ಮೂಲತಃ ಕೊಪ್ಪಳ ಸಮೀಪದ ಮೆಟಲಗುಡ್ಡದವರಾದ ಮಂಜುನಾಥ ಈ ಮೊದಲು ದಾವಣಗೆರೆಯಲ್ಲಿ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೆಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ವರ್ಷದ ಹಿಂದಷ್ಟೇ ಬಾಗಲಕೋಟೆಗೆ ವರ್ಗಾವಣೆಯಾಗಿ ಬಂದಿದ್ದರು. ಅವರನ್ನು ಎಸ್ಪಿ ನಿವಾಸದ ಭದ್ರತೆಗೆ ನಿಯೋಜಿಸಲಾಗಿತ್ತು. ಮಂಜುನಾಥ ಅವಿವಾಹಿತರಾಗಿದ್ದರು. ಘಟನೆ ಬೆಳಗಿನ ಜಾವ ನಡೆದಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ.