<p><strong>ಬಾಗಲಕೋಟೆ:</strong> ರಾಜ್ಯ ಸರ್ಕಾರ ರಚನೆ ಸಂದರ್ಭದಲ್ಲಿ ಒಪ್ಪಂದ ಆಗಿದ್ದರೆ ಆ ಪ್ರಕಾರ ಅಧಿಕಾರ ಬಿಟ್ಟುಕೊಡಬೇಕು ಎಂದು ಶ್ರೀಶೈಲ ಪೀಠದ ಚೆನ್ನ ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಏನು ಒಪ್ಪಂದ ಆಗಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಯಾರು ಒಪ್ಪಂದ ಮಾಡಿಕೊಂಡಿದ್ದಾರೆ ಅವರಿಗೆ ಮಾತ್ರ ಸತ್ಯ ಗೊತ್ತಿದೆ’ ಎಂದರು.</p>.<p>ಒಪ್ಪಂದ ಆಗಿದ್ದರೆ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಬಹುದು. ಪಕ್ಷದ ಸಂಘಟನೆಯಲ್ಲಿ ಅವರ ಪಾತ್ರವೂ ಇದೆ ಎಂದು ಹೇಳಿದರು.</p>.<p>ಒಪ್ಪಂದಗಳು ಮುರಿದುಬಿದ್ದಿದ್ದಕ್ಕೆ, ಒಪ್ಪಂದದ ಪ್ರಕಾರ ನಡೆದುಕೊಳ್ಳಲಾರದ್ದಕ್ಕೆ ಸರ್ಕಾರಗಳೇ ಉರುಳಿ ಬಿದ್ದಿವೆ. ಹಾಗೆ ಆಗಬಾರದು ಎಂದರೆ ಒಪ್ಪಂದದ ಪ್ರಕಾರ ನಡೆದುಕೊಳ್ಳುವುದು ಒಳ್ಳೆಯದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ರಾಜ್ಯ ಸರ್ಕಾರ ರಚನೆ ಸಂದರ್ಭದಲ್ಲಿ ಒಪ್ಪಂದ ಆಗಿದ್ದರೆ ಆ ಪ್ರಕಾರ ಅಧಿಕಾರ ಬಿಟ್ಟುಕೊಡಬೇಕು ಎಂದು ಶ್ರೀಶೈಲ ಪೀಠದ ಚೆನ್ನ ಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಏನು ಒಪ್ಪಂದ ಆಗಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಯಾರು ಒಪ್ಪಂದ ಮಾಡಿಕೊಂಡಿದ್ದಾರೆ ಅವರಿಗೆ ಮಾತ್ರ ಸತ್ಯ ಗೊತ್ತಿದೆ’ ಎಂದರು.</p>.<p>ಒಪ್ಪಂದ ಆಗಿದ್ದರೆ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಬಹುದು. ಪಕ್ಷದ ಸಂಘಟನೆಯಲ್ಲಿ ಅವರ ಪಾತ್ರವೂ ಇದೆ ಎಂದು ಹೇಳಿದರು.</p>.<p>ಒಪ್ಪಂದಗಳು ಮುರಿದುಬಿದ್ದಿದ್ದಕ್ಕೆ, ಒಪ್ಪಂದದ ಪ್ರಕಾರ ನಡೆದುಕೊಳ್ಳಲಾರದ್ದಕ್ಕೆ ಸರ್ಕಾರಗಳೇ ಉರುಳಿ ಬಿದ್ದಿವೆ. ಹಾಗೆ ಆಗಬಾರದು ಎಂದರೆ ಒಪ್ಪಂದದ ಪ್ರಕಾರ ನಡೆದುಕೊಳ್ಳುವುದು ಒಳ್ಳೆಯದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>