ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಮಸೀದಿಯಲ್ಲಿ ಮದ್ದು–ಗುಂಡು ಸಂಗ್ರಹಿಸಿಡುವ ವಿಚಾರ ಬಹಳ ಗಂಭೀರವಾದದ್ದು, ಅದರ ಬಗ್ಗೆ ರೇಣುಕಾಚಾರ್ಯ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಿ. ಕೇಂದ್ರ ಹಾಗೂ ರಾಜ್ಯದಲ್ಲಿ ಅವರದ್ದೇ ಸರ್ಕಾರ ಇರುವುದರಿಂದ ತನಿಖೆಯೂ ನಡೆಯಲಿ. ಇಲ್ಲದಿದ್ದರೆ ಉಡಾಫೆ ಹೇಳಿಕೆ ನೀಡಿದ್ದೇನೆ ಎಂದು ಅವರು ರಾಜ್ಯದ ಜನರ ಕ್ಷಮೆ ಯಾಚಿಸಲಿ‘ ಎಂದು ಒತ್ತಾಯಿಸಿದರು.