<p><strong>ಬಾಗಲಕೋಟೆ</strong>: ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಚಾಲುಕ್ಯರ ವಿಶ್ವ ಪಾರಂಪರಿಕ ತಾಣವಾದ ಐತಿಹಾಸಿಕ ಪಟ್ಟದಕಲ್ಲಿನ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರದ ಮೆರುಗು ನೀಡಲಾಗಿದೆ.</p>.<p>ವಿದ್ಯುತ್ ದೀಪಾಲಂಕಾರದ ಡೆಮೊ ವೀಕ್ಷಣೆಯ ನಂತರ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ‘ಪಟ್ಟದಕಲ್ಲಿನಲ್ಲಿ ₹ 1.40 ಕೋಟಿ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ. ಸಂಜೆ 6ರಿಂದ ರಾತ್ರಿ 9ರವರೆಗೆ ದೀಪಾಲಂಕಾರ ಇರಲಿದೆ. ಭಾರತೀಯ ಪುರಾತತ್ವ ಇಲಾಖೆಯು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಿಆರ್.ಎಸ್ ಅನುದಾನದ ಅಡಿಯಲ್ಲಿ ಈ ವ್ಯವಸ್ಥೆ ಮಾಡಿದ್ದು, ದೀಪಗಳ ಜೋಡಣೆ ಕಾರ್ಯ ಪೂರ್ಣಗೊಂಡಿದ್ದು ಮೂರು ದಿನಗಳ ಕಾಲ ಡೆಮೊ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿದ್ಯುತ್ ದೀಪಾಲಂಕಾರದ ಜೊತೆಗೆ ಇಂಪಾದ ಸಂಗೀತ ಕೇಳುವಂತೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯ ನಿರ್ವಹಣೆಯನ್ನು ಮೂರು ವರ್ಷಗಳ ಕಾಲ ಇಂಡಿಯನ್ ಆಯಿಲ್ ಕಾರ್ಪೋರೇಷನ್ದವರೇ ಮಾಡಲಿದ್ದಾರೆ. ನಂತರ ಭಾರತೀಯ ಪುರಾತತ್ವ ಇಲಾಖೆಯವರು ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ, ಉಪ ಅಧೀಕ್ಷಕ ಶ್ರೀಗುರು ಭಾಗಿ, ಹಿರಿಯ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ದ ದೇಸಾಯಿ ಇದ್ದರು.</p>
<p><strong>ಬಾಗಲಕೋಟೆ</strong>: ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಚಾಲುಕ್ಯರ ವಿಶ್ವ ಪಾರಂಪರಿಕ ತಾಣವಾದ ಐತಿಹಾಸಿಕ ಪಟ್ಟದಕಲ್ಲಿನ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರದ ಮೆರುಗು ನೀಡಲಾಗಿದೆ.</p>.<p>ವಿದ್ಯುತ್ ದೀಪಾಲಂಕಾರದ ಡೆಮೊ ವೀಕ್ಷಣೆಯ ನಂತರ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ‘ಪಟ್ಟದಕಲ್ಲಿನಲ್ಲಿ ₹ 1.40 ಕೋಟಿ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ. ಸಂಜೆ 6ರಿಂದ ರಾತ್ರಿ 9ರವರೆಗೆ ದೀಪಾಲಂಕಾರ ಇರಲಿದೆ. ಭಾರತೀಯ ಪುರಾತತ್ವ ಇಲಾಖೆಯು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಿಆರ್.ಎಸ್ ಅನುದಾನದ ಅಡಿಯಲ್ಲಿ ಈ ವ್ಯವಸ್ಥೆ ಮಾಡಿದ್ದು, ದೀಪಗಳ ಜೋಡಣೆ ಕಾರ್ಯ ಪೂರ್ಣಗೊಂಡಿದ್ದು ಮೂರು ದಿನಗಳ ಕಾಲ ಡೆಮೊ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿದ್ಯುತ್ ದೀಪಾಲಂಕಾರದ ಜೊತೆಗೆ ಇಂಪಾದ ಸಂಗೀತ ಕೇಳುವಂತೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯ ನಿರ್ವಹಣೆಯನ್ನು ಮೂರು ವರ್ಷಗಳ ಕಾಲ ಇಂಡಿಯನ್ ಆಯಿಲ್ ಕಾರ್ಪೋರೇಷನ್ದವರೇ ಮಾಡಲಿದ್ದಾರೆ. ನಂತರ ಭಾರತೀಯ ಪುರಾತತ್ವ ಇಲಾಖೆಯವರು ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ, ಉಪ ಅಧೀಕ್ಷಕ ಶ್ರೀಗುರು ಭಾಗಿ, ಹಿರಿಯ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ದ ದೇಸಾಯಿ ಇದ್ದರು.</p>