<p><strong>ತೇರದಾಳ:</strong> ‘ಮಕ್ಕಳ ಭವಿಷ್ಯ ಉಜ್ವಲವಾಗಬೇಕೆಂದರೆ ಅಕ್ಷರಾಭ್ಯಾಸದ ಮೂಲಕ ನಮ್ಮ ಸಂಸ್ಕೃತಿಯ ಸ್ಪರ್ಶ ನೀಡಬೇಕಿದೆ’ ಎಂದು ಕಮರಿಮಠದ ಶರಣಬಸವದೇವರು ಹೇಳಿದರು.</p>.<p>ತಾಲ್ಲೂಕಿನ ಹಳಿಂಗಳಿ ಕಮರಿಮಠದ ಆಶ್ರಯದಲ್ಲಿ ನಡೆಯುವ ಶರಣಬಸವೇಶ್ವರ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುಕ್ರವಾರ ಹಮ್ಮಿಕೊಂಡ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಪದ್ಧತಿ ನೆರವೇರಿಸಿ, ಅವರು ಆಶೀರ್ವಚನ ನೀಡಿದರು.</p>.<p>‘ಪಾಲಕರು ಮಕ್ಕಳ ಶೈಕ್ಷಣಿಕ ಚಟುವಟಿಕೆ ಸೇರಿದಂತೆ ಅವರ ಬೆಳವಣಿಗೆಯ ಮೇಲೂ ಸದಾ ನಿಗಾವಹಿಸಿ, ಅವರಿಗೆ ಉತ್ತಮ ಸಂಸ್ಕಾರ ರೂಢಿಸಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಪೀಠಾಧಿಪತಿ ಶಿವಾನಂದ ಶ್ರೀ ಮಕ್ಕಳಿಗೆ ಅಕ್ಷರ ಬರೆಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಾಲಕರು ದಂಪತಿಸಮೇತ ಬಿಳಿಧರಿಸಿನಲ್ಲಿ ಆಗಮಿಸಿ, ತಮ್ಮ ಮಕ್ಕಳ ಅಕ್ಷರಾಭ್ಯಾಸದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಮುಖ್ಯಗುರು ಸೋಮಶೇಖರ ಜಿ.ಎಸ್ ಸೇರಿದಂತೆ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತೇರದಾಳ:</strong> ‘ಮಕ್ಕಳ ಭವಿಷ್ಯ ಉಜ್ವಲವಾಗಬೇಕೆಂದರೆ ಅಕ್ಷರಾಭ್ಯಾಸದ ಮೂಲಕ ನಮ್ಮ ಸಂಸ್ಕೃತಿಯ ಸ್ಪರ್ಶ ನೀಡಬೇಕಿದೆ’ ಎಂದು ಕಮರಿಮಠದ ಶರಣಬಸವದೇವರು ಹೇಳಿದರು.</p>.<p>ತಾಲ್ಲೂಕಿನ ಹಳಿಂಗಳಿ ಕಮರಿಮಠದ ಆಶ್ರಯದಲ್ಲಿ ನಡೆಯುವ ಶರಣಬಸವೇಶ್ವರ ಪ್ರಾಥಮಿಕ ಶಾಲಾ ಮಕ್ಕಳಿಗೆ ಶುಕ್ರವಾರ ಹಮ್ಮಿಕೊಂಡ ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಪದ್ಧತಿ ನೆರವೇರಿಸಿ, ಅವರು ಆಶೀರ್ವಚನ ನೀಡಿದರು.</p>.<p>‘ಪಾಲಕರು ಮಕ್ಕಳ ಶೈಕ್ಷಣಿಕ ಚಟುವಟಿಕೆ ಸೇರಿದಂತೆ ಅವರ ಬೆಳವಣಿಗೆಯ ಮೇಲೂ ಸದಾ ನಿಗಾವಹಿಸಿ, ಅವರಿಗೆ ಉತ್ತಮ ಸಂಸ್ಕಾರ ರೂಢಿಸಬೇಕು’ ಎಂದರು.</p>.<p>ಇದೇ ಸಂದರ್ಭದಲ್ಲಿ ಪೀಠಾಧಿಪತಿ ಶಿವಾನಂದ ಶ್ರೀ ಮಕ್ಕಳಿಗೆ ಅಕ್ಷರ ಬರೆಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಾಲಕರು ದಂಪತಿಸಮೇತ ಬಿಳಿಧರಿಸಿನಲ್ಲಿ ಆಗಮಿಸಿ, ತಮ್ಮ ಮಕ್ಕಳ ಅಕ್ಷರಾಭ್ಯಾಸದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು. ಮುಖ್ಯಗುರು ಸೋಮಶೇಖರ ಜಿ.ಎಸ್ ಸೇರಿದಂತೆ ಶಿಕ್ಷಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>