<p><strong>ಬಾಗಲಕೋಟೆ</strong>: ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಚಾಲುಕ್ಯರ ವಿಶ್ವ ಪಾರಂಪರಿಕ ತಾಣವಾದ ಐತಿಹಾಸಿಕ ಪಟ್ಟದಕಲ್ಲಿನ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರದ ಮೆರುಗು ನೀಡಲಾಗಿದೆ.</p>.<p>ವಿದ್ಯುತ್ ದೀಪಾಲಂಕಾರದ ಡೆಮೊ ವೀಕ್ಷಣೆಯ ನಂತರ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ‘ಪಟ್ಟದಕಲ್ಲಿನಲ್ಲಿ ₹ 1.40 ಕೋಟಿ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ. ಸಂಜೆ 6ರಿಂದ ರಾತ್ರಿ 9ರವರೆಗೆ ದೀಪಾಲಂಕಾರ ಇರಲಿದೆ. ಭಾರತೀಯ ಪುರಾತತ್ವ ಇಲಾಖೆಯು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಿಆರ್.ಎಸ್ ಅನುದಾನದ ಅಡಿಯಲ್ಲಿ ಈ ವ್ಯವಸ್ಥೆ ಮಾಡಿದ್ದು, ದೀಪಗಳ ಜೋಡಣೆ ಕಾರ್ಯ ಪೂರ್ಣಗೊಂಡಿದ್ದು ಮೂರು ದಿನಗಳ ಕಾಲ ಡೆಮೊ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿದ್ಯುತ್ ದೀಪಾಲಂಕಾರದ ಜೊತೆಗೆ ಇಂಪಾದ ಸಂಗೀತ ಕೇಳುವಂತೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯ ನಿರ್ವಹಣೆಯನ್ನು ಮೂರು ವರ್ಷಗಳ ಕಾಲ ಇಂಡಿಯನ್ ಆಯಿಲ್ ಕಾರ್ಪೋರೇಷನ್ದವರೇ ಮಾಡಲಿದ್ದಾರೆ. ನಂತರ ಭಾರತೀಯ ಪುರಾತತ್ವ ಇಲಾಖೆಯವರು ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ, ಉಪ ಅಧೀಕ್ಷಕ ಶ್ರೀಗುರು ಭಾಗಿ, ಹಿರಿಯ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ದ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಚಾಲುಕ್ಯರ ವಿಶ್ವ ಪಾರಂಪರಿಕ ತಾಣವಾದ ಐತಿಹಾಸಿಕ ಪಟ್ಟದಕಲ್ಲಿನ ಸ್ಮಾರಕಗಳಿಗೆ ವಿದ್ಯುತ್ ದೀಪಾಲಂಕಾರದ ಮೆರುಗು ನೀಡಲಾಗಿದೆ.</p>.<p>ವಿದ್ಯುತ್ ದೀಪಾಲಂಕಾರದ ಡೆಮೊ ವೀಕ್ಷಣೆಯ ನಂತರ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ‘ಪಟ್ಟದಕಲ್ಲಿನಲ್ಲಿ ₹ 1.40 ಕೋಟಿ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗುತ್ತಿದೆ. ಸಂಜೆ 6ರಿಂದ ರಾತ್ರಿ 9ರವರೆಗೆ ದೀಪಾಲಂಕಾರ ಇರಲಿದೆ. ಭಾರತೀಯ ಪುರಾತತ್ವ ಇಲಾಖೆಯು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಸಿಆರ್.ಎಸ್ ಅನುದಾನದ ಅಡಿಯಲ್ಲಿ ಈ ವ್ಯವಸ್ಥೆ ಮಾಡಿದ್ದು, ದೀಪಗಳ ಜೋಡಣೆ ಕಾರ್ಯ ಪೂರ್ಣಗೊಂಡಿದ್ದು ಮೂರು ದಿನಗಳ ಕಾಲ ಡೆಮೊ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿದ್ಯುತ್ ದೀಪಾಲಂಕಾರದ ಜೊತೆಗೆ ಇಂಪಾದ ಸಂಗೀತ ಕೇಳುವಂತೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.</p>.<p>ವಿದ್ಯುತ್ ದೀಪಾಲಂಕಾರದ ವ್ಯವಸ್ಥೆಯ ನಿರ್ವಹಣೆಯನ್ನು ಮೂರು ವರ್ಷಗಳ ಕಾಲ ಇಂಡಿಯನ್ ಆಯಿಲ್ ಕಾರ್ಪೋರೇಷನ್ದವರೇ ಮಾಡಲಿದ್ದಾರೆ. ನಂತರ ಭಾರತೀಯ ಪುರಾತತ್ವ ಇಲಾಖೆಯವರು ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕ ರಮೇಶ ಮೂಲಿಮನಿ, ಉಪ ಅಧೀಕ್ಷಕ ಶ್ರೀಗುರು ಭಾಗಿ, ಹಿರಿಯ ಸಹಾಯಕ ಸಂರಕ್ಷಣಾಧಿಕಾರಿ ಅನಿರುದ್ದ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>