ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ನ ಮಾಜಿ ಸಚಿವ ಹಾಗೂ ನಟ ರೆಬಲ್ ಸ್ಟಾರ್ ಅಂಬರೀಶ್ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮಂಡ್ಯ ಕ್ಷೇತ್ರದಿಂದ ಟಿಕೆಟ್ ಘೋಷಿಸಿ, ಬಿ ಫಾರಂ ಕೊಟ್ಟು ಕಾಂಗ್ರೆಸ್ ಘಟಾನುಘಟಿ ನಾಯಕರು ಟಿಕೆಟ್ ಹಿಡಿದು ಎಷ್ಟೇ ಅಲೆದಾಡಿದರೂ ಕೈಗೆ ಸಿಗದ ಅಂಬರೀಶ್ ಇದೀಗ ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಂಬಿ ಅಪಾರ್ಟ್ಮೆಂಟ್ನಲ್ಲಿ ಅಂಬರೀಶ್ ಅವರನ್ನ ಕುಮಾರಸ್ವಾಮಿ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಡಿಸಿ ತಮ್ಮಣ್ಣ ಅವರ ಪುತ್ರ ಹಾಗೂ ಶರವಣ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ.
ಈ ಮಹತ್ವದ ಮಾತುಕತೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.