ಸಾಮಾನ್ಯ ಮೀಸಲಾತಿ ಹೊಂದಿರುವ ಇಲ್ಲಿ 10ಕ್ಕೂ ಹೆಚ್ಚು ಆಕಾಂಕ್ಷಿಗಳ ನಡುವೆ ಪಕ್ಷದ ಮುಖಂಡರು ನೀಲಕಂಠ ಅವರಿಗೆ ಬಿ ಫಾರಂ ನೀಡಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಅಭಿಮಾನಿ ಆಗಿರುವ ನೀಲಕಂಠ ಪಟ್ಟಣದಲ್ಲಿ ನಡೆಯುವ ಹಬ್ಬ ಹರಿದಿನ, ಜಾತ್ರೆ ಉತ್ಸವಗಳಲ್ಲಿ ಮುಂಚೂಣಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದರು.