ಜಿಲ್ಲಾಡಳಿತದ ಆದೇಶ: ಜಿಲ್ಲಾಧಿಕಾರಿ ಕೆ.ಜಿ.ಶಾಂತರಾಮ್ ಆದೇಶ ಹೊರಡಿಸಿದ್ದು, ಕೆರೆ, ಬಾವಿ, ನದಿ, ಹಳ್ಳ ಸೇರಿದಂತೆಜಿಲ್ಲೆಯ ಯಾವುದೇ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ಮಾಡಿದ ವಿಗ್ರಹಗಳನ್ನು ವಿಸರ್ಜಿಸುವಂತಿಲ್ಲ ಎಂದು ಹೇಳಿದ್ದಾರೆ. ಆದೇಶ ಉಲ್ಲಂಘಿಸಿದಲ್ಲಿ ₹10 ಸಾವಿರ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.