<p><strong>ಲೋಕಾಪುರ:</strong> ‘ಮಹಾತ್ಮರು, ಶಿವಶರಣರು, ಯೋಗಿಗಳ ಅನುಭಾವದ ನುಡಿಗಳನ್ನು ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಸಮಾಧಾನ ಪ್ರಾಪ್ತವಾಗುತ್ತದೆ’ ಎಂದು ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ಹೇಳಿದರು.</p>.<p>ಸಮೀಪದ ಕನಸಗೇರಿ ಗ್ರಾಮದಲ್ಲಿ ಬೆನಕಟ್ಟಿಯ ಹೇಮ ವೇಮನ ಸದ್ಬೋಧನ ಪೀಠದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ, ‘ಮನೆ ಮನದಲ್ಲಿ ವೇಮನರ 180ನೇ ಮಾಸಿಕ ತತ್ವ ಚಿಂತನ ಕಾರ್ಯಕ್ರಮ ಉದ್ಘಾಟಿಸಿ, 'ತೊರೆಯಬೇಕು ಊರ ವಿರಾಮವಿರದಾಗ...' ಎನ್ನುವ ವಚನ ಕುರಿತು ಮಾತನಾಡಿದರು.</p>.<p>ಮನುಷ್ಯ ಬರೀ ಸಂಸಾರದ ಜಂಜಾಟದಲ್ಲಿ ಸಿಲುಕಿ ಮನಸ್ಸಿನ ನೆಮ್ಮದಿಯನ್ನು ಕಳೆದುಕೊಂಡು ದು:ಖಿತನಾಗಿದ್ದಾನೆ. ಸಮಾಧಾನ, ಶಾಂತಿ, ನೆಮ್ಮದಿ ಇಲ್ಲದಂತಾಗಿ ಚಿಂತೆಯಲ್ಲಿದ್ದಾನೆ. ಇದಕ್ಕೆ ಕೊನೆಹಾಡಿ ಮನಸ್ಸಿಗೆ ಶಾಂತಿ, ನೆಮ್ಮದಿಯನ್ನು ಪಡೆಯಲು ಸತ್ಸಂಗದಲ್ಲಿ ಪಾಲ್ಗೊಳ್ಳಬೇಕು.</p>.<p>ಮುಧೋಳ ತಾಲ್ಲೂಕು ರಡ್ಡಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ ಬೇವೂರ ಮಾತನಾಡಿ, ಮಲ್ಲಮ್ಮ ಹಾಗೂ ವೇಮನರ ತತ್ವಾದರ್ಶಗಳನ್ನು ಪಾಲಿಸಿ ನಡೆಯಬೇಕು. ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡಿ ದೇಶದ ಆಸ್ತಿಯನ್ನಾಗಿ ಮಾಡಬೇಕು ಎಂದರು.</p>.<p>ಸಾನಿಧ್ಯ ವಹಿಸಿದ್ದ ದಾದನಟ್ಟಿ ಶಿವಾನಂದ ಮಠದ ನಿಜಾನಂದ ಸ್ವಾಮೀಜಿ, ಮನುಷ್ಯತ್ವದ ಬದುಕು ನಮ್ಮದಾಗಬೇಕು. ಪ್ರಪಂಚದಲ್ಲಿದ್ದುಕೊಂಡೇ ಪಾರಮಾರ್ಥ ಸಾಧಿಸಿ ಜೀವನ ಪಾವನಗೊಳಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಮಲ್ಲನಗೌಡ ಪಾಟೀಲ, ಭೀಮನಗೌಡ ಪಾಟೀಲ, ನಿವೃತ್ತ ಪ್ರಾಧ್ಯಾಪಕ ವಿನಾಯಕ ಪಾಟೀಲ, ನಿಂಗನಗೌಡ ಪಾಟೀಲ, ಕೃಷ್ಣಾ ಗಲಗಲಿ, ಲೋಕನಗೌಡ ಪಾಟೀಲ, ಮಲ್ಲಪ್ಪ ಮೇಲಪ್ಪನವರ, ಮಲ್ಲನಗೌಡ ಪಾಟೀಲ ಅತಿಥಿಗಳಾಗಿದ್ದರು.</p>.<p>ಬೆನಕಟ್ಟಿಯ ಹೇಮರಡ್ಡಿ ಮಲ್ಲಮ್ಮ ಭಜನಾ ತಂಡದವರು ವೇಮನ ವಚನ ಪಠಣ ಮಾಡಿದರು. ವಕೀಲ ಮಹಾದೇವ ಯರಡ್ಡಿ ಸ್ವಾಗತಿಸಿದರು. ಪಶು ವೈದ್ಯಾಧಿಕಾರಿ ಡಿ.ಎಂ.ಬೆಣ್ಣೂರ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಎಚ್.ಬಿ.ಗೋಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲೋಕಾಪುರ:</strong> ‘ಮಹಾತ್ಮರು, ಶಿವಶರಣರು, ಯೋಗಿಗಳ ಅನುಭಾವದ ನುಡಿಗಳನ್ನು ಆಲಿಸುವುದರಿಂದ ಮನಸ್ಸಿಗೆ ನೆಮ್ಮದಿ, ಸಮಾಧಾನ ಪ್ರಾಪ್ತವಾಗುತ್ತದೆ’ ಎಂದು ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ಹೇಳಿದರು.</p>.<p>ಸಮೀಪದ ಕನಸಗೇರಿ ಗ್ರಾಮದಲ್ಲಿ ಬೆನಕಟ್ಟಿಯ ಹೇಮ ವೇಮನ ಸದ್ಬೋಧನ ಪೀಠದ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ, ‘ಮನೆ ಮನದಲ್ಲಿ ವೇಮನರ 180ನೇ ಮಾಸಿಕ ತತ್ವ ಚಿಂತನ ಕಾರ್ಯಕ್ರಮ ಉದ್ಘಾಟಿಸಿ, 'ತೊರೆಯಬೇಕು ಊರ ವಿರಾಮವಿರದಾಗ...' ಎನ್ನುವ ವಚನ ಕುರಿತು ಮಾತನಾಡಿದರು.</p>.<p>ಮನುಷ್ಯ ಬರೀ ಸಂಸಾರದ ಜಂಜಾಟದಲ್ಲಿ ಸಿಲುಕಿ ಮನಸ್ಸಿನ ನೆಮ್ಮದಿಯನ್ನು ಕಳೆದುಕೊಂಡು ದು:ಖಿತನಾಗಿದ್ದಾನೆ. ಸಮಾಧಾನ, ಶಾಂತಿ, ನೆಮ್ಮದಿ ಇಲ್ಲದಂತಾಗಿ ಚಿಂತೆಯಲ್ಲಿದ್ದಾನೆ. ಇದಕ್ಕೆ ಕೊನೆಹಾಡಿ ಮನಸ್ಸಿಗೆ ಶಾಂತಿ, ನೆಮ್ಮದಿಯನ್ನು ಪಡೆಯಲು ಸತ್ಸಂಗದಲ್ಲಿ ಪಾಲ್ಗೊಳ್ಳಬೇಕು.</p>.<p>ಮುಧೋಳ ತಾಲ್ಲೂಕು ರಡ್ಡಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ ಬೇವೂರ ಮಾತನಾಡಿ, ಮಲ್ಲಮ್ಮ ಹಾಗೂ ವೇಮನರ ತತ್ವಾದರ್ಶಗಳನ್ನು ಪಾಲಿಸಿ ನಡೆಯಬೇಕು. ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡಿ ದೇಶದ ಆಸ್ತಿಯನ್ನಾಗಿ ಮಾಡಬೇಕು ಎಂದರು.</p>.<p>ಸಾನಿಧ್ಯ ವಹಿಸಿದ್ದ ದಾದನಟ್ಟಿ ಶಿವಾನಂದ ಮಠದ ನಿಜಾನಂದ ಸ್ವಾಮೀಜಿ, ಮನುಷ್ಯತ್ವದ ಬದುಕು ನಮ್ಮದಾಗಬೇಕು. ಪ್ರಪಂಚದಲ್ಲಿದ್ದುಕೊಂಡೇ ಪಾರಮಾರ್ಥ ಸಾಧಿಸಿ ಜೀವನ ಪಾವನಗೊಳಿಸಿಕೊಳ್ಳಬೇಕು ಎಂದು ಹೇಳಿದರು.</p>.<p>ಮಲ್ಲನಗೌಡ ಪಾಟೀಲ, ಭೀಮನಗೌಡ ಪಾಟೀಲ, ನಿವೃತ್ತ ಪ್ರಾಧ್ಯಾಪಕ ವಿನಾಯಕ ಪಾಟೀಲ, ನಿಂಗನಗೌಡ ಪಾಟೀಲ, ಕೃಷ್ಣಾ ಗಲಗಲಿ, ಲೋಕನಗೌಡ ಪಾಟೀಲ, ಮಲ್ಲಪ್ಪ ಮೇಲಪ್ಪನವರ, ಮಲ್ಲನಗೌಡ ಪಾಟೀಲ ಅತಿಥಿಗಳಾಗಿದ್ದರು.</p>.<p>ಬೆನಕಟ್ಟಿಯ ಹೇಮರಡ್ಡಿ ಮಲ್ಲಮ್ಮ ಭಜನಾ ತಂಡದವರು ವೇಮನ ವಚನ ಪಠಣ ಮಾಡಿದರು. ವಕೀಲ ಮಹಾದೇವ ಯರಡ್ಡಿ ಸ್ವಾಗತಿಸಿದರು. ಪಶು ವೈದ್ಯಾಧಿಕಾರಿ ಡಿ.ಎಂ.ಬೆಣ್ಣೂರ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಎಚ್.ಬಿ.ಗೋಣಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>