<p><strong>ಬೀಳಗಿ</strong>: ಪೊಲೀಸ್ ಅಂದರೆ ಭಯ ಅಲ್ಲ ಅದು ಭರವಸೆ. ಜನರಿಗೆ ಭದ್ರತೆ ನೀಡಲು, ಕಾನೂನು ಸುವ್ಯವಸ್ಥೆ ಕಾಪಾಡಲು ಸದಾ ಸಿದ್ದವಾಗಿದೆ ಎಂದು ಬೀಳಗಿ ಸರ್ಕಲ್ ಇನ್ಸ್ಪೆಕ್ಟರ್ ಎಚ್.ಬಿ. ಸಣಮನಿ ಹೇಳಿದರು.</p>.<p>ಸ್ಥಳೀಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಿಗಾಗಿ ಇತ್ತೀಚೆಗೆ ಏರ್ಪಡಿಸಿದ ಶಾಲಾ ಸುರಕ್ಷತೆ ಹಾಗೂ ಪೋಕ್ಸೊ ಕಾಯ್ದೆ ಕುರಿತು ಮಾಹಿತಿ ಒದಗಿಸುವ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ವಿವಿಧ ಶಾಲೆಗಳ ಮುಖ್ಯ ಗುರುಗಳ ಸಮಸ್ಯೆಗಳನ್ನು ಆಲಿಸಿ ಶಾಲಾ ಆವರಣದ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಕಂಪ್ಯೂಟರ್ ಮತ್ತು ಇಂಟರ್ನೆಟ್ನಂತಹ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮಾಡುವ ಅಪರಾಧ ಚಟುವಟಿಕೆಗಳು, ವೈಯಕ್ತಿಕ ಡೇಟಾ ಕದಿಯುವುದು, ಆರ್ಥಿಕ ವಂಚನೆ ಮಾಡುವುದು, ದುರುದ್ದೇಶಪೂರಿತ ಸಾಫ್ಟ್ವೇರ್ ಹರಡುವುದು, ಡಿಜಿಟಲ್ ಅರೆಸ್ಟ್ ಇತರೆ ಆನ್ಲೈನ್ ಅಪರಾಧಗಳ ಜಾಗರೂಕತೆಯ ಕ್ರಮಗಳು ಹಾಗೂ ಸೈಬರ್ ಕಾನೂನು ಬಗ್ಗೆ ತಿಳಿಸಿದರು.</p>.<p>ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ಇನ್ನಿತರ ಯಾವುದೇ ತುರ್ತು ಸೇವೆಗಳಿಗಾಗಿ ದೇಶಕ್ಕೊಂದೇ ನಂಬರ್ '112' ಜಾರಿಗೆ ಬಂದಿದ್ದು ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಕರೆ ನೀಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಆದಾಪೂರ ಮಾತನಾಡಿ, ಶಾಲೆಯಲ್ಲಿರುವ ಮಕ್ಕಳು ಹಾಗೂ ಶಿಕ್ಷಕರಿಗೆ ಸುರಕ್ಷತೆ ಒದಗಿಸುವುದು ಅತ್ಯವಶ್ಯಕವಾಗಿದೆ. ಪೊಲೀಸ್ ಇಲಾಖೆ ಸಹಕಾರ ನೀಡಬೇಕು ಎಂದು ತಿಳಿಸಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬ್ಳೆ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಶಿವಾಜಿ ನಾಯಕ , ಶಿಕ್ಷಣ ಸಂಯೋಜಕ ಜಗದೀಶ ಖೋತ, ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯ ಸಿದ್ದು ಬೂದಿಹಾಳ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ಪಾಟೀಲ, ಜಿಲ್ಲಾ ಕಾರ್ಯದರ್ಶಿ ಜಿ.ಎಲ್. ಮುಲ್ಲಾ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಬಾರಾಗಣಿ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ</strong>: ಪೊಲೀಸ್ ಅಂದರೆ ಭಯ ಅಲ್ಲ ಅದು ಭರವಸೆ. ಜನರಿಗೆ ಭದ್ರತೆ ನೀಡಲು, ಕಾನೂನು ಸುವ್ಯವಸ್ಥೆ ಕಾಪಾಡಲು ಸದಾ ಸಿದ್ದವಾಗಿದೆ ಎಂದು ಬೀಳಗಿ ಸರ್ಕಲ್ ಇನ್ಸ್ಪೆಕ್ಟರ್ ಎಚ್.ಬಿ. ಸಣಮನಿ ಹೇಳಿದರು.</p>.<p>ಸ್ಥಳೀಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಿಗಾಗಿ ಇತ್ತೀಚೆಗೆ ಏರ್ಪಡಿಸಿದ ಶಾಲಾ ಸುರಕ್ಷತೆ ಹಾಗೂ ಪೋಕ್ಸೊ ಕಾಯ್ದೆ ಕುರಿತು ಮಾಹಿತಿ ಒದಗಿಸುವ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ತಾಲ್ಲೂಕಿನ ವಿವಿಧ ಶಾಲೆಗಳ ಮುಖ್ಯ ಗುರುಗಳ ಸಮಸ್ಯೆಗಳನ್ನು ಆಲಿಸಿ ಶಾಲಾ ಆವರಣದ ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಕಂಪ್ಯೂಟರ್ ಮತ್ತು ಇಂಟರ್ನೆಟ್ನಂತಹ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮಾಡುವ ಅಪರಾಧ ಚಟುವಟಿಕೆಗಳು, ವೈಯಕ್ತಿಕ ಡೇಟಾ ಕದಿಯುವುದು, ಆರ್ಥಿಕ ವಂಚನೆ ಮಾಡುವುದು, ದುರುದ್ದೇಶಪೂರಿತ ಸಾಫ್ಟ್ವೇರ್ ಹರಡುವುದು, ಡಿಜಿಟಲ್ ಅರೆಸ್ಟ್ ಇತರೆ ಆನ್ಲೈನ್ ಅಪರಾಧಗಳ ಜಾಗರೂಕತೆಯ ಕ್ರಮಗಳು ಹಾಗೂ ಸೈಬರ್ ಕಾನೂನು ಬಗ್ಗೆ ತಿಳಿಸಿದರು.</p>.<p>ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ಇನ್ನಿತರ ಯಾವುದೇ ತುರ್ತು ಸೇವೆಗಳಿಗಾಗಿ ದೇಶಕ್ಕೊಂದೇ ನಂಬರ್ '112' ಜಾರಿಗೆ ಬಂದಿದ್ದು ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಕರೆ ನೀಡಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಆದಾಪೂರ ಮಾತನಾಡಿ, ಶಾಲೆಯಲ್ಲಿರುವ ಮಕ್ಕಳು ಹಾಗೂ ಶಿಕ್ಷಕರಿಗೆ ಸುರಕ್ಷತೆ ಒದಗಿಸುವುದು ಅತ್ಯವಶ್ಯಕವಾಗಿದೆ. ಪೊಲೀಸ್ ಇಲಾಖೆ ಸಹಕಾರ ನೀಡಬೇಕು ಎಂದು ತಿಳಿಸಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬ್ಳೆ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಶಿವಾಜಿ ನಾಯಕ , ಶಿಕ್ಷಣ ಸಂಯೋಜಕ ಜಗದೀಶ ಖೋತ, ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯ ಸಿದ್ದು ಬೂದಿಹಾಳ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ವಿ. ಪಾಟೀಲ, ಜಿಲ್ಲಾ ಕಾರ್ಯದರ್ಶಿ ಜಿ.ಎಲ್. ಮುಲ್ಲಾ, ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಬಾರಾಗಣಿ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>