳಿತದಲ್ಲಿ ಸುಧಾರಣೆ ತರಲು, ಉತ್ಸಾಹಿಗಳಾಗಿ ಕೆಲಸ ನಿರ್ವಹಿಸುವಂತಾಗಲಿ ಎಂಬ ದೃಷ್ಟಿಯಿಂದ ಪ್ರತಿ ವರ್ಷ ಕ್ರೀಡಾಕೂಟ ಆಯೋಜನೆ ಮಾಡುತ್ತಾ ಬಂದಿದ್ದೇವೆ. ಕೆಲಸ ಮಾಡಲು ದೇಹದ ಆರೋಗ್ಯದ ಜೊತೆಗೆ ಮನಸ್ಸು ಶುದ್ಧವಾಗಿರಬೇಕಾಗುತ್ತದೆ ಎಂದರು.</p>.<p>ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿದರು. ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪುರ, ಎಸ್.ಎಂ.ಕಾಂಬಳೆ, ಭೀಮಪ್ಪ ತಳವಾರ, ಮಲ್ಲನಗೌಡ ಬಿರಾದಾರ, ಗುರುಪಾದ ಡೂಗನವರ, ರಾಜು ವಾರದ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>