ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಲು ಅವರು ಕಳೆದ ಫೆಬ್ರುವರಿ 2ರಿಂದ ಚಾಮರಾಜನಗರ ಜಿಲ್ಲೆ ಮಲೆಮಹಾದೇಶ್ವರ ಬೆಟ್ಟದಿಂದ ದೆಹಲಿಗೆ ಪಾದಯಾತ್ರೆ ಹೊರಟಿದ್ದರು. ಈಗಾಗಲೇ ರಾಜ್ಯದ 31 ಜಿಲ್ಲೆಗಳನ್ನು ಸುತ್ತಾಡಿ ಕಾಯ್ದೆಯ ಬಗ್ಗೆ ಜನರ ಗಮನ ಸೆಳೆದಿದ್ದ ಅವರು,ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ತಾನ, ಉತ್ತರ ಪ್ರದೇಶ ಮೂಲಕ 5100 ಕಿ.ಮೀ ಕ್ರಮಿಸಿ ದೆಹಲಿಗೆ 100 ಕಿ.ಮೀ ದೂರದಲ್ಲಿದ್ದರು.