<p><strong>ಹುನಗುಂದ</strong> : ಜನಭಾಷೆಯ ಮೂಲಕ ಮೌಲಿಕ ವಚನಗಳನ್ನು ರಚಿಸಿ ಸಮಾಜ ಪರಿವರ್ತನೆಗೆ ಕಾರಣರಾದ ಮಹಾನ್ ದಾರ್ಶನಿಕ ವೇಮನರ ತತ್ವಾದರ್ಶಗಳು ಎಲ್ಲ ಕಾಲಕ್ಕೂ ಪ್ರಸ್ತುತವಾದವುಗಳು ಎಂದು ನಿವೃತ್ತ ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಹೇಳಿದ್ದಾರೆ.</p>.<p>ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಮಹಾಯೋಗಿ ವೇಮನರ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.</p>.<p>ಸಮಾಜದಲ್ಲಿನ ಮೂಢನಂಬಿಕೆ, ಕಂದಾಚಾರ, ಜಾತಿ ಅಸಮಾನತೆ, ಸಮಾಜದ ಸ್ವಾಸ್ತ್ಯಕ್ಕೆ ಅಡ್ಡಿಯಾಗುತ್ತಿದ್ದು, ಅವುಗಳ ನಿರ್ಮೂಲನೆಯಿಂದ ಮಾತ್ರ ಸಾಮಾಜಿಕ ಪರಿವರ್ತನೆ ಸಾಧ್ಯ . ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ವ್ಯಕ್ತಿಯ ವ್ಯಕ್ತಿತ್ವಕ್ಕೆ ಮೆರಗು ತರುತ್ತಿದ್ದು ಸತ್ಸಂಗ, ಯೋಗದ ಮೂಲಕ ಮನಸ್ಸನ್ನು ಶುದ್ಧೀಕರಿಕೊಳ್ಳಬೇಕೆಂಬ ವೇಮನರ ಸಂದೇಶ ನಮಗೆಲ್ಲ ದಾರಿ ದೀಪವಾಗಬೇಕಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮಾತನಾಡಿ, ವ್ಯಕ್ತಿ ಎಷ್ಟು ದಿನ ಬದುಕಿದ್ದ ಎನ್ನುವುದಕ್ಕಿಂತ ಹೇಗೆ ಬದುಕಿದ್ದ ಎನ್ನುವುದು ಮಹತ್ವದ್ದಾಗಿದ್ದು, ಸಮಾಜಕ್ಕೆ ಉತ್ತಮ ಸಂದೇಶ ನೀಡಿದ ವೇಮನ ಮತ್ತು ಅವರ ಚಿಂತನೆಗಳು ಸದಾ ಸ್ಮರಣೀಯ ಎಂದರು.</p>.<p>ರೆಡ್ಡಿ ಸಮಾಜದ ಅಧ್ಯಕ್ಷರಾದ ಸಿ.ಎಂ.ಕಾಮಾ, ಸಮಾಜದ ಮುಖಂಡರಾದ ರಾಮನಗೌಡ ಬೆಳ್ಳಿಹಾಳ, ಎಂ.ಬಿ.ದೇವರಡ್ಡಿ, ಹನಮಗೌಡ ಹನಮಗೌಡ್ರ, ತಿಮ್ಮಣ್ಣ ಭಾವಿಕಟ್ಟಿ, ವೆಂಕಣ್ಣ ದಾದ್ಮಿ, ಮಹೇಶ ಬೆಳ್ಳಿಹಾಳ, ಗ್ರೇಡ್-2 ತಹಶೀಲ್ದಾರ ಮಹೇಶ ಸಂದಿಗವಾಡ ಇದ್ದರು.</p>.<p>ಶ್ರೀಶೈಲ ಗುರುವಿನಮಠ ಸ್ವಾಗತಿಸಿದರು. ಪುರಸಭೆ ಮಾಜಿ ಸದಸ್ಯ ಮಹೇಶ ಬೆಳ್ಳಿಹಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿರಸ್ತೇದಾರ ಶ್ರವಣಕುಮಾರ ಮುಂಡೇವಾಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong> : ಜನಭಾಷೆಯ ಮೂಲಕ ಮೌಲಿಕ ವಚನಗಳನ್ನು ರಚಿಸಿ ಸಮಾಜ ಪರಿವರ್ತನೆಗೆ ಕಾರಣರಾದ ಮಹಾನ್ ದಾರ್ಶನಿಕ ವೇಮನರ ತತ್ವಾದರ್ಶಗಳು ಎಲ್ಲ ಕಾಲಕ್ಕೂ ಪ್ರಸ್ತುತವಾದವುಗಳು ಎಂದು ನಿವೃತ್ತ ಉಪನ್ಯಾಸಕ ಸಿದ್ದಲಿಂಗಪ್ಪ ಬೀಳಗಿ ಹೇಳಿದ್ದಾರೆ.</p>.<p>ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಮಹಾಯೋಗಿ ವೇಮನರ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.</p>.<p>ಸಮಾಜದಲ್ಲಿನ ಮೂಢನಂಬಿಕೆ, ಕಂದಾಚಾರ, ಜಾತಿ ಅಸಮಾನತೆ, ಸಮಾಜದ ಸ್ವಾಸ್ತ್ಯಕ್ಕೆ ಅಡ್ಡಿಯಾಗುತ್ತಿದ್ದು, ಅವುಗಳ ನಿರ್ಮೂಲನೆಯಿಂದ ಮಾತ್ರ ಸಾಮಾಜಿಕ ಪರಿವರ್ತನೆ ಸಾಧ್ಯ . ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ವ್ಯಕ್ತಿಯ ವ್ಯಕ್ತಿತ್ವಕ್ಕೆ ಮೆರಗು ತರುತ್ತಿದ್ದು ಸತ್ಸಂಗ, ಯೋಗದ ಮೂಲಕ ಮನಸ್ಸನ್ನು ಶುದ್ಧೀಕರಿಕೊಳ್ಳಬೇಕೆಂಬ ವೇಮನರ ಸಂದೇಶ ನಮಗೆಲ್ಲ ದಾರಿ ದೀಪವಾಗಬೇಕಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮಾತನಾಡಿ, ವ್ಯಕ್ತಿ ಎಷ್ಟು ದಿನ ಬದುಕಿದ್ದ ಎನ್ನುವುದಕ್ಕಿಂತ ಹೇಗೆ ಬದುಕಿದ್ದ ಎನ್ನುವುದು ಮಹತ್ವದ್ದಾಗಿದ್ದು, ಸಮಾಜಕ್ಕೆ ಉತ್ತಮ ಸಂದೇಶ ನೀಡಿದ ವೇಮನ ಮತ್ತು ಅವರ ಚಿಂತನೆಗಳು ಸದಾ ಸ್ಮರಣೀಯ ಎಂದರು.</p>.<p>ರೆಡ್ಡಿ ಸಮಾಜದ ಅಧ್ಯಕ್ಷರಾದ ಸಿ.ಎಂ.ಕಾಮಾ, ಸಮಾಜದ ಮುಖಂಡರಾದ ರಾಮನಗೌಡ ಬೆಳ್ಳಿಹಾಳ, ಎಂ.ಬಿ.ದೇವರಡ್ಡಿ, ಹನಮಗೌಡ ಹನಮಗೌಡ್ರ, ತಿಮ್ಮಣ್ಣ ಭಾವಿಕಟ್ಟಿ, ವೆಂಕಣ್ಣ ದಾದ್ಮಿ, ಮಹೇಶ ಬೆಳ್ಳಿಹಾಳ, ಗ್ರೇಡ್-2 ತಹಶೀಲ್ದಾರ ಮಹೇಶ ಸಂದಿಗವಾಡ ಇದ್ದರು.</p>.<p>ಶ್ರೀಶೈಲ ಗುರುವಿನಮಠ ಸ್ವಾಗತಿಸಿದರು. ಪುರಸಭೆ ಮಾಜಿ ಸದಸ್ಯ ಮಹೇಶ ಬೆಳ್ಳಿಹಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿರಸ್ತೇದಾರ ಶ್ರವಣಕುಮಾರ ಮುಂಡೇವಾಡಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>