ಬಾಗಲಕೋಟೆ: ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಜಮಖಂಡಿಯ ಯಲ್ಲಪ್ಪ ಗಡ್ಡಿ, ಮುಧೋಳದ ದುರ್ಗಪ್ಪ ವಾಲ್ಮೀಕಿ ಬಂಧಿತರು. ಇಬ್ಬರಿಂದ ₹1 ಲಕ್ಷ 94 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ. ಬಂಧಿತರಿಬ್ಬರು ವೃತ್ತಿಪರ ಕಳ್ಳರಾಗಿದ್ದು ಹಲವು ಠಾಣೆಗಳಲ್ಲಿ ಹಲವು ಪ್ರಕರಣ ದಾಖಲಾಗಿವೆ.
ಬನಹಟ್ಟಿ ಪೊಲೀಸರು ಕಳ್ಳರನ್ನು ಬಂಧಿಸಿದ್ದಾರೆ. ನ.1 ರಂದು ಉಮಾಶ್ರೀ ಯವರ ರಬಕವಿಯ ಮನೆಯಲ್ಲಿ 2 ಲಕ್ಷ ರೂ. ಕಳ್ಳತನ ಮಾಡಲಾಗಿತ್ತು.