ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯ ಲೋಪ: ಅಮರಾವತಿ ಗ್ರಾ.ಪಂ ಪಿಡಿಒ ಅಮಾನತು

Last Updated 12 ನವೆಂಬರ್ 2019, 16:45 IST
ಅಕ್ಷರ ಗಾತ್ರ

ಬಾಗಲಕೋಟೆ: ಕರ್ತವ್ಯ ಲೋಪದ ಕಾರಣ ಹುನಗುಂದ ತಾಲ್ಲೂಕಿನ ಅಮರಾವತಿ ಗ್ರಾಮ ಪಂಚಾಯ್ತಿಯ ಅಭಿವೃದ್ದಿ ಅಧಿಕಾರಿ (ಪಿಡಿಒ) ಎಂ.ಆರ್.ದೊಡಮನಿ ಅವರನ್ನು ಜಿಲ್ಲಾ ಪಂಚಾಯ್ತಿ ಸಿಇಒ ಗಂಗೂಬಾಯಿ ಮಾನಕರ ಮಂಗಳವಾರ ಸೇವೆಯಿಂದ ಅಮಾನತು ಮಾಡಿದ್ದಾರೆ.

ಪಿಡಿಒ ದೊಡಮನಿ ಅವರುಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸದೇ ಮೇಲಧಿಕಾರಿಗಳ ಪೂರ್ವಾನುಮತಿ ಪಡೆಯದೇ ಅನಧಿಕೃತವಾಗಿಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದರು. ಪ್ರತಿ ಸಭೆಯಲ್ಲಿ ಎಚ್ಚರಿಕೆ ನೀಡಿದರು ಮೇಲಧಿಕಾರಿ ಆದೇಶ ಉಲ್ಲಂಘಿಸಿದ್ದರು. ಈ ಬಗ್ಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದರೂ ಸಹ ಉತ್ತರ ಸಲ್ಲಿಸದೇ ಇರುವ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿದ ನಂತರ ಕರ್ತವ್ಯದಲ್ಲಿ ನಿರ್ಲಕ್ಷತೆ ಮತ್ತು ಲೋಪದ ಆಪಾದನೆ ಮೇಲೆ ಅವರನ್ನು ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಸಿಇಒ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT